<p><strong>ಸಿದ್ದಾಪುರ</strong>: ವಿದ್ಯಾರ್ಥಿಗಳು ಕಲಿಕೆ ಸಂದರ್ಭದಲ್ಲಿ ಆಸಕ್ತಿಯಿಂದ ಉತ್ತಮ ಶಿಕ್ಷಣ ಪಡೆದು ರಾಜ್ಯ, ದೇಶಕ್ಕೆ ಆಸ್ತಿಯಾಗಬೇಕು. ದೇಶ ನಿರ್ಮಾಣದಲ್ಲಿ ಯುವಜನತೆ ಪಾತ್ರ ಮುಖ್ಯ ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು.</p>.<p>ತಾಲ್ಲೂಕಿನ ಬೇಡ್ಕಣಿ ಸಮೀಪದ ಸರ್ಕಾರಿ ಪದವಿ ಕಾಲೇಜಿನ ವಾರ್ಷಿಕ ಸ್ನೇಹ ಸಮ್ಮೇಳನಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>ನಮ್ಮ ಭಾಗದ ವಿದ್ಯಾರ್ಥಿಗಳು ಹಸಿರು ಪರಿಸರ ಉಳಿಸಲು ಪಣತೊಡಬೇಕು. ಪರಿಸರ, ಅರಣ್ಯವಿದ್ದರೆ ಮನುಕುಲವೂ ಉಳಿಯಲಿದೆ. ಪ್ರತಿಯೊಬ್ಬ ವಿದ್ಯಾರ್ಥಿಯು ಸರ್ಕಾರ ಕಲ್ಪಿಸಿದ ಶೈಕ್ಷಣಿಕ ವ್ಯವಸ್ಥೆಯ ಸದ್ಬಳಕೆ ಮಾಡಿಕೊಂಡು ಸಾಧನೆ ಮಾಡಬೇಕು. ಸಿದ್ದಾಪುರ ಕಾಲೇಜು ಇನ್ನೂವರೆಗೂ ನ್ಯಾಕ್ ಮಾನ್ಯತೆ ಪಡೆದಿಲ್ಲ. ಈ ಬಗ್ಗೆ ಕಾಲೇಜು ಪ್ರಮುಖರು ಲಕ್ಷ್ಯ ವಹಿಸಿ, ಕಾಲೇಜು ಅಭಿವೃದ್ದಿ, ಶೈಕ್ಷಣಿಕ ಸುಧಾರಣೆ ದೃಷ್ಟಿಯಿಂದ,ಮಕ್ಕಳ ಹಿತದೃಷ್ಟಿಯಿಂದ ನ್ಯಾಕ್ ಮಾನ್ಯತೆ ಪಡೆಯಬೇಕು ಎಂದರು.</p>.<p>ಸಾಧಕ ವಿದ್ಯಾರ್ಥಿಗಳಿಗೆ ಪುರಸ್ಕರಿಸಲಾಯಿತು. ಕಾಲೇಜು ಪ್ರಾಚಾರ್ಯರು, ಉಪನ್ಯಾಸಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿದ್ದಾಪುರ</strong>: ವಿದ್ಯಾರ್ಥಿಗಳು ಕಲಿಕೆ ಸಂದರ್ಭದಲ್ಲಿ ಆಸಕ್ತಿಯಿಂದ ಉತ್ತಮ ಶಿಕ್ಷಣ ಪಡೆದು ರಾಜ್ಯ, ದೇಶಕ್ಕೆ ಆಸ್ತಿಯಾಗಬೇಕು. ದೇಶ ನಿರ್ಮಾಣದಲ್ಲಿ ಯುವಜನತೆ ಪಾತ್ರ ಮುಖ್ಯ ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು.</p>.<p>ತಾಲ್ಲೂಕಿನ ಬೇಡ್ಕಣಿ ಸಮೀಪದ ಸರ್ಕಾರಿ ಪದವಿ ಕಾಲೇಜಿನ ವಾರ್ಷಿಕ ಸ್ನೇಹ ಸಮ್ಮೇಳನಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>ನಮ್ಮ ಭಾಗದ ವಿದ್ಯಾರ್ಥಿಗಳು ಹಸಿರು ಪರಿಸರ ಉಳಿಸಲು ಪಣತೊಡಬೇಕು. ಪರಿಸರ, ಅರಣ್ಯವಿದ್ದರೆ ಮನುಕುಲವೂ ಉಳಿಯಲಿದೆ. ಪ್ರತಿಯೊಬ್ಬ ವಿದ್ಯಾರ್ಥಿಯು ಸರ್ಕಾರ ಕಲ್ಪಿಸಿದ ಶೈಕ್ಷಣಿಕ ವ್ಯವಸ್ಥೆಯ ಸದ್ಬಳಕೆ ಮಾಡಿಕೊಂಡು ಸಾಧನೆ ಮಾಡಬೇಕು. ಸಿದ್ದಾಪುರ ಕಾಲೇಜು ಇನ್ನೂವರೆಗೂ ನ್ಯಾಕ್ ಮಾನ್ಯತೆ ಪಡೆದಿಲ್ಲ. ಈ ಬಗ್ಗೆ ಕಾಲೇಜು ಪ್ರಮುಖರು ಲಕ್ಷ್ಯ ವಹಿಸಿ, ಕಾಲೇಜು ಅಭಿವೃದ್ದಿ, ಶೈಕ್ಷಣಿಕ ಸುಧಾರಣೆ ದೃಷ್ಟಿಯಿಂದ,ಮಕ್ಕಳ ಹಿತದೃಷ್ಟಿಯಿಂದ ನ್ಯಾಕ್ ಮಾನ್ಯತೆ ಪಡೆಯಬೇಕು ಎಂದರು.</p>.<p>ಸಾಧಕ ವಿದ್ಯಾರ್ಥಿಗಳಿಗೆ ಪುರಸ್ಕರಿಸಲಾಯಿತು. ಕಾಲೇಜು ಪ್ರಾಚಾರ್ಯರು, ಉಪನ್ಯಾಸಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>