ನಂತರ ಪ್ರಸಿದ್ಧ ಕಲಾವಿದರ ಕೂಡುವಿಕೆಯಲ್ಲಿ ‘ಜ್ವಾಲಾ ಪ್ರತಾಪ’ ಯಕ್ಷಗಾನ ಆಖ್ಯಾನ ಪ್ರದರ್ಶನಗೊಳ್ಳಲಿದೆ. ಸೆ.7ರ ಬೆಳಿಗ್ಗೆ 10ರಿಂದ ಸಂಜೆ 5.30ರವರೆಗೆ ಮಕ್ಕಳ ತಾಳಮದ್ದಲೆ ಸ್ಪರ್ಧೆ, ನಂತರ ಸಾಗರ ಹೊಸೂರು ಭಾರತಿ ಕಲಾ ಪ್ರತಿಷ್ಠಾನದ ಸದಸ್ಯರಿಂದ ‘ರಾವಣ ವಧೆ’ ಯಕ್ಷಗಾನ, ಸೆ.8ರ ಬೆಳಿಗ್ಗೆ 10ರಿಂದ ಮತ್ತೆ ತಾಳಮದ್ದಲೆ ಸ್ಪರ್ಧೆ ಸಂಜೆ 5ಕ್ಕೆ ಸಮಾರೋಪ ಕಾರ್ಯಕ್ರಮ ನಡೆಯುತ್ತದೆ. ಹಿರಿಯ ಕಲಾವಿದರಾದ ಸೀತಾರಾಮ ಹೆಗಡೆ ಹೊಸ್ತೋಟ, ಸುಬ್ರಾಯ ಭಾಗವತ ಕವಾಳೆ ಅವರನ್ನು ಸನ್ಮಾನಿಸಲಾಗುತ್ತದೆ. ಹಿರಿಯ ಭಾಗವತ ಹೊಸ್ತೋಟ ಮಂಜುನಾಥ ಭಾಗವತ, ಕುಮಟಾದ ಯಕ್ಷಗಾನ ಸಂಶೋಧನಾ ಕೇಂದ್ರದ ಅಧ್ಯಕ್ಷ ಡಾ.ಜಿ.ಎಲ್.ಹೆಗಡೆ, ಗ್ರಾಮೀಣ ಅಭಿವೃದ್ಧಿ ತಜ್ಞ ಪ್ರಕಾಶ ಭಟ್ ಭಾಗವಹಿಸುವರು ಎಂದು ತಿಳಿಸಿದರು.