<p><strong>ಕಾರವಾರ:</strong> ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಉತ್ತರ ಕನ್ನಡ ಜಿಲ್ಲೆಯ ಎರಡೂ ಶೈಕ್ಷಣಿಕ ಜಿಲ್ಲೆಗಳ 19 ಕೇಂದ್ರಗಳಲ್ಲಿ ಭಾನುವಾರ ಸುಗಮವಾಗಿ ನಡೆಯಿತು.</p>.<p>ಕಾರವಾರ ಶೈಕ್ಷಣಿಕ ಜಿಲ್ಲೆ ವ್ಯಾಪ್ತಿಯಲ್ಲಿ ಕಾರವಾರ ನಗರದ 11 ಕೇಂದ್ರಗಳಲ್ಲಿ, ಶಿರಸಿ ಶೈಕ್ಷಣಿಕ ಜಿಲ್ಲೆ ವ್ಯಾಪ್ತಿಗೆ ಶಿರಸಿ ನಗರದ 8 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಯಿತು. ಪರೀಕ್ಷೆ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಪರೀಕ್ಷೆ ಆರಂಭಕ್ಕೆ ಎರಡು ತಾಸು ಮುನ್ನವೇ ಅಭ್ಯರ್ಥಿಗಳು ಹಾಜರಾಗಲು ಸೂಚನೆ ನೀಡಲಾಗಿತ್ತು.</p>.<p>ಬೆಳಿಗ್ಗೆ ನಡೆದ ಮೊದಲ ಪರೀಕ್ಷೆಯಲ್ಲಿ ಕಾರವಾರದ ಕೇಂದ್ರಗಳಲ್ಲಿ ನೋಂದಾಯಿಸಿಕೊಂಡಿದ್ದ 1,089 ಅಭ್ಯರ್ಥಿಗಳ ಪೈಕಿ 983 ಮಂದಿ ಪರೀಕ್ಷೆಗೆ ಹಾಜರಾಗಿದ್ದರೆ, 106 ಮಂದಿ ಗೈರಾಗಿದ್ದರು. ಶಿರಸಿಯಲ್ಲಿ ನೋಂದಾಯಿಸಿಕೊಂಡಿದ್ದ 990 ಅಭ್ಯರ್ಥಿಗಳ ಪೈಕಿ 935 ಅಭ್ಯರ್ಥಿಗಳು ಹಾಜರಾಗಿದ್ದು, 55 ಮಂದಿ ಗೈರಾಗಿದ್ದರು.</p>.<p>ಮಧ್ಯಾಹ್ನ ನಡೆದ ಎರಡನೇ ಪರೀಕ್ಷೆಯಲ್ಲಿ ಕಾರವಾರದಲ್ಲಿ ನೋಂದಾಯಿತ 2,498 ಅಭ್ಯರ್ಥಿಗಳ ಪೈಕಿ 2,330 ಅಭ್ಯರ್ಥಿಗಳು ಪರೀಕ್ಷೆ ಬರೆದರು. 168 ಮಂದಿ ಗೈರಾದರು. ಶಿರಸಿಯಲ್ಲಿ 1,857 ಅಭ್ಯರ್ಥಿಗಳ ಪೈಕಿ 1,776 ಮಂದಿ ಪರೀಕ್ಷೆ ಬರೆದರೆ, 81 ಮಂದಿ ಗೈರಾಗಿದ್ದರು.</p>.<p>‘ಪರೀಕ್ಷೆಯನ್ನು ಕಟ್ಟುನಿಟ್ಟಾಗಿ ಹಾಗೂ ಪಾರದರ್ಶಕವಾಗಿ ನಡೆಸಲಾಗಿದೆ. ಯಾವುದೇ ಅಹಿಕರ ಘಟನೆಗೆ ಆಸ್ಪದ ನೀಡಿಲ್ಲ. ಭಿಗಿ ಪೊಲೀಸ್ ಬಂದೋಬಸ್ತ್ ನಡುವೆ ಪರೀಕ್ಷೆ ನಡೆದಿದೆ’ ಎಂದು ಎರಡೂ ಶೈಕ್ಷಣಿಕ ಜಿಲ್ಲೆಯ ಡಿಡಿಪಿಐಗಳು ಪ್ರತಿಕ್ರಿಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ:</strong> ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಉತ್ತರ ಕನ್ನಡ ಜಿಲ್ಲೆಯ ಎರಡೂ ಶೈಕ್ಷಣಿಕ ಜಿಲ್ಲೆಗಳ 19 ಕೇಂದ್ರಗಳಲ್ಲಿ ಭಾನುವಾರ ಸುಗಮವಾಗಿ ನಡೆಯಿತು.