ನಗರದಲ್ಲಿ ಶುಕ್ರವಾರ ಮಾತನಾಡಿದ ಅವರು, ‘ಕೆನರಾ ಕ್ಷೇತ್ರದ ಸಂಸದೆ ಆಗಿದ್ದ ವೇಳೆ ಸಂಸತ್ ಅಧಿವೇಶನದಲ್ಲಿ ಅರಣ್ಯವಾಸಿಗಳ ಸಮಸ್ಯೆಗಳ ಕುರಿತು ಸರ್ಕಾರದ ಗಮನಸೆಳೆದಿದ್ದೆ. ಇಂದಿಗೂ ಅರಣ್ಯ ಕಾಯ್ದೆ ಮೂಲಕ ಅರಣ್ಯವಾಸಿಗಳಿಗೆ ಭೂಮಿ ಹಕ್ಕು ದೊರಕದಿರುವುದು ಬೇಸರದ ಸಂಗತಿಯಾಗಿದೆ. ಇದು ಜನಪ್ರತಿನಿಧಿಗಳ ಇಚ್ಛಾಶಕ್ತಿಯ ಕೊರತೆ ಪ್ರತಿಬಿಂಬಿಸಿದೆ’ ಎಂದರು.