<p><strong>ಕುಮಟಾ:</strong> `ಪಟ್ಟಣದ ಹನುಮಂತ ಬೆಣ್ಣೆ ನೆಲ್ಲಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸುಮಾರು ಒಂದು ಸಾವಿರ ವಿದ್ಯಾರ್ಥಿಗಳಿಗೆ ರಿಯಾಯತಿ ದರದಲ್ಲಿ ಊಟ, ಉಪಹಾರ ಒದಗಿಸಲು ಕಾಲೇಜು ಪಕ್ಕದ ಕಷಿ ಇಲಾಖೆಯ ಹಳೆಯ ಕಟ್ಟಡದಲ್ಲಿ ವ್ಯವಸ್ಥೆ ಕಲ್ಪಿಸಲಾಗುವುದು’ ಎಂದು ಶಾಸಕ ದಿನಕರ ಶೆಟ್ಟಿ ಹೇಳಿದರು.</p>.<p>ಶನಿವಾರ ಸ್ಥಳಕ್ಕೆ ಭೇಟಿ ನೀಡಿದ ಅವರು, ‘ಕಾಲೇಜಿನಲ್ಲಿ ಸುಮಾರು 1,700 ಜನ ವಿದ್ಯಾರ್ಥಿಗಳು ಓದುತ್ತಿದ್ದಾರೆ. ಅಂತಹ ವಿದ್ಯಾರ್ಥಿಗಳಿಗೆ ಅತ್ಯಂತ ಕಡಿಮೆ ದರದಲ್ಲಿ ಮಧ್ಯಾಹ್ನ ಊಟ ಹಾಗೂ ಉಪಹಾರ ಸೌಲಭ್ಯ ಕಲ್ಪಿಸಲು ಕೆಲ ದಾನಿಗಳನ್ನು ಸಂಪರ್ಕಿಸಲಾಗಿದೆ’ ಎಂದರು.</p>.<p>‘ಕಾಲೇಜು ಸಮೀಪ ಇರುವ ಕೃಷಿ ಇಲಾಖೆಯ ಸುಮಾರು ಎರಡು ಸಾವಿರ ಚದರ ಅಡಿ ಅಳತೆಯ ಹಳೆಯ ಕಟ್ಟಡವನ್ನು ಈ ಉದ್ದೇಶಕ್ಕೆ ಗುರುತಿಸಲಾಗಿದೆ. ಕಟ್ಟಡ ತಾತ್ಕಾಲಿಕ ಬಳಕೆಗೆ ಹಾಗೂ ಅಲ್ಲಿರುವ ಕೊಳವೆ ಬಾವಿ ನೀರಿನ ಬಳಕೆಗೆ ಅನುಮತಿ ಪಡೆಯಲಾಗಿದೆ. ಕಟ್ಟಡ ನವೀಕರಿಸಿ, ವಿದ್ಯುತ್ ಸಂಪರ್ಕ ಪಡೆದ ನಂತರ ಕೆಲ ತಿಂಗಳಲ್ಲಿ ಊಟದ ಯೋಜನೆ ಅನುಷ್ಠಾನಗೊಳ್ಳಲಿದೆ’ ಎಂದರು. </p>.<p>ಹೆಚ್ಚಿನ ಮಾಹಿತಿ ನೀಡಿದ ಪ್ರಾಚಾರ್ಯ ಸತೀಶ ನಾಯ್ಕ, ‘ಗ್ರಾಮೀಣ ಪ್ರದೇಶಗಳಿಂದ ಬರುವ ಸುಮಾರು ಒಂದು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಮಧ್ಯಾಹ್ನದ ಊಟವಿಲ್ಲದೆ ತರಗತಿಯಲ್ಲಿ ಪಾಠ ಕೇಳುತ್ತಿದ್ದಾರೆ. ಅಂಥವರಿಗೆ ಈ ಸೌಲಭ್ಯ ಪ್ರಯೋಜನವಾಗಲಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಮಟಾ:</strong> `ಪಟ್ಟಣದ ಹನುಮಂತ ಬೆಣ್ಣೆ ನೆಲ್ಲಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸುಮಾರು ಒಂದು ಸಾವಿರ ವಿದ್ಯಾರ್ಥಿಗಳಿಗೆ ರಿಯಾಯತಿ ದರದಲ್ಲಿ ಊಟ, ಉಪಹಾರ ಒದಗಿಸಲು ಕಾಲೇಜು ಪಕ್ಕದ ಕಷಿ ಇಲಾಖೆಯ ಹಳೆಯ ಕಟ್ಟಡದಲ್ಲಿ ವ್ಯವಸ್ಥೆ ಕಲ್ಪಿಸಲಾಗುವುದು’ ಎಂದು ಶಾಸಕ ದಿನಕರ ಶೆಟ್ಟಿ ಹೇಳಿದರು.</p>.<p>ಶನಿವಾರ ಸ್ಥಳಕ್ಕೆ ಭೇಟಿ ನೀಡಿದ ಅವರು, ‘ಕಾಲೇಜಿನಲ್ಲಿ ಸುಮಾರು 1,700 ಜನ ವಿದ್ಯಾರ್ಥಿಗಳು ಓದುತ್ತಿದ್ದಾರೆ. ಅಂತಹ ವಿದ್ಯಾರ್ಥಿಗಳಿಗೆ ಅತ್ಯಂತ ಕಡಿಮೆ ದರದಲ್ಲಿ ಮಧ್ಯಾಹ್ನ ಊಟ ಹಾಗೂ ಉಪಹಾರ ಸೌಲಭ್ಯ ಕಲ್ಪಿಸಲು ಕೆಲ ದಾನಿಗಳನ್ನು ಸಂಪರ್ಕಿಸಲಾಗಿದೆ’ ಎಂದರು.</p>.<p>‘ಕಾಲೇಜು ಸಮೀಪ ಇರುವ ಕೃಷಿ ಇಲಾಖೆಯ ಸುಮಾರು ಎರಡು ಸಾವಿರ ಚದರ ಅಡಿ ಅಳತೆಯ ಹಳೆಯ ಕಟ್ಟಡವನ್ನು ಈ ಉದ್ದೇಶಕ್ಕೆ ಗುರುತಿಸಲಾಗಿದೆ. ಕಟ್ಟಡ ತಾತ್ಕಾಲಿಕ ಬಳಕೆಗೆ ಹಾಗೂ ಅಲ್ಲಿರುವ ಕೊಳವೆ ಬಾವಿ ನೀರಿನ ಬಳಕೆಗೆ ಅನುಮತಿ ಪಡೆಯಲಾಗಿದೆ. ಕಟ್ಟಡ ನವೀಕರಿಸಿ, ವಿದ್ಯುತ್ ಸಂಪರ್ಕ ಪಡೆದ ನಂತರ ಕೆಲ ತಿಂಗಳಲ್ಲಿ ಊಟದ ಯೋಜನೆ ಅನುಷ್ಠಾನಗೊಳ್ಳಲಿದೆ’ ಎಂದರು. </p>.<p>ಹೆಚ್ಚಿನ ಮಾಹಿತಿ ನೀಡಿದ ಪ್ರಾಚಾರ್ಯ ಸತೀಶ ನಾಯ್ಕ, ‘ಗ್ರಾಮೀಣ ಪ್ರದೇಶಗಳಿಂದ ಬರುವ ಸುಮಾರು ಒಂದು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಮಧ್ಯಾಹ್ನದ ಊಟವಿಲ್ಲದೆ ತರಗತಿಯಲ್ಲಿ ಪಾಠ ಕೇಳುತ್ತಿದ್ದಾರೆ. ಅಂಥವರಿಗೆ ಈ ಸೌಲಭ್ಯ ಪ್ರಯೋಜನವಾಗಲಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>