<p><strong>ದಾಂಡೇಲಿ:</strong> ಉತ್ತರ ಕನ್ನಡ ಜಿಲ್ಲಾ ಬಾಡಿ ಬಿಲ್ಡಿಂಗ್ ಮತ್ತು ಫಿಟ್ನೆಸ್ ಅಸೋಸಿಯೇಷನ್ ಹಾಗೂ ನಗರದ ರೋಟರಿ ಕ್ಲಬ್ ಸಹಯೋಗದೊಂದಿಗೆ ರಾಜ್ಯ ಮಟ್ಟದ ಮಿಸ್ಟರ್ ದಾಂಡೇಲಿ ಸೀಸನ್– 2 ದೇಹಧಾರ್ಡ್ಯ ಸ್ಪರ್ಧೆಯನ್ನು ಫೆ.8ರಂದು ಸಂಜೆ 5 ಗಂಟೆಗೆ ದಾಂಡೇಲಿಯ ಹಳೆ ನಗರಸಭೆಯ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ದಾಂಡೇಲಿಯ ರೋಟರಿ ಕ್ಲಬ್ ಅಧ್ಯಕ್ಷ ಅಶುತೋಷ್ ಕುಮಾರ್ ರಾಯ್ ತಿಳಿಸಿದರು.</p>.<p>ನಗರದ ಪ್ರವಾಸಿ ಮಂದಿರದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿ, ಮಾತನಾಡಿ, ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶಾಸಕ ಆರ್.ವಿ.ದೇಶಪಾಂಡೆ ಹಾಗೂ ರಾಷ್ಟ್ರಮಟ್ಟದ ದೇಹಧಾರ್ಡ್ಯ ಪಟು ಗೋವಾದ ನಿವೇದ್ ಭಾಗವಹಿಸಲಿದ್ದಾರೆ.</p>.<p>ಯುವಜನತೆಯಲ್ಲಿ ಆರೋಗ್ಯ ಜಾಗೃತಿಯನ್ನು ಮೂಡಿಸುವ ಉದ್ದೇಶದಡಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ದಾಂಡೇಲಿ ಹಾಗೂ ದಾಂಡೇಲಿಯ ಸುತ್ತಮುತ್ತಲ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದ್ದಾರೆ.</p>.<p>ರೋಟರಿ ಕ್ಲಬ್ನ ಪ್ರಮುಖರಾದ ಎಸ್.ಜಿ.ಬಿರಾದಾರ ಹಾಗೂ ಉಸ್ಮಾನ್ ಮುನ್ನಾ ವಹಾಬ್ ಮಾತನಾಡಿ, ಅತ್ಯಂತ ವಿಶಿಷ್ಟ ಹಾಗೂ ಶಿಸ್ತುಬದ್ಧವಾಗಿ ನಡೆಯಲಿರುವ ಈ ಸ್ಪರ್ಧೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕು. ಸದೃಢ ಆರೋಗ್ಯ ನಿರ್ಮಾಣದ ಕುರಿತಂತೆ ಜನ ಜಾಗೃತಿಯನ್ನು ಮೂಡಿಸುವ ಉದ್ದೇಶದಿಂದ ಈ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು, ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದರು.</p>.<p>ರೋಟರಿ ಕ್ಲಬ್ ನ ಖಜಾಂಚಿ ಲಿಯೋ ಪಿಂಟೋ, ಆರ್.ಪಿ.ನಾಯ್ಕ, ದೇಹಧಾರ್ಡ್ಯ ಪಟುಗಳಾದ ಯೂಸುಪ್ ಶೇಖ, ಮೆಹಬೂಬು ಪೊಲೀಸ್ ಮತ್ತು ಬಿಲಾಲ್ ಎಚ್.ಜಮದಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾಂಡೇಲಿ:</strong> ಉತ್ತರ ಕನ್ನಡ ಜಿಲ್ಲಾ ಬಾಡಿ ಬಿಲ್ಡಿಂಗ್ ಮತ್ತು ಫಿಟ್ನೆಸ್ ಅಸೋಸಿಯೇಷನ್ ಹಾಗೂ ನಗರದ ರೋಟರಿ ಕ್ಲಬ್ ಸಹಯೋಗದೊಂದಿಗೆ ರಾಜ್ಯ ಮಟ್ಟದ ಮಿಸ್ಟರ್ ದಾಂಡೇಲಿ ಸೀಸನ್– 2 ದೇಹಧಾರ್ಡ್ಯ ಸ್ಪರ್ಧೆಯನ್ನು ಫೆ.8ರಂದು ಸಂಜೆ 5 ಗಂಟೆಗೆ ದಾಂಡೇಲಿಯ ಹಳೆ ನಗರಸಭೆಯ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ದಾಂಡೇಲಿಯ ರೋಟರಿ ಕ್ಲಬ್ ಅಧ್ಯಕ್ಷ ಅಶುತೋಷ್ ಕುಮಾರ್ ರಾಯ್ ತಿಳಿಸಿದರು.</p>.<p>ನಗರದ ಪ್ರವಾಸಿ ಮಂದಿರದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿ, ಮಾತನಾಡಿ, ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶಾಸಕ ಆರ್.ವಿ.ದೇಶಪಾಂಡೆ ಹಾಗೂ ರಾಷ್ಟ್ರಮಟ್ಟದ ದೇಹಧಾರ್ಡ್ಯ ಪಟು ಗೋವಾದ ನಿವೇದ್ ಭಾಗವಹಿಸಲಿದ್ದಾರೆ.</p>.<p>ಯುವಜನತೆಯಲ್ಲಿ ಆರೋಗ್ಯ ಜಾಗೃತಿಯನ್ನು ಮೂಡಿಸುವ ಉದ್ದೇಶದಡಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ದಾಂಡೇಲಿ ಹಾಗೂ ದಾಂಡೇಲಿಯ ಸುತ್ತಮುತ್ತಲ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದ್ದಾರೆ.</p>.<p>ರೋಟರಿ ಕ್ಲಬ್ನ ಪ್ರಮುಖರಾದ ಎಸ್.ಜಿ.ಬಿರಾದಾರ ಹಾಗೂ ಉಸ್ಮಾನ್ ಮುನ್ನಾ ವಹಾಬ್ ಮಾತನಾಡಿ, ಅತ್ಯಂತ ವಿಶಿಷ್ಟ ಹಾಗೂ ಶಿಸ್ತುಬದ್ಧವಾಗಿ ನಡೆಯಲಿರುವ ಈ ಸ್ಪರ್ಧೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕು. ಸದೃಢ ಆರೋಗ್ಯ ನಿರ್ಮಾಣದ ಕುರಿತಂತೆ ಜನ ಜಾಗೃತಿಯನ್ನು ಮೂಡಿಸುವ ಉದ್ದೇಶದಿಂದ ಈ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು, ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದರು.</p>.<p>ರೋಟರಿ ಕ್ಲಬ್ ನ ಖಜಾಂಚಿ ಲಿಯೋ ಪಿಂಟೋ, ಆರ್.ಪಿ.ನಾಯ್ಕ, ದೇಹಧಾರ್ಡ್ಯ ಪಟುಗಳಾದ ಯೂಸುಪ್ ಶೇಖ, ಮೆಹಬೂಬು ಪೊಲೀಸ್ ಮತ್ತು ಬಿಲಾಲ್ ಎಚ್.ಜಮದಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>