<p><strong>ಭಟ್ಕಳ:</strong> ರಾಜ್ಯಮಟ್ಟದ ದೇಹದಾರ್ಢ್ಯ (ಬಾಡಿಬಿಲ್ಡಿಂಗ್) ಸ್ಪರ್ಧೆ ಫೆ. 22ರಂದು ಸಂಜೆ 6 ಗಂಟೆಗೆ ಭಟ್ಕಳದ ಆನಂದಾಶ್ರಮ ಶಾಲೆಯ ಮೈದಾನದಲ್ಲಿ ನಡೆಯಲಿದೆ ಎಂದು ಇಲ್ಲಿನ ಬಾಡಿಬಿಲ್ಡಿಂಗ್ ಅಸೋಸಿಯೇಶನ್ ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ನಾಯ್ಕ ಮಾಹಿತಿ ನೀಡಿದರು.</p>.<p>ಪಟ್ಟಣದಲ್ಲಿ ಬುಧವಾರ ಸ್ಪರ್ಧೆಯ ಪೋಸ್ಟರ್ ಬಿಡುಗಡೆಗೊಳಿಸಿದ ಅವರು, ‘ಎಂಟು ವಿಭಾಗಗಳಲ್ಲಿ ಸ್ಪರ್ಧೆ ಆಯೋಜಿಸಿದ್ದು, ರಾಜ್ಯದ ವಿವಿಧ ಜಿಲ್ಲೆಗಳಿಂದ 250ಕ್ಕೂ ಹೆಚ್ಚು ಸ್ಪರ್ಧಿಗಳು ಭಾಗವಹಿಸಲಿದ್ದಾರೆ’ ಎಂದು ತಿಳಿಸಿದರು.</p>.<p>‘ನ್ಯಾಯಸಮ್ಮತ ಸ್ಪರ್ಧೆ ನಡೆಸಲು ರಾಜ್ಯದ 25–30 ಅನುಭವಿ ರೆಫ್ರಿಗಳನ್ನು ನಿಯೋಜಿಸಲಾಗಿದೆ. ಉತ್ತಮ ಆರೋಗ್ಯ, ಶ್ರೇಷ್ಠ ದೈಹಿಕ ಸಾಮರ್ಥ್ಯ ಹಾಗೂ ಫಿಟ್ ಜೀವನಶೈಲಿಯ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಸ್ಪರ್ಧೆ ಆಯೋಜಿಸಲಾಗಿದೆ. ವಿಜೇತರಿಗೆ ₹25 ಸಾವಿರ, ರನ್ನರ್ ಅಪ್ ಸ್ಪರ್ಧಿಗೆ ₹15 ಸಾವಿರ ನಗದು ಬಹುಮಾನ ನೀಡಲಾಗುವುದು. ಸಚಿವ ಮಂಕಾಳ ವೈದ್ಯ ಸಹಕಾರದಿಂದ ತಾಲೂಕಿನಲ್ಲಿ ರಾಜ್ಯಮಟ್ಟದ ಕಾರ್ಯಕ್ರಮ ನಡೆಯಲಿದೆ’ ಎಂದು ಅವರು ಹೇಳಿದರು.</p>.<p>ಭಟ್ಕಳದ ಬಾಡಿಬಿಲ್ಡಿಂಗ್ ಅಸೋಸಿಯೇಶನ್ನ ಅಧ್ಯಕ್ಷ ಅಜಿಜುರ್ ರಹಮಾನ್, ಗೌರವ ಅಧ್ಯಕ್ಷ ನಜೀರ ಕಾಶಿಮ್ ಜಿ, ಸದಸ್ಯರಾದ ಗಣೇಶ ನಾಯ್ಕ, ಫಾಸ್ಕಲ್ ಗೋಮ್ಸ್, ರಾಘವೇಂದ್ರ ಗೊಂಡ, ವಿವೇಕ ನಾಯ್ಕ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭಟ್ಕಳ:</strong> ರಾಜ್ಯಮಟ್ಟದ ದೇಹದಾರ್ಢ್ಯ (ಬಾಡಿಬಿಲ್ಡಿಂಗ್) ಸ್ಪರ್ಧೆ ಫೆ. 