<p><strong>ಮುಂಡಗೋಡ</strong>: ಪಟ್ಟಣಕ್ಕೆ ಕುಡಿಯುವ ನೀರು ಸರಬರಾಜು ಆಗುವ ಸನವಳ್ಳಿ ಜಲಾಶಯಕ್ಕೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದು ಬರುತ್ತಿಲ್ಲ.</p>.<p>ಜಲಾಶಯಕ್ಕೆ ಮಳೆಯ ನೀರು ಹರಿಸುವ ಪೂರಕ ಕಾಲುವೆಗಳ ಅಸಮರ್ಪಕ ನಿರ್ವಹಣೆಯಿಂದ ಮಳೆಯ ನೀರು ಜಲಾಶಯ ಸೇರದೇ, ಅರಣ್ಯದಲ್ಲಿ ಹರಿದು ಹಳ್ಳ ಸೇರುತ್ತಿದೆ.</p>.<p>ಶಿಗ್ಗಾವಿ ತಾಲ್ಲೂಕಿನ ಗಡಿ ಭಾಗದಲ್ಲಿ ಸುರಿಯುವ ಮಳೆಯ ನೀರು, ತಾಲ್ಲೂಕಿನ ಸನವಳ್ಳಿ ಜಲಾಶಯಕ್ಕೆ ಸೇರುತ್ತದೆ. ದೋಣಿ ಹಳ್ಳದ ಮೂಲಕ ನೀರು ಜಲಾಶಯ ಸೇರುವಂತೆ ಮಾಡಲು, ತಾಲ್ಲೂಕಿನ ಗಡಿಭಾಗದ ಅರಣ್ಯದಲ್ಲಿ ಕಾಲುವೆ ನಿರ್ಮಿಸಲಾಗಿದೆ.</p>.<p>ಬಾಂದಾರದಲ್ಲಿ ಸೇರುವ ನೀರು ಅಲ್ಲಿಂದ ಕಾಲುವೆ ಮೂಲಕ ಜಲಾಶಯ ಸೇರಬೇಕು. ಆದರೆ, ಬಾಂದಾರದಿಂದ ಬಿದ್ದ ನೀರು, ಜಲಾಶಯ ಸೇರುತ್ತಿಲ್ಲ. ಕಾಲುವೆಯಲ್ಲಿ ಗಿಡಗಂಟಿಗಳು ಬೆಳೆದಿರುವುದು, ಹೂಳು ತುಂಬಿಕೊಂಡಿದೆ. ಇದರಿಂದಾಗಿ ನೀರು ಸರಾಗವಾಗಿ ಹರಿಯುತ್ತಿಲ್ಲ.</p>.<p> ಎರಡು ದಿನಗಳಿಂದ ಶಿಗ್ಗಾವಿ ಗಡಿಭಾಗದಲ್ಲಿ ರಭಸದ ಮಳೆ ಸುರಿಯುತ್ತಿದ್ದು, ಹೆಚ್ಚಿನ ಪ್ರಮಾಣದಲ್ಲಿ ನೀರು ಬಾಂದಾರದಲ್ಲಿ ಸಂಗ್ರಹಗೊಳ್ಳುತ್ತಿದೆ. ಆದರೆ, ಜಲಾಶಯ ಸೇರಲು ಸಾಕಷ್ಟು ಅಡೆತಡೆಗಳಿರುವುದರಿಂದ ಅರಣ್ಯದಲ್ಲಿ ಹರಿಯುತ್ತಿದೆ. </p>.<p>ʼಈ ವರ್ಷ ಸನವಳ್ಳಿ ಜಲಾಶಯ ಬರಿದಾಗುವ ಹಂತಕ್ಕೆ ಬಂದಿತ್ತು. ಅಷ್ಟರಲ್ಲಿಯೇ ಉತ್ತಮ ಮಳೆಯಾಗುತ್ತಿದ್ದು, ನೀರನ್ನು ಜಲಾಶಯಕ್ಕೆ ಹರಿದು ಬರುವಂತೆ ಮಾಡಲು ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ವಿಫಲರಾಗಿದ್ದಾರೆʼ ಎಂದು ಸನವಳ್ಳಿಯ ರೈತ ರಾಜು ಗುಬ್ಬಕ್ಕನವರ್ ಆರೋಪಿಸಿದರು.</p>.<p>‘ಮಳೆಯ ನೀರನ್ನು ವ್ಯರ್ಥ ಮಾಡುವುದು ಸರಿಯಲ್ಲ. ಸಂಬಂಧಿಸಿದ ಇಲಾಖೆಯವರು ಕೂಡಲೇ ಕ್ರಮ ಕೈಗೊಂಡು ಸನವಳ್ಳಿ ಜಲಾಶಯಕ್ಕೆ ಸರಾಗವಾಗಿ ನೀರು ಹರಿದುಬರುವಂತೆ ಕ್ರಮ ಕೈಗೊಳ್ಳಬೇಕುʼ ಎಂದು ರೈತ ಮಂಜುನಾಥ ಆಗ್ರಹಿಸಿದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಡಗೋಡ</strong>: ಪಟ್ಟಣಕ್ಕೆ ಕುಡಿಯುವ ನೀರು ಸರಬರಾಜು ಆಗುವ ಸನವಳ್ಳಿ ಜಲಾಶಯಕ್ಕೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದು ಬರುತ್ತಿಲ್ಲ.