‘ಕಾನಸೂರು ಮತ್ತು ಹತ್ತರಗಿಯಲ್ಲಿ ವಿದ್ಯುತ್ ಉಪಕೇಂದ್ರ ಪ್ರಸ್ತಾವ ಅನೇಕ ವರ್ಷಗಳಿಂದ ನನೆಗುದಿಗೆ ಬಿದ್ದಿದೆ. ಕಾನಸೂರಿನಲ್ಲಿ ಗ್ರಿಡ್ ಮಾಡಿದರೆ, ಶಿರಸಿಗೆ ಕುಡಿಯುವ ನೀರು ಸರಬರಾಜು ಮಾಡುವ ಮಾರಿಗದ್ದೆಯಲ್ಲಿ ಆಗುವ ವಿದ್ಯುತ್ ವ್ಯತ್ಯಯ ತಪ್ಪುತ್ತದೆ. ಕಂದಾಯ, ಅರಣ್ಯ ಇಲಾಖೆ ಹಾಗೂ ಕೆಪಿಟಿಸಿಎಲ್ ಅಧಿಕಾರಿಗಳು ಒಟ್ಟಿಗೆ ಕುಳಿತು ಚರ್ಚಿಸಿ, ಸಮಸ್ಯೆ ಇತ್ಯರ್ಥಗೊಳಿಸಬಹುದಿತ್ತು. ಆದರೆ, ಈ ಪ್ರಸ್ತಾವದ ಕಡತ ಕಚೇರಿಯಿಂದ ಕಚೇರಿಗೆ ಅಲೆಯುತ್ತಿದೆಯೇ ವಿನಾ, ಕಾರ್ಯಾನುಷ್ಠಾನಕ್ಕೆ ಪ್ರಯತ್ನ ನಡೆದಿಲ್ಲ’ ಎಂದು ವಿದ್ಯುತ್ ಗ್ರಾಹಕ ಗಣೇಶ ಎಚ್ ಬೇಸರಿಸಿಕೊಂಡರು.