<p><strong>ಹಳಿಯಾಳ</strong>: ಸ್ಥಳೀಯ ಈಐಡಿ ಪ್ಯಾರಿ ಸಕ್ಕರೆ ಕಾರ್ಖಾನೆ ಕಬ್ಬು ಬೆಳೆಗಾರರ ಬೇಡಿಕೆಯಂತೆ ಪ್ರತಿ ಟನ್ಗೆ ₹ 3,363 ದರವನ್ನು ನೀಡಬೇಕೆಂದು ಆಗ್ರಹಿಸಿ ಕಬ್ಬು ಬೆಳೆಗಾರರು ಗುರುವಾರ ಪ್ರತಿಭಟನೆ ಆರಂಭಿಸಿದ್ದಾರೆ</p>.<p>ಇಲ್ಲಿಯ ತಹಶೀಲ್ದಾರ್ ಕಾರ್ಯಾಲಯದ ಎದುರಿನ ಶಿವಾಜಿ ವೃತ್ತದಲ್ಲಿ ಕಬ್ಬು ಬೆಳೆಗಾರರು ಸೇರಿ ಪ್ರತಿಭಟನೆ ನಡೆಸಿದರು.</p>.<p>ಸರ್ಕಾರ ಎಫ್.ಆರ್.ಪಿ ದರವನ್ನು ₹ 4,000 ನಿಗದಿ ಮಾಡಿದೆ. ಆದರೆ ಸ್ಥಳೀಯ ಈಐಡಿ ಪ್ಯಾರಿ ಸಕ್ಕರೆ ಕಾರ್ಖಾನೆ ಪ್ರತಿ ಟನ್ಗೆ ₹ 3,050 ದರವನ್ನು ನಿಗದಿ ಮಾಡಿ ಘೋಷಣೆ ಮಾಡಿದೆ. ಇವುಗಳಲ್ಲಿ ₹ 950ನ್ನು ಕಬ್ಬು ಕಟಾವು ಮತ್ತು ಸಾಗಣೆ ವೆಚ್ಚವೆಂದು ಕಡಿತಗೊಳಿಸಲಾಗಿದೆ. ಕಳೆದ ಮೂರು ವರ್ಷಗಳಿಂದ ₹ 893 ರನ್ನು ಕಾರ್ಖಾನೆಯವರು ಹೆಚ್ಚುವರಿಯಾಗಿ ತೆಗೆದುಕೊಂಡಿದ್ದಾರೆ. ಆ ಬಗ್ಗೆ ಸರ್ಕಾರ ಲೆಕ್ಕಪರಿಶೋಧನೆ (ಆಡಿಟ್) ಮಾಡಿದಾಗ ಗೊತ್ತಾಗಿದೆ. ಕಬ್ಬು ಬೆಳೆಗಾರರಿಗೆ ಕಳೆದ ಮೂರು ವರ್ಷಗಳಿಂದ ಪಾವತಿಸಬೇಕಾಗಿದ್ದ ₹ 256ನ್ನು ಪಾವತಿಸಬೇಕು. ಪ್ರಸಕ್ತ ಸಾಲಿನಲ್ಲಿ ಕಬ್ಬು ನುರಿಸುವ ಮುಂಚೆ ಬೆಳೆಗಾರರ ಬೇಡಿಕೆಯಂತೆ ದರವನ್ನು ₹ 3,363 ನೀಡಬೇಕು. ಬೇಡಿಕೆ ಈಡೇರುವವರೆಗೆ ಪ್ರತಿಭಟನೆ ಮುಂದುವರಿಸಲಾಗುವುದು’ ಎಂದು ಬೆಳೆಗಾರರು ತಿಳಿಸಿದ್ದಾರೆ.</p>.<p>ಮುಖಂಡರಾದ ನಾಗೇಂದ್ರ ಜೀವೋಜಿ, ಕುಮಾರ ಬೋಬಾಟಿ, ಶಂಕರ ಕಾಜಗಾರ, ಅಶೋಕ ಮೇಟಿ, ಪ್ರಕಾಶ ಫಾಕರೆ, ಸಾತೋರಿ ಗೋಡಿಮನಿ, ಮೋಹನ ಮೆಲಗಿ, ಪುಂಡ್ಲಿಕ ಗೋಡಿಮನಿ, ಸುರೇಶ ಶಿವನ್ನವರ, ರಾಮದಾಸ ಬೆಳಗಾಂವರ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಳಿಯಾಳ</strong>: ಸ್ಥಳೀಯ ಈಐಡಿ ಪ್ಯಾರಿ ಸಕ್ಕರೆ ಕಾರ್ಖಾನೆ ಕಬ್ಬು ಬೆಳೆಗಾರರ ಬೇಡಿಕೆಯಂತೆ ಪ್ರತಿ ಟನ್ಗೆ ₹ 3,363 ದರವನ್ನು ನೀಡಬೇಕೆಂದು ಆಗ್ರಹಿಸಿ ಕಬ್ಬು ಬೆಳೆಗಾರರು ಗುರುವಾರ ಪ್ರತಿಭಟನೆ ಆರಂಭಿಸಿದ್ದಾರೆ</p>.<p>ಇಲ್ಲಿಯ ತಹಶೀಲ್ದಾರ್ ಕಾರ್ಯಾಲಯದ ಎದುರಿನ ಶಿವಾಜಿ ವೃತ್ತದಲ್ಲಿ ಕಬ್ಬು ಬೆಳೆಗಾರರು ಸೇರಿ ಪ್ರತಿಭಟನೆ ನಡೆಸಿದರು.</p>.<p>ಸರ್ಕಾರ ಎಫ್.ಆರ್.ಪಿ ದರವನ್ನು ₹ 4,000 ನಿಗದಿ ಮಾಡಿದೆ. ಆದರೆ ಸ್ಥಳೀಯ ಈಐಡಿ ಪ್ಯಾರಿ ಸಕ್ಕರೆ ಕಾರ್ಖಾನೆ ಪ್ರತಿ ಟನ್ಗೆ ₹ 3,050 ದರವನ್ನು ನಿಗದಿ ಮಾಡಿ ಘೋಷಣೆ ಮಾಡಿದೆ. ಇವುಗಳಲ್ಲಿ ₹ 950ನ್ನು ಕಬ್ಬು ಕಟಾವು ಮತ್ತು ಸಾಗಣೆ ವೆಚ್ಚವೆಂದು ಕಡಿತಗೊಳಿಸಲಾಗಿದೆ. ಕಳೆದ ಮೂರು ವರ್ಷಗಳಿಂದ ₹ 893 ರನ್ನು ಕಾರ್ಖಾನೆಯವರು ಹೆಚ್ಚುವರಿಯಾಗಿ ತೆಗೆದುಕೊಂಡಿದ್ದಾರೆ. ಆ ಬಗ್ಗೆ ಸರ್ಕಾರ ಲೆಕ್ಕಪರಿಶೋಧನೆ (ಆಡಿಟ್) ಮಾಡಿದಾಗ ಗೊತ್ತಾಗಿದೆ. ಕಬ್ಬು ಬೆಳೆಗಾರರಿಗೆ ಕಳೆದ ಮೂರು ವರ್ಷಗಳಿಂದ ಪಾವತಿಸಬೇಕಾಗಿದ್ದ ₹ 256ನ್ನು ಪಾವತಿಸಬೇಕು. ಪ್ರಸಕ್ತ ಸಾಲಿನಲ್ಲಿ ಕಬ್ಬು ನುರಿಸುವ ಮುಂಚೆ ಬೆಳೆಗಾರರ ಬೇಡಿಕೆಯಂತೆ ದರವನ್ನು ₹ 3,363 ನೀಡಬೇಕು. ಬೇಡಿಕೆ ಈಡೇರುವವರೆಗೆ ಪ್ರತಿಭಟನೆ ಮುಂದುವರಿಸಲಾಗುವುದು’ ಎಂದು ಬೆಳೆಗಾರರು ತಿಳಿಸಿದ್ದಾರೆ.</p>.<p>ಮುಖಂಡರಾದ ನಾಗೇಂದ್ರ ಜೀವೋಜಿ, ಕುಮಾರ ಬೋಬಾಟಿ, ಶಂಕರ ಕಾಜಗಾರ, ಅಶೋಕ ಮೇಟಿ, ಪ್ರಕಾಶ ಫಾಕರೆ, ಸಾತೋರಿ ಗೋಡಿಮನಿ, ಮೋಹನ ಮೆಲಗಿ, ಪುಂಡ್ಲಿಕ ಗೋಡಿಮನಿ, ಸುರೇಶ ಶಿವನ್ನವರ, ರಾಮದಾಸ ಬೆಳಗಾಂವರ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>