<p><strong>ಕಾರವಾರ:</strong> ‘ಜಿಲ್ಲೆಯಲ್ಲಿ ನೆರೆಯಿಂದ ಆಗಿರುವ ಹಾನಿಯ ಬಗ್ಗೆ ಮುಖ್ಯಮಂತ್ರಿ ಬಳಿಗೆ ನಿಯೋಗ ತೆರಳಿ ವಿವರಿಸಲಾಗುವುದು. ಪರಿಹಾರ ಕಾರ್ಯಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಮಾಡುವ ಬಗ್ಗೆಅವರ ನೇತೃತ್ವದಲ್ಲಿ ನಿರ್ಧರಿಸಲಾಗುವುದು’ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.</p>.<p>ಸಚಿವರಾದ ಬಳಿಕ ಮಂಗಳವಾರ ಇದೇ ಮೊದಲ ಬಾರಿಗೆ ನಗರಕ್ಕೆ ಭೇಟಿ ನೀಡಿ ಅವರು, ಪ್ರವಾಹದ ಪರಿಹಾರ ಸಂಬಂಧ ಸಭೆ ಹಮ್ಮಿಕೊಂಡರು.</p>.<p>‘ಶತಮಾನದಲ್ಲೇ ಕಂಡು ಕೇಳರಿಯದಂಥ ಪ್ರವಾಹ ಈ ವರ್ಷವಾಗಿದೆ.ಅನುಭವದ ಕೊರತೆಯ ನಡುವೆಯೂ ಪ್ರಾಕೃತಿಕ ವಿಕೋಪವನ್ನು ಅಧಿಕಾರಿಗಳು, ಜನಪ್ರತಿನಿಧಿಗಳು ಸಮರ್ಪಕವಾಗಿ ನಿಭಾಯಿಸಿದ್ದಾರೆ’ ಎಂದು ಮೆಚ್ಚುಗೆ ಸೂಚಿಸಿದರು.</p>.<p class="Subhead">ಜನರಿಗೆ ತೊಂದರೆಯಾಗದಿರಲಿ:‘ನೆರೆಯಿಂದ ಹಲವು ಅನಧಿಕೃತ ಮನೆಗಳಿಗೂ ಹಾನಿಯಾಗಿದೆ. ಅವರಿಗೂ ಶಾಶ್ವತ ಪರಿಹಾರ ನೀಡುವ ನಿಟ್ಟಿನಲ್ಲಿ ಕೆಲಸವಾಗಬೇಕಿದೆ’ ಎಂದು ಶಾಸಕಿ ರೂಪಾಲಿ ನಾಯ್ಕ ಗಮನ ಸೆಳೆದರು.</p>.<p>ಈ ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್, ‘ಇದಕ್ಕೆ ಕಾನೂನು ತೊಡಕು ಉಂಟಾಗುತ್ತದೆ.ಒತ್ತುವರಿ ಜಮೀನಿನಲ್ಲಿ ಮನೆಗಳನ್ನು ನಿರ್ಮಿಸಿಕೊಂಡವರುಜಿಲ್ಲಾಡಳಿತ ತೋರಿಸಿದ ಜಾಗದಲ್ಲಿ ಮನೆ ನಿರ್ಮಿಸಿಕೊಳ್ಳಲು ₹ 5 ಲಕ್ಷ ನೀಡಲಾಗುತ್ತದೆ’ ಎಂದರು.</p>.<p>ಸಚಿವೆ ಶಶಿಕಲಾ ಮಾತನಾಡಿ, ‘ಸಂತ್ರಸ್ತರಿಗೆ ನೋವಾಗಬಾರದು, ಕಾನೂನು ಉಲ್ಲಂಘನೆ ಕೂಡ ಆಗಬಾರದು. ಆ ರೀತಿಯಲ್ಲಿ ಕೆಲಸ ಮಾಡೋಣ’ ಎಂದು ಸಲಹೆ ನೀಡಿದರು.</p>.<p class="Subhead"><strong>‘ಭಯದ ಅಗತ್ಯವಿಲ್ಲ’:</strong>‘ಒತ್ತುವರಿ ಜಮೀನಿನಲ್ಲಿ ಮನೆಯಿದ್ದವರಿಂದ ಅಫಿಡವಿಟ್ ಪಡೆದುಕೊಂಡು ಅವರಿಗೆ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಮನೆ ನಿರ್ಮಿಸಬಹುದು. ಈ ಮೂಲಕ ಅವರಿಗೆ ₹ 5 ಲಕ್ಷ ನೀಡಲು ಅವಕಾಶವಿದೆ.