ಇದಕ್ಕೆ ಪ್ರತಿಕ್ರಿಯಿಸಿದ ಅಧ್ಯಕ್ಷೆ ಶ್ರೀಲತಾ ಕಾಳೇರಮನೆ, ಉಪಾಧ್ಯಕ್ಷ ಚಂದ್ರು ದೇವಾಡಿಗ ಅವರು, ‘ತಾಲ್ಲೂಕಿನ ಇನ್ನೂ ಹೆಚ್ಚಿನ ತೋಟಗಾರಿಕಾ ಬೆಳೆ ಹಾನಿಯಾಗಿದೆ. ಇಷ್ಟು ಕಡಿಮೆ ತೋರಿಸಿದ್ದು ಹೇಗೆ’ ಎಂದು ಪ್ರಶ್ನಿಸಿದರು. ತೋಟಗಾರಿಕಾ ಇಲಾಖೆ ಅಧಿಕಾರಿ ಮಾಹಿತಿ ನೀಡಿ, ‘ಇಲಾಖೆ ಸಮೀಕ್ಷೆ ಪ್ರಕಾರ 136 ಹೆಕ್ಟೇರ್ ಹಾನಿ ವರದಿ ಸಿದ್ಧಪಡಿಸಲಾಗಿದೆ’ ಎಂದರು.