<p><strong>ಶಿರಸಿ:</strong> ‘ಗಿಡ, ಕಳೆಗಳಿಂದ ಮುಚ್ಚಿ ಹೋಗಿರುವ ಎಕ್ಕಂಬಿ ಗ್ರಾಮದ ಕೆರೆಯನ್ನು ಸಂರಕ್ಷಿಸಿ. ಈ ಕೆರೆಯನ್ನು ಹೂಳೆತ್ತಿ ನೀರು ತುಂಬಲು ಅವಕಾಶ ಕೊಡಿ’ ಎಂಬ ಭಿತ್ತಿಪತ್ರವನ್ನು ಕೆರೆಯ ಸುತ್ತ ಅಂಟಿಸಿ ಜಾಗೃತಿ ಮೂಡಿಸಿದವರು ಪರಿಸರವಾದಿಗಳಲ್ಲ, ಬಿಸಲಕೊಪ್ಪದ ಸೂರ್ಯ ನಾರಾಯಣ ಪ್ರೌಢಶಾಲೆಯ 9ನೇ ತರಗತಿಯ ವಿದ್ಯಾರ್ಥಿಗಳು.</p>.<p>ಬಿಸಲಕೊಪ್ಪ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಎಕ್ಕಂಬಿಯಲ್ಲಿ ಶಿರಸಿ–ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ದೊಡ್ಡ ಕೆರೆ ಇದೆ. ನಿರ್ವಹಣೆ ಇಲ್ಲದ ಕಾರಣ ಹೂಳು ತುಂಬಿ, ಗಿಡಗಂಟಿಗಳು ಬೆಳೆದು ನಿಂತಿವೆ. ಕೆರೆ ಸ್ವಚ್ಛಗೊಳಿಸಬೇಕು ಎಂಬ ಬೇಡಿಕೆ ಈಡೇರಿಕೆಗೆ ಗಣರಾಜ್ಯೋತ್ಸವದ ದಿನ ವಿದ್ಯಾರ್ಥಿಗಳು ಆಗ್ರಹಿಸಿದರು.</p>.<p>‘ವಿಜ್ಞಾನ ವಿಷಯದಲ್ಲಿ ಜೀವವೈವಿಧ್ಯ ಸಂರಕ್ಷಣೆಯ ಕುರಿತ ಪಾಠದಿಂದ ಪ್ರಭಾವಿತತಾಗಿದ್ದೇವೆ. ನಮ್ಮೂರಿನ ಕೆರೆಯನ್ನು ಸಂರಕ್ಷಿಸಿದರೆ ಜೀವ ಸಂಕುಲದ ಉಳಿವಿಗೆ ಸಣ್ಣ ಕೊಡುಗೆ ನೀಡಿದಂತಾಗುತ್ತದೆ ಎಂಬ ಭಾವನೆ ಮೂಡಿತು. ಹೀಗಾಗಿ ಗ್ರಾಮಸ್ಥರನ್ನು ಪ್ರೇರೇಪಿಸಲು ಭಿತ್ತಿಪತ್ರಗಳ ಮೂಲಕ ಜಾಗೃತಿ ಮೂಡಿಸಿದ್ದೇವೆ’ ಎಂದು ವಿದ್ಯಾರ್ಥಿಗಳು ತಿಳಿಸಿದರು.</p>.<p>‘ಕೆರೆ ಅಭಿವೃದ್ಧಿಪಡಿಸಲು ಗ್ರಾಮಸ್ಥರು ಮುಂದಾದರೆ, ನಾವೂ ಅಳಿಲು ಸೇವೆ ನೀಡಲು ಸಿದ್ಧರಿದ್ದೇವೆ. ಗಿಡಗಂಟಿಗಳನ್ನು ಸ್ವಚ್ಛಗೊಳಿಸಲು ಜನರಿಗೆ ಸಹಕರಿಸುತ್ತೇವೆ. ಇದನ್ನು ಗ್ರಾಮಸ್ಥರಿಗೆ ಮನವರಿಕೆ ಮಾಡಿಕೊಟ್ಟಿದ್ದೇವೆ. ಕೆಲವು ಗ್ರಾಮಸ್ಥರು ನಮ್ಮ ಜಾಗೃತಿ ಕಾರ್ಯಕ್ಕೆ ಸಹಕಾರ ನೀಡಿದರು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ:</strong> ‘ಗಿಡ, ಕಳೆಗಳಿಂದ ಮುಚ್ಚಿ ಹೋಗಿರುವ ಎಕ್ಕಂಬಿ ಗ್ರಾಮದ ಕೆರೆಯನ್ನು ಸಂರಕ್ಷಿಸಿ. ಈ ಕೆರೆಯನ್ನು ಹೂಳೆತ್ತಿ ನೀರು ತುಂಬಲು ಅವಕಾಶ ಕೊಡಿ’ ಎಂಬ ಭಿತ್ತಿಪತ್ರವನ್ನು ಕೆರೆಯ ಸುತ್ತ ಅಂಟಿಸಿ ಜಾಗೃತಿ ಮೂಡಿಸಿದವರು ಪರಿಸರವಾದಿಗಳಲ್ಲ, ಬಿಸಲಕೊಪ್ಪದ ಸೂರ್ಯ ನಾರಾಯಣ ಪ್ರೌಢಶಾಲೆಯ 9ನೇ ತರಗತಿಯ ವಿದ್ಯಾರ್ಥಿಗಳು.</p>.<p>ಬಿಸಲಕೊಪ್ಪ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಎಕ್ಕಂಬಿಯಲ್ಲಿ ಶಿರಸಿ–ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ದೊಡ್ಡ ಕೆರೆ ಇದೆ. ನಿರ್ವಹಣೆ ಇಲ್ಲದ ಕಾರಣ ಹೂಳು ತುಂಬಿ, ಗಿಡಗಂಟಿಗಳು ಬೆಳೆದು ನಿಂತಿವೆ. ಕೆರೆ ಸ್ವಚ್ಛಗೊಳಿಸಬೇಕು ಎಂಬ ಬೇಡಿಕೆ ಈಡೇರಿಕೆಗೆ ಗಣರಾಜ್ಯೋತ್ಸವದ ದಿನ ವಿದ್ಯಾರ್ಥಿಗಳು ಆಗ್ರಹಿಸಿದರು.</p>.<p>‘ವಿಜ್ಞಾನ ವಿಷಯದಲ್ಲಿ ಜೀವವೈವಿಧ್ಯ ಸಂರಕ್ಷಣೆಯ ಕುರಿತ ಪಾಠದಿಂದ ಪ್ರಭಾವಿತತಾಗಿದ್ದೇವೆ. ನಮ್ಮೂರಿನ ಕೆರೆಯನ್ನು ಸಂರಕ್ಷಿಸಿದರೆ ಜೀವ ಸಂಕುಲದ ಉಳಿವಿಗೆ ಸಣ್ಣ ಕೊಡುಗೆ ನೀಡಿದಂತಾಗುತ್ತದೆ ಎಂಬ ಭಾವನೆ ಮೂಡಿತು. ಹೀಗಾಗಿ ಗ್ರಾಮಸ್ಥರನ್ನು ಪ್ರೇರೇಪಿಸಲು ಭಿತ್ತಿಪತ್ರಗಳ ಮೂಲಕ ಜಾಗೃತಿ ಮೂಡಿಸಿದ್ದೇವೆ’ ಎಂದು ವಿದ್ಯಾರ್ಥಿಗಳು ತಿಳಿಸಿದರು.</p>.<p>‘ಕೆರೆ ಅಭಿವೃದ್ಧಿಪಡಿಸಲು ಗ್ರಾಮಸ್ಥರು ಮುಂದಾದರೆ, ನಾವೂ ಅಳಿಲು ಸೇವೆ ನೀಡಲು ಸಿದ್ಧರಿದ್ದೇವೆ. ಗಿಡಗಂಟಿಗಳನ್ನು ಸ್ವಚ್ಛಗೊಳಿಸಲು ಜನರಿಗೆ ಸಹಕರಿಸುತ್ತೇವೆ. ಇದನ್ನು ಗ್ರಾಮಸ್ಥರಿಗೆ ಮನವರಿಕೆ ಮಾಡಿಕೊಟ್ಟಿದ್ದೇವೆ. ಕೆಲವು ಗ್ರಾಮಸ್ಥರು ನಮ್ಮ ಜಾಗೃತಿ ಕಾರ್ಯಕ್ಕೆ ಸಹಕಾರ ನೀಡಿದರು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>