</p>.<p>ಕಾರವಾರ ಶೈಕ್ಷಣಿಕ ಜಿಲ್ಲೆ ವ್ಯಾಪ್ತಿಯಲ್ಲಿ ಕಾರವಾರ ನಗರದ 11 ಕೇಂದ್ರಗಳಲ್ಲಿ, ಶಿರಸಿ ಶೈಕ್ಷಣಿಕ ಜಿಲ್ಲೆ ವ್ಯಾಪ್ತಿಗೆ ಶಿರಸಿ ನಗರದ 8 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಯಿತು. ಪರೀಕ್ಷೆ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಪರೀಕ್ಷೆ ಆರಂಭಕ್ಕೆ ಎರಡು ತಾಸು ಮುನ್ನವೇ ಅಭ್ಯರ್ಥಿಗಳು ಹಾಜರಾಗಲು ಸೂಚನೆ ನೀಡಲಾಗಿತ್ತು.</p>.<p>ಬೆಳಿಗ್ಗೆ ನಡೆದ ಮೊದಲ ಪರೀಕ್ಷೆಯಲ್ಲಿ ಕಾರವಾರದ ಕೇಂದ್ರಗಳಲ್ಲಿ ನೋಂದಾಯಿಸಿಕೊಂಡಿದ್ದ 1,089 ಅಭ್ಯರ್ಥಿಗಳ ಪೈಕಿ 983 ಮಂದಿ ಪರೀಕ್ಷೆಗೆ ಹಾಜರಾಗಿದ್ದರೆ, 106 ಮಂದಿ ಗೈರಾಗಿದ್ದರು. ಶಿರಸಿಯಲ್ಲಿ ನೋಂದಾಯಿಸಿಕೊಂಡಿದ್ದ 990 ಅಭ್ಯರ್ಥಿಗಳ ಪೈಕಿ 935 ಅಭ್ಯರ್ಥಿಗಳು ಹಾಜರಾಗಿದ್ದು, 55 ಮಂದಿ ಗೈರಾಗಿದ್ದರು.</p>.<p>ಮಧ್ಯಾಹ್ನ ನಡೆದ ಎರಡನೇ ಪರೀಕ್ಷೆಯಲ್ಲಿ ಕಾರವಾರದಲ್ಲಿ ನೋಂದಾಯಿತ 2,498 ಅಭ್ಯರ್ಥಿಗಳ ಪೈಕಿ 2,330 ಅಭ್ಯರ್ಥಿಗಳು ಪರೀಕ್ಷೆ ಬರೆದರು. 168 ಮಂದಿ ಗೈರಾದರು. ಶಿರಸಿಯಲ್ಲಿ 1,857 ಅಭ್ಯರ್ಥಿಗಳ ಪೈಕಿ 1,776 ಮಂದಿ ಪರೀಕ್ಷೆ ಬರೆದರೆ, 81 ಮಂದಿ ಗೈರಾಗಿದ್ದರು.</p>.<p>‘ಪರೀಕ್ಷೆಯನ್ನು ಕಟ್ಟುನಿಟ್ಟಾಗಿ ಹಾಗೂ ಪಾರದರ್ಶಕವಾಗಿ ನಡೆಸಲಾಗಿದೆ. ಯಾವುದೇ ಅಹಿಕರ ಘಟನೆಗೆ ಆಸ್ಪದ ನೀಡಿಲ್ಲ. ಭಿಗಿ ಪೊಲೀಸ್ ಬಂದೋಬಸ್ತ್ ನಡುವೆ ಪರೀಕ್ಷೆ ನಡೆದಿದೆ’ ಎಂದು ಎರಡೂ ಶೈಕ್ಷಣಿಕ ಜಿಲ್ಲೆಯ ಡಿಡಿಪಿಐಗಳು ಪ್ರತಿಕ್ರಿಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>