<p><strong>ಶಿರಸಿ</strong>: ಕೇರಳದ ಮೂಲದ ಇಬ್ಬರಿಗೆ ಬಂಗಾರ ನೀಡುವುದಾಗಿ ನಂಬಿಸಿ ದರೋಡೆ ಮಾಡಿದ ಐವರು ಆರೋಪಿಗಳನ್ನು ಶಿರಸಿ ಪೊಲೀಸರು ಬಂಧಿಸಿದ್ದಾರೆ.</p>.<p>ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಆನವಟ್ಟಿಯ ನಾಗಪ್ಪ ದೊಡ್ಡರಾಮಣ ಕೊರಚರ, ಅವಿನಾಶ ಕೊಟ್ರೇಶ ಕೊರಚರ, ನಿಸ್ಸಾರ್ ಅಹ್ಮದ್ ಮಹಮ್ಮದ್ ಜಾಫರ್ ಬಳಗಾರ, ಸಂಜೀವ ಕೆ.ಆರ್. ರಾಮಣ್ಣ ಕೊರಚರ ಹಾಗೂ ಶಿಕಾರಿಪುರ ಮಲೇನಹಳ್ಳಿ ತಾಂಡಾದ ಕೃಷ್ಣಪ್ಪ ನಾಯ್ಕ ಅವರನ್ನು ಬಂಧಿಸಲಾಗಿದ್ದು, ಇವರಿಂದ ₹7,63,000 ಹಣ ಹಾಗೂ 3 ಮೋಟಾರ್ ಸೈಕಲ್ ವಾಹನವನ್ನು ಜಪ್ತು ಮಾಡಲಾಗಿದೆ ಎಂದು ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ ಎಂ. ಗುರುವಾರ ಶಿರಸಿಗೆ ಭೇಟಿ ನೀಡಿದ ಬಳಿಕ ಸುದ್ದಿಗಾರರಿಗೆ ಮಾಹಿತಿ ನೀಡಿದರು.</p>.<p>ಪ್ರಕರಣದಲ್ಲಿ ತಲೆಮರೆಸಿಕೊಂಡ ಮೂವರ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ. ದರೋಡೆ ನಡೆದ 24 ಗಂಟೆಯಲ್ಲಿ ಪೊಲೀಸರು ತುರ್ತು ಕಾರ್ಯಾಚರಣೆ ನಡೆಸಿದ್ದಾರೆ ಎಂದು ತಿಳಿಸಿದರು.</p>.<p>ಬಂಧಿತ ಆರೋಪಿಗಳ ಮೇಲೆ ಹಲವಾರು ಠಾಣೆಗಳಲ್ಲಿ ದೂರುಗಳಿವೆ. ಅದನ್ನೂ ತನಿಖೆ ಮಾಡಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ</strong>: ಕೇರಳದ ಮೂಲದ ಇಬ್ಬರಿಗೆ ಬಂಗಾರ ನೀಡುವುದಾಗಿ ನಂಬಿಸಿ ದರೋಡೆ ಮಾಡಿದ ಐವರು ಆರೋಪಿಗಳನ್ನು ಶಿರಸಿ ಪೊಲೀಸರು ಬಂಧಿಸಿದ್ದಾರೆ.</p>.<p>ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಆನವಟ್ಟಿಯ ನಾಗಪ್ಪ ದೊಡ್ಡರಾಮಣ ಕೊರಚರ, ಅವಿನಾಶ ಕೊಟ್ರೇಶ ಕೊರಚರ, ನಿಸ್ಸಾರ್ ಅಹ್ಮದ್ ಮಹಮ್ಮದ್ ಜಾಫರ್ ಬಳಗಾರ, ಸಂಜೀವ ಕೆ.ಆರ್. ರಾಮಣ್ಣ ಕೊರಚರ ಹಾಗೂ ಶಿಕಾರಿಪುರ ಮಲೇನಹಳ್ಳಿ ತಾಂಡಾದ ಕೃಷ್ಣಪ್ಪ ನಾಯ್ಕ ಅವರನ್ನು ಬಂಧಿಸಲಾಗಿದ್ದು, ಇವರಿಂದ ₹7,63,000 ಹಣ ಹಾಗೂ 3 ಮೋಟಾರ್ ಸೈಕಲ್ ವಾಹನವನ್ನು ಜಪ್ತು ಮಾಡಲಾಗಿದೆ ಎಂದು ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ ಎಂ. ಗುರುವಾರ ಶಿರಸಿಗೆ ಭೇಟಿ ನೀಡಿದ ಬಳಿಕ ಸುದ್ದಿಗಾರರಿಗೆ ಮಾಹಿತಿ ನೀಡಿದರು.</p>.<p>ಪ್ರಕರಣದಲ್ಲಿ ತಲೆಮರೆಸಿಕೊಂಡ ಮೂವರ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ. ದರೋಡೆ ನಡೆದ 24 ಗಂಟೆಯಲ್ಲಿ ಪೊಲೀಸರು ತುರ್ತು ಕಾರ್ಯಾಚರಣೆ ನಡೆಸಿದ್ದಾರೆ ಎಂದು ತಿಳಿಸಿದರು.</p>.<p>ಬಂಧಿತ ಆರೋಪಿಗಳ ಮೇಲೆ ಹಲವಾರು ಠಾಣೆಗಳಲ್ಲಿ ದೂರುಗಳಿವೆ. ಅದನ್ನೂ ತನಿಖೆ ಮಾಡಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>