<p><strong>ಸಿದ್ದಾಪುರ</strong>: ಸಮಾಜದಲ್ಲಿ ಬ್ರಾಹ್ಮಣರನ್ನು ಅವಹೇಳನ ಮಾಡುವಂತಹ ಅನೇಕ ಪ್ರಕರಣಗಳು ನಡೆಯುತ್ತಿವೆ. ಇಂತಹ ಕೃತ್ಯಗಳು ಒಂದು ವ್ಯಕ್ತಿಯಿಂದ ಆಗಿದ್ದಲ್ಲ. ಏಕಕಾಲದಲ್ಲಿ ಜನಿವಾರವನ್ನು ತೆಗೆಸುವ ಕಾರ್ಯ ನಡೆದಿದೆ ಎಂದರೆ ಇದೊಂದು ಷಡ್ಯಂತ್ರವಾಗಿದೆ ಎಂದು ಹವ್ಯಕ ಮಂಡಲದ ತಾಲ್ಲೂಕು ಅಧ್ಯಕ್ಷ ಮಹೇಶ ಭಟ್ಟ ಚಟ್ನಳ್ಳಿ ಹೇಳಿದರು.</p>.<p>ಸಿಇಟಿ ಪರೀಕ್ಷೆ ಬರೆಯುವ ಸಂದರ್ಭದಲ್ಲಿ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ತುಂಡರಿಸಿದ್ದನ್ನು ಖಂಡಿಸಿ ಪಟ್ಟಣದ ತಹಶೀಲ್ದಾರ್ ಕಚೇರಿ ಎದುರು ಬ್ರಾಹ್ಮಣ ಸಮಾಜ ಸೇರಿದಂತೆ ವಿವಿಧ ಸಮಾಜದವರು ನಡೆಸಿದ ಪ್ರತಿಭಟನೆಯಲ್ಲಿ ಬುಧವಾರ ಅವರು ಮಾತನಾಡಿದರು.</p>.<p>ಅಖಿಲ ಭಾರತ ಹವ್ಯಕ ಸಮಾಜದ ಉಪಾಧ್ಯಕ್ಷ ಆರ್.ಎಂ.ಹೆಗಡೆ ಬಾಳೇಸರ ಮಾತನಾಡಿ, ರಾಜ್ಯ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು. ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕೆಂದು ಆಗ್ರಹಿಸಿದರು.</p>.<p>ಇಜಿಎಸ್ಬಿ ಸಮಾಜದ ಪ್ರಮುಖ ಗುರುರಾಜ ಶಾನಭಾಗ, ಕೆ.ಜಿ.ನಾಯ್ಕ ಹಣಜೀಬೈಲ್, ರವಿ ಹೆಗಡೆ ಹೂವಿನಮನೆ, ವಿನಾಯಕ ಶೇಟ್, ತಿಮ್ಮಪ್ಪ ಎಂ.ಕೆ, ಕಾಶಿನಾಥ ಪೈ, ರಾಜೇಂದ್ರ ಆಚಾರ್ಯ ಮಾತನಾಡಿದರು.</p>.<p>ಪ್ರತಿಭಟನೆಯಲ್ಲಿ ಹವ್ಯಕ ಬ್ರಾಹ್ಮಣ, ವಿಶ್ವಕರ್ಮ, ಗೌಡಸಾರಸ್ವತ, ವಿಶ್ವಕರ್ಮ, ದೈವಜ್ಞ, ಕೊಂಕಣಿ ಖಾರ್ವಿ ಹಾಗೂ ವಿವಿಧ ಸಮಾಜದ ಪ್ರಮುಖರು ಸೇರಿದಂತೆ ಎರಡು ನೂರಕ್ಕೂ ಹೆಚ್ಚು ಜನರು ಪಾಲ್ಗೊಂಡಿದ್ದರು.</p>.