ಅಫಿಡವಿಟ್ ನೀಡಿದರೆ ತಮ್ಮನ್ನು ಮುಂದೊಂದು ದಿನ ತೆರವು ಮಾಡುತ್ತಾರೆ ಎಂಬ ಯಾವುದೇ ಭಯ ಬೇಡ’ ಎಂದರು.</p>.<p>ಜಿಲ್ಲಾ ಪಂಚಾಯ್ತಿ ಸದಸ್ಯೆ ಉಷಾ ಹೆಗಡೆ ಮಾತನಾಡಿ, ‘ಈ ಬಾರಿ ಮಳೆ, ನೀತಿ ಸಂಹಿತೆಗಳ ಕಾರಣದಿಂದ ಯಾವುದೇ ಕಾಮಗಾರಿಗಳನ್ನು ಮಾಡಲು ಸಾಧ್ಯವಾಗಿಲ್ಲ. ಆದ್ದರಿಂದ ₹ 5 ಲಕ್ಷದ ಒಳಗಿನ ತುರ್ತು ಕಾಮಗಾರಿಗಳನ್ನು ಟೆಂಡರ್ ಕರೆಯದೇ ಮಾಡಲು ಅವಕಾಶ ಕೊಡಬೇಕು’ ಎಂದು ಒತ್ತಾಯಿಸಿದರು.</p>.<p class="Subhead"><strong>‘ಉನ್ನತ ಮಟ್ಟದ ತನಿಖೆಯಾಗಲಿ’:</strong>‘ಕದ್ರಾ ಅಣೆಕಟ್ಟೆಯಿಂದ ಏಕಾಏಕಿ ನೀರು ಬಿಟ್ಟಾಗಲೇ ಗಂಗಾವಳಿ ನದಿಯಲ್ಲೂ ಪ್ರವಾಹವಾಗಿದೆ. ಇಷ್ಟು ವರ್ಷದಲ್ಲಿ ಆಗದ್ದು ಈ ವರ್ಷಯಾಕಾಗಿದೆ? ಈ ಬಗ್ಗೆ ತನಿಖೆಯಾಗಬೇಕು’ ಎಂದು ರೂಪಾಲಿ ನಾಯ್ಕ ಆಗ್ರಹಿಸಿದರು.</p>.<p>ಕೆಪಿಸಿಎಲ್ಅಧಿಕಾರಿಗಳು ಮಾತನಾಡಿ, ‘ತಜ್ಞರ ತಂಡ ಬಂದು ಅಣೆಕಟ್ಟೆಗಳ ಸ್ಥಿತಿಗತಿಗಳನ್ನು ಪರಿಶೀಲಿಸಿದ್ದು,ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ. ಅವರು ಸೂಚಿಸಿದಂತೆ ನಿರ್ವಹನೆ ಮಾಡುತ್ತಿದ್ದೇವೆ’ ಎಂದರು.</p>.<p>ಇದೇವೇಳೆ ಮಾತನಾಡಿದ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮೊಹಮ್ಮದ್ ರೋಶನ್, ‘ಅಣೆಕಟ್ಟೆಗಳಿರುವ ಪ್ರದೇಶದ ನದಿಪಾತ್ರದ ಗ್ರಾಮಗಳಲ್ಲಿ ನದಿಗೆ ನೀರು ಹರಿಸುವ ಮುನ್ಸೂಚನೆ ನೀಡುವ ವ್ಯವಸ್ಥೆಯನ್ನು ಕೆಪಿಸಿಎಲ್ ಅಳವಡಿಸಿಕೊಳ್ಳಬೇಕು’ ಎಂದು ಅಭಿಪ್ರಾಯಪಟ್ಟರು.</p>.<p>ಶಾಸಕರಾದ ದಿನಕರ ಶೆಟ್ಟಿ, ಸುನೀಲ್ ನಾಯ್ಕ, ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಜಯಶ್ರೀ ಮೊಗೇರ, ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶದೇವರಾಜು, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮೊಹಮ್ಮದ್ ರೋಶನ್, ಹೆಚ್ಚುವರಿ ಜಿಲ್ಲಾಧಿಕಾರಿ ನಾಗರಾಜ ಸಿಂಗ್ರೇರ್ ವೇದಿಕೆಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ:</strong> ‘ಜಿಲ್ಲೆಯಲ್ಲಿ ನೆರೆಯಿಂದ ಆಗಿರುವ ಹಾನಿಯ ಬಗ್ಗೆ ಮುಖ್ಯಮಂತ್ರಿ ಬಳಿಗೆ ನಿಯೋಗ ತೆರಳಿ ವಿವರಿಸಲಾಗುವುದು. ಪರಿಹಾರ ಕಾರ್ಯಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಮಾಡುವ ಬಗ್ಗೆಅವರ ನೇತೃತ್ವದಲ್ಲಿ ನಿರ್ಧರಿಸಲಾಗುವುದು’ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.</p>.<p>ಸಚಿವರಾದ ಬಳಿಕ ಮಂಗಳವಾರ ಇದೇ ಮೊದಲ ಬಾರಿಗೆ ನಗರಕ್ಕೆ ಭೇಟಿ ನೀಡಿ ಅವರು, ಪ್ರವಾಹದ ಪರಿಹಾರ ಸಂಬಂಧ ಸಭೆ ಹಮ್ಮಿಕೊಂಡರು.</p>.<p>‘ಶತಮಾನದಲ್ಲೇ ಕಂಡು ಕೇಳರಿಯದಂಥ ಪ್ರವಾಹ ಈ ವರ್ಷವಾಗಿದೆ.ಅನುಭವದ ಕೊರತೆಯ ನಡುವೆಯೂ ಪ್ರಾಕೃತಿಕ ವಿಕೋಪವನ್ನು ಅಧಿಕಾರಿಗಳು, ಜನಪ್ರತಿನಿಧಿಗಳು ಸಮರ್ಪಕವಾಗಿ ನಿಭಾಯಿಸಿದ್ದಾರೆ’ ಎಂದು ಮೆಚ್ಚುಗೆ ಸೂಚಿಸಿದರು.</p>.<p class="Subhead">ಜನರಿಗೆ ತೊಂದರೆಯಾಗದಿರಲಿ:‘ನೆರೆಯಿಂದ ಹಲವು ಅನಧಿಕೃತ ಮನೆಗಳಿಗೂ ಹಾನಿಯಾಗಿದೆ. ಅವರಿಗೂ ಶಾಶ್ವತ ಪರಿಹಾರ ನೀಡುವ ನಿಟ್ಟಿನಲ್ಲಿ ಕೆಲಸವಾಗಬೇಕಿದೆ’ ಎಂದು ಶಾಸಕಿ ರೂಪಾಲಿ ನಾಯ್ಕ ಗಮನ ಸೆಳೆದರು.</p>.<p>ಈ ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್, ‘ಇದಕ್ಕೆ ಕಾನೂನು ತೊಡಕು ಉಂಟಾಗುತ್ತದೆ.ಒತ್ತುವರಿ ಜಮೀನಿನಲ್ಲಿ ಮನೆಗಳನ್ನು ನಿರ್ಮಿಸಿಕೊಂಡವರುಜಿಲ್ಲಾಡಳಿತ ತೋರಿಸಿದ ಜಾಗದಲ್ಲಿ ಮನೆ ನಿರ್ಮಿಸಿಕೊಳ್ಳಲು ₹ 5 ಲಕ್ಷ ನೀಡಲಾಗುತ್ತದೆ’ ಎಂದರು.</p>.<p>ಸಚಿವೆ ಶಶಿಕಲಾ ಮಾತನಾಡಿ, ‘ಸಂತ್ರಸ್ತರಿಗೆ ನೋವಾಗಬಾರದು, ಕಾನೂನು ಉಲ್ಲಂಘನೆ ಕೂಡ ಆಗಬಾರದು. ಆ ರೀತಿಯಲ್ಲಿ ಕೆಲಸ ಮಾಡೋಣ’ ಎಂದು ಸಲಹೆ ನೀಡಿದರು.</p>.<p class="Subhead"><strong>‘ಭಯದ ಅಗತ್ಯವಿಲ್ಲ’:</strong>‘ಒತ್ತುವರಿ ಜಮೀನಿನಲ್ಲಿ ಮನೆಯಿದ್ದವರಿಂದ ಅಫಿಡವಿಟ್ ಪಡೆದುಕೊಂಡು ಅವರಿಗೆ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಮನೆ ನಿರ್ಮಿಸಬಹುದು. ಈ ಮೂಲಕ ಅವರಿಗೆ ₹ 5 ಲಕ್ಷ ನೀಡಲು ಅವಕಾಶವಿದೆ.