<p><strong>ಹಳಿಯಾಳ:</strong> ಮಹಾತ್ಮ ಗಾಂಧೀಜಿಯವರ ನ್ಯಾಯ ಮತ್ತು ಸತ್ಯಕ್ಕಾಗಿ ನಡೆಸಿದ ಹೋರಾಟವನ್ನು ಸ್ಮರಿಸಿ ಯುವ ಜನಾಂಗ ಜಾಗೃತರಾಗಬೇಕೆಂದು ಶಾಸಕ ಆರ್.ವಿ.ದೇಶಪಾಂಡೆ ಹೇಳಿದರು.</p><p>ಇಲ್ಲಿನ ತಹಶೀಲ್ದಾರ್ ಕಾರ್ಯಾ ಲಯದಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮವನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು.</p><p>ಗಾಂಧೀಜಿಯವರ ತತ್ವದಂತೆ ಅಸ್ಪೃಶ್ಯತೆ ನಿರ್ಮೂಲನೆ, ಸ್ವಚ್ಛತೆ, ಶ್ರಮದಾನ ನಿರಂತರವಾಗಿ ನಡೆಸಲು ಎಲ್ಲರೂ ಪಣತೊಡಬೇಕು. ರಾಷ್ಟ್ರ ನಾಯಕರ ಪರಿಚಯಿಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳ ಬೇಕು ಎಂದರು.</p><p>‘ಭಾರತದ 2ನೇ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿಯವರು ಕಲೆ, ಸಂಸ್ಕೃತಿ, ವಿವಿಧ ಧಾರ್ಮಿಕ ನಂಬಿಕೆಗಳನ್ನು ಗೌರವಿಸುತ್ತಾ ಸರಳ ಜೀವನ ಶೈಲಿ, ನಿಷ್ಠೆ, ಪ್ರಾಮಾಣಿಕತೆಯಿಂದ ಸತ್ಯದ ದಾರಿಯಲ್ಲಿ ಹೆಜ್ಜೆ ಹಾಕಿದವರು. ಅವರ ಆದರ್ಶ ಗುಣಗಳನ್ನು ಜೀವನದಲ್ಲಿ ಅಳವಡಿಸಿ ಕೊಳ್ಳಿ’ ಎಂದರು.</p><p>ಸುಮಾ ಹಡಪದ, ಕಿರಣ ಜಕಲಿ, ಬಸವರಾಜ ಹಡಪದ, ಮಂಜುಳಾ ತಂಡದವರಿಂದ ಗಾಂಧೀಜಿಯವರ ಕುರಿತು ದೇಶಭಕ್ತಿ ಗೀತೆಯನ್ನು ಸಾದರ ಪಡಿಸಲಾಯಿತು.</p><p>ಪುರಸಭೆ ಅಧ್ಯಕ್ಷೆ ದ್ರೌಪದಿ ಅಗಸರ, ತಹಶೀಲ್ದಾರ ಪಿರೋಜಷಾ ಸೋಮನಕಟ್ಟಿ, ರಮೇಶ ಪಾಟೀಲ, ಪುರಸಭೆಯ ಸದಸ್ಯರು ವಿವಿಧ ಇಲಾಖೆಯ ಇಲಾಖಾಧಿಕಾರಿಗಳು ಇದ್ದರು.</p><p>ತಹಶೀಲ್ದಾರ್ ಕಾರ್ಯಾಲಯದ ಆವರಣದಲ್ಲಿ ನಡೆದ ಶ್ರಮದಾನ, ಸ್ವಚ್ಚತೆ ಕಾರ್ಯಕ್ರಮದಲ್ಲಿ ಶಾಸಕ ಆರ್.ವಿ.