22ರಂದು ಸಂಜೆ 6 ಗಂಟೆಗೆ ಭಟ್ಕಳದ ಆನಂದಾಶ್ರಮ ಶಾಲೆಯ ಮೈದಾನದಲ್ಲಿ ನಡೆಯಲಿದೆ ಎಂದು ಇಲ್ಲಿನ ಬಾಡಿಬಿಲ್ಡಿಂಗ್ ಅಸೋಸಿಯೇಶನ್ ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ನಾಯ್ಕ ಮಾಹಿತಿ ನೀಡಿದರು.</p>.<p>ಪಟ್ಟಣದಲ್ಲಿ ಬುಧವಾರ ಸ್ಪರ್ಧೆಯ ಪೋಸ್ಟರ್ ಬಿಡುಗಡೆಗೊಳಿಸಿದ ಅವರು, ‘ಎಂಟು ವಿಭಾಗಗಳಲ್ಲಿ ಸ್ಪರ್ಧೆ ಆಯೋಜಿಸಿದ್ದು, ರಾಜ್ಯದ ವಿವಿಧ ಜಿಲ್ಲೆಗಳಿಂದ 250ಕ್ಕೂ ಹೆಚ್ಚು ಸ್ಪರ್ಧಿಗಳು ಭಾಗವಹಿಸಲಿದ್ದಾರೆ’ ಎಂದು ತಿಳಿಸಿದರು.</p>.<p>‘ನ್ಯಾಯಸಮ್ಮತ ಸ್ಪರ್ಧೆ ನಡೆಸಲು ರಾಜ್ಯದ 25–30 ಅನುಭವಿ ರೆಫ್ರಿಗಳನ್ನು ನಿಯೋಜಿಸಲಾಗಿದೆ. ಉತ್ತಮ ಆರೋಗ್ಯ, ಶ್ರೇಷ್ಠ ದೈಹಿಕ ಸಾಮರ್ಥ್ಯ ಹಾಗೂ ಫಿಟ್ ಜೀವನಶೈಲಿಯ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಸ್ಪರ್ಧೆ ಆಯೋಜಿಸಲಾಗಿದೆ. ವಿಜೇತರಿಗೆ ₹25 ಸಾವಿರ, ರನ್ನರ್ ಅಪ್ ಸ್ಪರ್ಧಿಗೆ ₹15 ಸಾವಿರ ನಗದು ಬಹುಮಾನ ನೀಡಲಾಗುವುದು. ಸಚಿವ ಮಂಕಾಳ ವೈದ್ಯ ಸಹಕಾರದಿಂದ ತಾಲೂಕಿನಲ್ಲಿ ರಾಜ್ಯಮಟ್ಟದ ಕಾರ್ಯಕ್ರಮ ನಡೆಯಲಿದೆ’ ಎಂದು ಅವರು ಹೇಳಿದರು.</p>.<p>ಭಟ್ಕಳದ ಬಾಡಿಬಿಲ್ಡಿಂಗ್ ಅಸೋಸಿಯೇಶನ್ನ ಅಧ್ಯಕ್ಷ ಅಜಿಜುರ್ ರಹಮಾನ್, ಗೌರವ ಅಧ್ಯಕ್ಷ ನಜೀರ ಕಾಶಿಮ್ ಜಿ, ಸದಸ್ಯರಾದ ಗಣೇಶ ನಾಯ್ಕ, ಫಾಸ್ಕಲ್ ಗೋಮ್ಸ್, ರಾಘವೇಂದ್ರ ಗೊಂಡ, ವಿವೇಕ ನಾಯ್ಕ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>