ಅಫಿಡವಿಟ್ ನೀಡಿದರೆ ತಮ್ಮನ್ನು ಮುಂದೊಂದು ದಿನ ತೆರವು ಮಾಡುತ್ತಾರೆ ಎಂಬ ಯಾವುದೇ ಭಯ ಬೇಡ’ ಎಂದರು.</p>.<p>ಜಿಲ್ಲಾ ಪಂಚಾಯ್ತಿ ಸದಸ್ಯೆ ಉಷಾ ಹೆಗಡೆ ಮಾತನಾಡಿ, ‘ಈ ಬಾರಿ ಮಳೆ, ನೀತಿ ಸಂಹಿತೆಗಳ ಕಾರಣದಿಂದ ಯಾವುದೇ ಕಾಮಗಾರಿಗಳನ್ನು ಮಾಡಲು ಸಾಧ್ಯವಾಗಿಲ್ಲ. ಆದ್ದರಿಂದ ₹ 5 ಲಕ್ಷದ ಒಳಗಿನ ತುರ್ತು ಕಾಮಗಾರಿಗಳನ್ನು ಟೆಂಡರ್ ಕರೆಯದೇ ಮಾಡಲು ಅವಕಾಶ ಕೊಡಬೇಕು’ ಎಂದು ಒತ್ತಾಯಿಸಿದರು.</p>.<p class="Subhead"><strong>‘ಉನ್ನತ ಮಟ್ಟದ ತನಿಖೆಯಾಗಲಿ’:</strong>‘ಕದ್ರಾ ಅಣೆಕಟ್ಟೆಯಿಂದ ಏಕಾಏಕಿ ನೀರು ಬಿಟ್ಟಾಗಲೇ ಗಂಗಾವಳಿ ನದಿಯಲ್ಲೂ ಪ್ರವಾಹವಾಗಿದೆ. ಇಷ್ಟು ವರ್ಷದಲ್ಲಿ ಆಗದ್ದು ಈ ವರ್ಷಯಾಕಾಗಿದೆ? ಈ ಬಗ್ಗೆ ತನಿಖೆಯಾಗಬೇಕು’ ಎಂದು ರೂಪಾಲಿ ನಾಯ್ಕ ಆಗ್ರಹಿಸಿದರು.</p>.<p>ಕೆಪಿಸಿಎಲ್ಅಧಿಕಾರಿಗಳು ಮಾತನಾಡಿ, ‘ತಜ್ಞರ ತಂಡ ಬಂದು ಅಣೆಕಟ್ಟೆಗಳ ಸ್ಥಿತಿಗತಿಗಳನ್ನು ಪರಿಶೀಲಿಸಿದ್ದು,ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ. ಅವರು ಸೂಚಿಸಿದಂತೆ ನಿರ್ವಹನೆ ಮಾಡುತ್ತಿದ್ದೇವೆ’ ಎಂದರು.</p>.<p>ಇದೇವೇಳೆ ಮಾತನಾಡಿದ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮೊಹಮ್ಮದ್ ರೋಶನ್, ‘ಅಣೆಕಟ್ಟೆಗಳಿರುವ ಪ್ರದೇಶದ ನದಿಪಾತ್ರದ ಗ್ರಾಮಗಳಲ್ಲಿ ನದಿಗೆ ನೀರು ಹರಿಸುವ ಮುನ್ಸೂಚನೆ ನೀಡುವ ವ್ಯವಸ್ಥೆಯನ್ನು ಕೆಪಿಸಿಎಲ್ ಅಳವಡಿಸಿಕೊಳ್ಳಬೇಕು’ ಎಂದು ಅಭಿಪ್ರಾಯಪಟ್ಟರು.</p>.<p>ಶಾಸಕರಾದ ದಿನಕರ ಶೆಟ್ಟಿ, ಸುನೀಲ್ ನಾಯ್ಕ, ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಜಯಶ್ರೀ ಮೊಗೇರ, ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶದೇವರಾಜು, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮೊಹಮ್ಮದ್ ರೋಶನ್, ಹೆಚ್ಚುವರಿ ಜಿಲ್ಲಾಧಿಕಾರಿ ನಾಗರಾಜ ಸಿಂಗ್ರೇರ್ ವೇದಿಕೆಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>