<p><strong>ಶಿರಸಿ</strong>: ಬಡವರಿಗೆ ನೀಡುವ ಸೂರಿನ ವಿಷಯದಲ್ಲಿ ಯಾವುದೇ ರೀತಿಯ ರಾಜಕೀಯ ಮಾಡುವುದಿಲ್ಲ ಎಂದು ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.</p>.<p>ತಾಲ್ಲೂಕಿನ ಇಟಗುಳಿ ಗ್ರಾಮ ಪಂಚಾಯಿತಿಯಲ್ಲಿ ಮಂಗಳವಾರ ವಸತಿ ಯೋಜನೆಯಡಿ ಮನೆ ಮಂಜೂರಾದ ಫಲಾನುಭವಿಗಳಿಗೆ ಕಾಮಗಾರಿ ಆದೇಶ ಪತ್ರ ವಿತರಿಸಿ ಅವರು ಮಾತನಾಡಿದರು.</p>.<p>ರಾಜಕೀಯ ಎನ್ನುವುದು ಚುನಾವಣೆ ಪೂರ್ವದಲ್ಲಿ, ಗೆದ್ದು ಬಂದ ಮೇಲೆ ಎಲ್ಲಾ ಪಕ್ಷದವರೂ ನಮ್ಮವರೆಂದು ತಿಳಿದು ಅಭಿವೃದ್ಧಿ ಕೆಲಸ ಮಾಡಬೇಕು. ಇದೇ ನಿಜವಾದ ರಾಜಕೀಯ ಎಂದರು.</p>.<p>ಮನೆ ಮಂಜೂರಾದವರಿಗೆ ಗ್ರಾಮ ಪಂಚಾಯಿತಿ ಸದಸ್ಯರು ಜವಾಬ್ದಾರಿಯಿಂದ ಕೆಲಸ ಮಾಡಿ ಕೊಡಬೇಕು. ಮನೆ ಕಟ್ಟಲು ಸರ್ಕಾರದಿಂದ ನೀಡಲಾಗುವ ಹಣ ಅಲ್ಪವಾದರೂ ತಾವೂ ಕೂಡಿಟ್ಟ ಹಣದಲ್ಲಿ ಸುಭದ್ರವಾದ ಮನೆಗಳನ್ನು ಕಟ್ಟಿಕೊಳ್ಳಬೇಕು. ಈ ನಿಟ್ಟಿನಲ್ಲಿ ಪಂಚಾಯಿತಿಯವರು ಫಲಾನುಭವಿಗಳಿಗೆ ಸಹಕಾರ ನೀಡಬೇಕು ಎಂದರು. </p>.<p>ಈ ವೇಳೆ ಇಟಗುಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರಮೇಶ ನಾಯ್ಕ, ಉಪಾಧ್ಯಕ್ಷೆ ಶ್ರೀಕಲಾ ನಾಯ್ಕ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ</strong>: ಬಡವರಿಗೆ ನೀಡುವ ಸೂರಿನ ವಿಷಯದಲ್ಲಿ ಯಾವುದೇ ರೀತಿಯ ರಾಜಕೀಯ ಮಾಡುವುದಿಲ್ಲ ಎಂದು ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.</p>.<p>ತಾಲ್ಲೂಕಿನ ಇಟಗುಳಿ ಗ್ರಾಮ ಪಂಚಾಯಿತಿಯಲ್ಲಿ ಮಂಗಳವಾರ ವಸತಿ ಯೋಜನೆಯಡಿ ಮನೆ ಮಂಜೂರಾದ ಫಲಾನುಭವಿಗಳಿಗೆ ಕಾಮಗಾರಿ ಆದೇಶ ಪತ್ರ ವಿತರಿಸಿ ಅವರು ಮಾತನಾಡಿದರು.</p>.<p>ರಾಜಕೀಯ ಎನ್ನುವುದು ಚುನಾವಣೆ ಪೂರ್ವದಲ್ಲಿ, ಗೆದ್ದು ಬಂದ ಮೇಲೆ ಎಲ್ಲಾ ಪಕ್ಷದವರೂ ನಮ್ಮವರೆಂದು ತಿಳಿದು ಅಭಿವೃದ್ಧಿ ಕೆಲಸ ಮಾಡಬೇಕು. ಇದೇ ನಿಜವಾದ ರಾಜಕೀಯ ಎಂದರು.</p>.<p>ಮನೆ ಮಂಜೂರಾದವರಿಗೆ ಗ್ರಾಮ ಪಂಚಾಯಿತಿ ಸದಸ್ಯರು ಜವಾಬ್ದಾರಿಯಿಂದ ಕೆಲಸ ಮಾಡಿ ಕೊಡಬೇಕು. ಮನೆ ಕಟ್ಟಲು ಸರ್ಕಾರದಿಂದ ನೀಡಲಾಗುವ ಹಣ ಅಲ್ಪವಾದರೂ ತಾವೂ ಕೂಡಿಟ್ಟ ಹಣದಲ್ಲಿ ಸುಭದ್ರವಾದ ಮನೆಗಳನ್ನು ಕಟ್ಟಿಕೊಳ್ಳಬೇಕು. ಈ ನಿಟ್ಟಿನಲ್ಲಿ ಪಂಚಾಯಿತಿಯವರು ಫಲಾನುಭವಿಗಳಿಗೆ ಸಹಕಾರ ನೀಡಬೇಕು ಎಂದರು. </p>.<p>ಈ ವೇಳೆ ಇಟಗುಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರಮೇಶ ನಾಯ್ಕ, ಉಪಾಧ್ಯಕ್ಷೆ ಶ್ರೀಕಲಾ ನಾಯ್ಕ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>