ದೇಶಪಾಂಡೆ, ವಿವಿಧ ಇಲಾಖಾಧಿಕಾರಿಗಳು ಪುರಸಭೆಯ ಸದಸ್ಯರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಳಿಯಾಳ:</strong> ಮಹಾತ್ಮ ಗಾಂಧೀಜಿಯವರ ನ್ಯಾಯ ಮತ್ತು ಸತ್ಯಕ್ಕಾಗಿ ನಡೆಸಿದ ಹೋರಾಟವನ್ನು ಸ್ಮರಿಸಿ ಯುವ ಜನಾಂಗ ಜಾಗೃತರಾಗಬೇಕೆಂದು ಶಾಸಕ ಆರ್.ವಿ.ದೇಶಪಾಂಡೆ ಹೇಳಿದರು.</p><p>ಇಲ್ಲಿನ ತಹಶೀಲ್ದಾರ್ ಕಾರ್ಯಾ ಲಯದಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮವನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು.</p><p>ಗಾಂಧೀಜಿಯವರ ತತ್ವದಂತೆ ಅಸ್ಪೃಶ್ಯತೆ ನಿರ್ಮೂಲನೆ, ಸ್ವಚ್ಛತೆ, ಶ್ರಮದಾನ ನಿರಂತರವಾಗಿ ನಡೆಸಲು ಎಲ್ಲರೂ ಪಣತೊಡಬೇಕು. ರಾಷ್ಟ್ರ ನಾಯಕರ ಪರಿಚಯಿಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳ ಬೇಕು ಎಂದರು.</p><p>‘ಭಾರತದ 2ನೇ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿಯವರು ಕಲೆ, ಸಂಸ್ಕೃತಿ, ವಿವಿಧ ಧಾರ್ಮಿಕ ನಂಬಿಕೆಗಳನ್ನು ಗೌರವಿಸುತ್ತಾ ಸರಳ ಜೀವನ ಶೈಲಿ, ನಿಷ್ಠೆ, ಪ್ರಾಮಾಣಿಕತೆಯಿಂದ ಸತ್ಯದ ದಾರಿಯಲ್ಲಿ ಹೆಜ್ಜೆ ಹಾಕಿದವರು. ಅವರ ಆದರ್ಶ ಗುಣಗಳನ್ನು ಜೀವನದಲ್ಲಿ ಅಳವಡಿಸಿ ಕೊಳ್ಳಿ’ ಎಂದರು.</p><p>ಸುಮಾ ಹಡಪದ, ಕಿರಣ ಜಕಲಿ, ಬಸವರಾಜ ಹಡಪದ, ಮಂಜುಳಾ ತಂಡದವರಿಂದ ಗಾಂಧೀಜಿಯವರ ಕುರಿತು ದೇಶಭಕ್ತಿ ಗೀತೆಯನ್ನು ಸಾದರ ಪಡಿಸಲಾಯಿತು.</p><p>ಪುರಸಭೆ ಅಧ್ಯಕ್ಷೆ ದ್ರೌಪದಿ ಅಗಸರ, ತಹಶೀಲ್ದಾರ ಪಿರೋಜಷಾ ಸೋಮನಕಟ್ಟಿ, ರಮೇಶ ಪಾಟೀಲ, ಪುರಸಭೆಯ ಸದಸ್ಯರು ವಿವಿಧ ಇಲಾಖೆಯ ಇಲಾಖಾಧಿಕಾರಿಗಳು ಇದ್ದರು.</p><p>ತಹಶೀಲ್ದಾರ್ ಕಾರ್ಯಾಲಯದ ಆವರಣದಲ್ಲಿ ನಡೆದ ಶ್ರಮದಾನ, ಸ್ವಚ್ಚತೆ ಕಾರ್ಯಕ್ರಮದಲ್ಲಿ ಶಾಸಕ ಆರ್.ವಿ.ದೇಶಪಾಂಡೆ, ವಿವಿಧ ಇಲಾಖಾಧಿಕಾರಿಗಳು ಪುರಸಭೆಯ ಸದಸ್ಯರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>