<p><strong>ಜೊಯಿಡಾ:</strong> ತಾಲ್ಲೂಕಿನ ಸುಪಾ ಜಲಾನಯನ ಪ್ರದೇಶದಲ್ಲಿ ಸತತವಾಗಿ ಸುರಿಯುತ್ತಿರುವ ಮಳೆಗೆ ಸುಪಾ ಜಲಾಶಯಕ್ಕೆ ನೀರನ್ನು ಹರಿಸಲು ನಿರ್ಮಿಸಿರುವ ಅಪ್ಪರ ಕಾನೇರಿ ಜಲಾಶಯ ತುಂಬಿದ್ದು ಕುಂಡಲ ಭಾಗಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಬುಧವಾರ ಮುಳುಗಡೆಯಾಗಿದೆ.</p>.<p>ಸೇತುವೆ ಜೊತೆಗೆ ಸುಮಾರು ಅರ್ಧ ಕಿಲೋ ಮೀಟರ್ ನಷ್ಟು ದೂರದ ರಸ್ತೆಯವರೆಗೆ ನೀರು ಆವರಿಸಿಕೊಂಡಿದ್ದು ಕುಂಡಲ ಸೇರಿದಂತೆ ಕುರಾವಲಿ, ಕೆಲೋಲಿ, ಘಟ್ಟಾವ ಸೇರಿದಂತೆ ಹಲವು ಸಣ್ಣ ಪುಟ್ಟ ಹಳ್ಳಿಗಳಿಗೆ ಸಂಪರ್ಕ ರಸ್ತೆ ಇಲ್ಲದೆ ಜನರು ಸಂಚಾರಕ್ಕೆ ಪರದಾಡುವಂತಾಗಿದೆ.</p>.<p>ಪ್ರತಿ ಬುಧವಾರ ಸಂಜೀವಿನಿ ಸೇವಾ ಟ್ರಸ್ಟ್ ವತಿಯಿಂದ ಕುಂಡಲ್ ಭಾಗಕ್ಕೆ ಆರೋಗ್ಯ ಸೌಲಭ್ಯಗಳನ್ನು ಒದಗಿಸುತ್ತಿದ್ದ ಸಂಚಾರಿ ಆಂಬುಲೆನ್ಸ್ ಸೇತುವೆ ಮೇಲೆ ನೀರು ತುಂಬಿದ್ದರಿಂದ ಮರಳಿತು.</p>.<p>ಪ್ರತಿ ವರ್ಷವೂ ಮಳೆಗಾಲದಲ್ಲಿ ಎರಡು ಮೂರು ಬಾರಿ ಕುಂಡಲ ಸೇತುವೆ ಮುಳುಗಡೆಯಾಗಿ ಜನ ಪರದಾಡುವ ಸ್ಥಿತಿ ನಿರ್ಮಾಣವಾಗುತ್ತದೆ. ಮುಂಜಾಗ್ರತಾ ಕ್ರಮವಾಗಿ ಕೆಪಿಸಿ ವತಿಯಿಂದ ಕುಂಬಾರವಾಡ ಗ್ರಾಮ ಪಂಚಾಯಿತಿಗೆ ದೋಣಿಯನ್ನು ಒದಗಿಸಲಾಗಿದ್ದು ಬುಧವಾರ ಜನರಿಗೆ ಅವಶ್ಯಕ ಸಂಚಾರಕ್ಕೆ ದೋಣಿ ವ್ಯವಸ್ಥೆ ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೊಯಿಡಾ:</strong> ತಾಲ್ಲೂಕಿನ ಸುಪಾ ಜಲಾನಯನ ಪ್ರದೇಶದಲ್ಲಿ ಸತತವಾಗಿ ಸುರಿಯುತ್ತಿರುವ ಮಳೆಗೆ ಸುಪಾ ಜಲಾಶಯಕ್ಕೆ ನೀರನ್ನು ಹರಿಸಲು ನಿರ್ಮಿಸಿರುವ ಅಪ್ಪರ ಕಾನೇರಿ ಜಲಾಶಯ ತುಂಬಿದ್ದು ಕುಂಡಲ ಭಾಗಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಬುಧವಾರ ಮುಳುಗಡೆಯಾಗಿದೆ.</p>.<p>ಸೇತುವೆ ಜೊತೆಗೆ ಸುಮಾರು ಅರ್ಧ ಕಿಲೋ ಮೀಟರ್ ನಷ್ಟು ದೂರದ ರಸ್ತೆಯವರೆಗೆ ನೀರು ಆವರಿಸಿಕೊಂಡಿದ್ದು ಕುಂಡಲ ಸೇರಿದಂತೆ ಕುರಾವಲಿ, ಕೆಲೋಲಿ, ಘಟ್ಟಾವ ಸೇರಿದಂತೆ ಹಲವು ಸಣ್ಣ ಪುಟ್ಟ ಹಳ್ಳಿಗಳಿಗೆ ಸಂಪರ್ಕ ರಸ್ತೆ ಇಲ್ಲದೆ ಜನರು ಸಂಚಾರಕ್ಕೆ ಪರದಾಡುವಂತಾಗಿದೆ.</p>.<p>ಪ್ರತಿ ಬುಧವಾರ ಸಂಜೀವಿನಿ ಸೇವಾ ಟ್ರಸ್ಟ್ ವತಿಯಿಂದ ಕುಂಡಲ್ ಭಾಗಕ್ಕೆ ಆರೋಗ್ಯ ಸೌಲಭ್ಯಗಳನ್ನು ಒದಗಿಸುತ್ತಿದ್ದ ಸಂಚಾರಿ ಆಂಬುಲೆನ್ಸ್ ಸೇತುವೆ ಮೇಲೆ ನೀರು ತುಂಬಿದ್ದರಿಂದ ಮರಳಿತು.</p>.<p>ಪ್ರತಿ ವರ್ಷವೂ ಮಳೆಗಾಲದಲ್ಲಿ ಎರಡು ಮೂರು ಬಾರಿ ಕುಂಡಲ ಸೇತುವೆ ಮುಳುಗಡೆಯಾಗಿ ಜನ ಪರದಾಡುವ ಸ್ಥಿತಿ ನಿರ್ಮಾಣವಾಗುತ್ತದೆ. ಮುಂಜಾಗ್ರತಾ ಕ್ರಮವಾಗಿ ಕೆಪಿಸಿ ವತಿಯಿಂದ ಕುಂಬಾರವಾಡ ಗ್ರಾಮ ಪಂಚಾಯಿತಿಗೆ ದೋಣಿಯನ್ನು ಒದಗಿಸಲಾಗಿದ್ದು ಬುಧವಾರ ಜನರಿಗೆ ಅವಶ್ಯಕ ಸಂಚಾರಕ್ಕೆ ದೋಣಿ ವ್ಯವಸ್ಥೆ ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>