<p>ಪ್ರತಿಭಟನೆಯ ನಂತರ ತಪ್ಪಿತಸ್ಥರ ಮೇಲೆ ಕೂಡಲೆ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ತಹಶೀಲ್ದಾರ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿದ್ದಾಪುರ</strong>: ಸಮಾಜದಲ್ಲಿ ಬ್ರಾಹ್ಮಣರನ್ನು ಅವಹೇಳನ ಮಾಡುವಂತಹ ಅನೇಕ ಪ್ರಕರಣಗಳು ನಡೆಯುತ್ತಿವೆ. ಇಂತಹ ಕೃತ್ಯಗಳು ಒಂದು ವ್ಯಕ್ತಿಯಿಂದ ಆಗಿದ್ದಲ್ಲ. ಏಕಕಾಲದಲ್ಲಿ ಜನಿವಾರವನ್ನು ತೆಗೆಸುವ ಕಾರ್ಯ ನಡೆದಿದೆ ಎಂದರೆ ಇದೊಂದು ಷಡ್ಯಂತ್ರವಾಗಿದೆ ಎಂದು ಹವ್ಯಕ ಮಂಡಲದ ತಾಲ್ಲೂಕು ಅಧ್ಯಕ್ಷ ಮಹೇಶ ಭಟ್ಟ ಚಟ್ನಳ್ಳಿ ಹೇಳಿದರು.</p>.<p>ಸಿಇಟಿ ಪರೀಕ್ಷೆ ಬರೆಯುವ ಸಂದರ್ಭದಲ್ಲಿ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ತುಂಡರಿಸಿದ್ದನ್ನು ಖಂಡಿಸಿ ಪಟ್ಟಣದ ತಹಶೀಲ್ದಾರ್ ಕಚೇರಿ ಎದುರು ಬ್ರಾಹ್ಮಣ ಸಮಾಜ ಸೇರಿದಂತೆ ವಿವಿಧ ಸಮಾಜದವರು ನಡೆಸಿದ ಪ್ರತಿಭಟನೆಯಲ್ಲಿ ಬುಧವಾರ ಅವರು ಮಾತನಾಡಿದರು.</p>.<p>ಅಖಿಲ ಭಾರತ ಹವ್ಯಕ ಸಮಾಜದ ಉಪಾಧ್ಯಕ್ಷ ಆರ್.ಎಂ.ಹೆಗಡೆ ಬಾಳೇಸರ ಮಾತನಾಡಿ, ರಾಜ್ಯ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು. ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕೆಂದು ಆಗ್ರಹಿಸಿದರು.</p>.<p>ಇಜಿಎಸ್ಬಿ ಸಮಾಜದ ಪ್ರಮುಖ ಗುರುರಾಜ ಶಾನಭಾಗ, ಕೆ.ಜಿ.ನಾಯ್ಕ ಹಣಜೀಬೈಲ್, ರವಿ ಹೆಗಡೆ ಹೂವಿನಮನೆ, ವಿನಾಯಕ ಶೇಟ್, ತಿಮ್ಮಪ್ಪ ಎಂ.ಕೆ, ಕಾಶಿನಾಥ ಪೈ, ರಾಜೇಂದ್ರ ಆಚಾರ್ಯ ಮಾತನಾಡಿದರು.</p>.<p>ಪ್ರತಿಭಟನೆಯಲ್ಲಿ ಹವ್ಯಕ ಬ್ರಾಹ್ಮಣ, ವಿಶ್ವಕರ್ಮ, ಗೌಡಸಾರಸ್ವತ, ವಿಶ್ವಕರ್ಮ, ದೈವಜ್ಞ, ಕೊಂಕಣಿ ಖಾರ್ವಿ ಹಾಗೂ ವಿವಿಧ ಸಮಾಜದ ಪ್ರಮುಖರು ಸೇರಿದಂತೆ ಎರಡು ನೂರಕ್ಕೂ ಹೆಚ್ಚು ಜನರು ಪಾಲ್ಗೊಂಡಿದ್ದರು.</p>.<p>ಪ್ರತಿಭಟನೆಯ ನಂತರ ತಪ್ಪಿತಸ್ಥರ ಮೇಲೆ ಕೂಡಲೆ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ತಹಶೀಲ್ದಾರ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>