</p>.<p>ಜಲಾಶಯಕ್ಕೆ ಮಳೆಯ ನೀರು ಹರಿಸುವ ಪೂರಕ ಕಾಲುವೆಗಳ ಅಸಮರ್ಪಕ ನಿರ್ವಹಣೆಯಿಂದ ಮಳೆಯ ನೀರು ಜಲಾಶಯ ಸೇರದೇ, ಅರಣ್ಯದಲ್ಲಿ ಹರಿದು ಹಳ್ಳ ಸೇರುತ್ತಿದೆ.</p>.<p>ಶಿಗ್ಗಾವಿ ತಾಲ್ಲೂಕಿನ ಗಡಿ ಭಾಗದಲ್ಲಿ ಸುರಿಯುವ ಮಳೆಯ ನೀರು, ತಾಲ್ಲೂಕಿನ ಸನವಳ್ಳಿ ಜಲಾಶಯಕ್ಕೆ ಸೇರುತ್ತದೆ. ದೋಣಿ ಹಳ್ಳದ ಮೂಲಕ ನೀರು ಜಲಾಶಯ ಸೇರುವಂತೆ ಮಾಡಲು, ತಾಲ್ಲೂಕಿನ ಗಡಿಭಾಗದ ಅರಣ್ಯದಲ್ಲಿ ಕಾಲುವೆ ನಿರ್ಮಿಸಲಾಗಿದೆ.</p>.<p>ಬಾಂದಾರದಲ್ಲಿ ಸೇರುವ ನೀರು ಅಲ್ಲಿಂದ ಕಾಲುವೆ ಮೂಲಕ ಜಲಾಶಯ ಸೇರಬೇಕು. ಆದರೆ, ಬಾಂದಾರದಿಂದ ಬಿದ್ದ ನೀರು, ಜಲಾಶಯ ಸೇರುತ್ತಿಲ್ಲ. ಕಾಲುವೆಯಲ್ಲಿ ಗಿಡಗಂಟಿಗಳು ಬೆಳೆದಿರುವುದು, ಹೂಳು ತುಂಬಿಕೊಂಡಿದೆ. ಇದರಿಂದಾಗಿ ನೀರು ಸರಾಗವಾಗಿ ಹರಿಯುತ್ತಿಲ್ಲ.</p>.<p> ಎರಡು ದಿನಗಳಿಂದ ಶಿಗ್ಗಾವಿ ಗಡಿಭಾಗದಲ್ಲಿ ರಭಸದ ಮಳೆ ಸುರಿಯುತ್ತಿದ್ದು, ಹೆಚ್ಚಿನ ಪ್ರಮಾಣದಲ್ಲಿ ನೀರು ಬಾಂದಾರದಲ್ಲಿ ಸಂಗ್ರಹಗೊಳ್ಳುತ್ತಿದೆ. ಆದರೆ, ಜಲಾಶಯ ಸೇರಲು ಸಾಕಷ್ಟು ಅಡೆತಡೆಗಳಿರುವುದರಿಂದ ಅರಣ್ಯದಲ್ಲಿ ಹರಿಯುತ್ತಿದೆ. </p>.<p>ʼಈ ವರ್ಷ ಸನವಳ್ಳಿ ಜಲಾಶಯ ಬರಿದಾಗುವ ಹಂತಕ್ಕೆ ಬಂದಿತ್ತು. ಅಷ್ಟರಲ್ಲಿಯೇ ಉತ್ತಮ ಮಳೆಯಾಗುತ್ತಿದ್ದು, ನೀರನ್ನು ಜಲಾಶಯಕ್ಕೆ ಹರಿದು ಬರುವಂತೆ ಮಾಡಲು ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ವಿಫಲರಾಗಿದ್ದಾರೆʼ ಎಂದು ಸನವಳ್ಳಿಯ ರೈತ ರಾಜು ಗುಬ್ಬಕ್ಕನವರ್ ಆರೋಪಿಸಿದರು.</p>.<p>‘ಮಳೆಯ ನೀರನ್ನು ವ್ಯರ್ಥ ಮಾಡುವುದು ಸರಿಯಲ್ಲ. ಸಂಬಂಧಿಸಿದ ಇಲಾಖೆಯವರು ಕೂಡಲೇ ಕ್ರಮ ಕೈಗೊಂಡು ಸನವಳ್ಳಿ ಜಲಾಶಯಕ್ಕೆ ಸರಾಗವಾಗಿ ನೀರು ಹರಿದುಬರುವಂತೆ ಕ್ರಮ ಕೈಗೊಳ್ಳಬೇಕುʼ ಎಂದು ರೈತ ಮಂಜುನಾಥ ಆಗ್ರಹಿಸಿದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>