<p><strong>ಕಾರವಾರ:</strong> ನಗರದಲ್ಲಿ ಗುರುವಾರ ಹಮ್ಮಿಕೊಂಡಿದ್ದ ತಿರಂಗಾ ರ್ಯಾಲಿಯಲ್ಲಿ ನೂರಾರು ಜನರು ಪಾಲ್ಗೊಂಡು ರಾಷ್ಟ್ರಧ್ವಜ ಹಿಡಿದು ಹೆಜ್ಜೆ ಹಾಕಿದರು.</p>.<p>ಇಲ್ಲಿನ ಮಾಲಾದೇವಿ ಮೈದಾನದಿಂದ ರ್ಯಾಲಿ ಆರಂಭಗೊಂಡಿತು. ಅರ್ಧ ಕಿ.ಮೀ ಉದ್ದದ ಧ್ವಜವನ್ನು ಹಿಡಿದು ಮೆರವಣಿಗೆ ನಡೆಸಲಾಯಿತು. ಅದರ ಹೊರತಾಗಿಯೂ ಮೆರವಣಿಗೆಯಲ್ಲಿ ಸಾಗಿದ ಪ್ರತಿಯೊಬ್ಬರ ಕೈಯಲ್ಲೂ ಧ್ವಜಗಳಿದ್ದವು. ‘ಆಪರೇಷನ್ ಸಿಂಧೂರ’ದ ಯಶಸ್ಸಿಗೆ ಸೈನಿಕರನ್ನು ಅಭಿನಂದಿಸಲು ಮೆರವಣಿಗೆ ಆಯೋಜಿಸಲಾಗಿತ್ತು.</p>.<p>ಸುಮಾರು 2.5 ಕಿ.ಮೀ ದೂರದವರೆಗೆ ಮುಖ್ಯರಸ್ತೆಗಳಲ್ಲಿ ಸಾಗಿದ ಮೆರವಣಿಗೆಯು ಅಂಬೇಡ್ಕರ್ ವೃತ್ತದಲ್ಲಿ ಸಮಾರೋಪಗೊಂಡಿತು. ಅಲ್ಲಿ ನಿವೃತ್ತ ಸೈನಿಕರನ್ನು ಸನ್ಮಾನಿಸಲಾಯಿತು.</p>.<p>ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷೆ ರೂಪಾಲಿ ನಾಯ್ಕ ಮಾತನಾಡಿ, ‘ನೆರೆಯ ಪಕಿಸ್ತಾನದ ಆಟಾಟೋಪಕ್ಕೆ ಆಪರೇಷನ್ ಸಿಂಧೂರದ ಮೂಲಕ ದೇಶದ ಸೈನಿಕರು ತಕ್ಕ ಉತ್ತರ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಕಠಿಣ ನಿರ್ಧಾರದಿಂದ ಭಯೋತ್ಪಾದಕ ನೆಲೆಗಳು ನಾಶವಾಗಿವೆ’ ಎಂದರು.</p>.<p>‘ಆಪರೇಷನ್ ಸಿಂಧೂರ ಪಾಕಿಸ್ತಾನಕ್ಕೆ ಮಾತ್ರವಲ್ಲದೆ, ಜಗತ್ತಿಗೆ ಭಾರತದ ಸೇನಾ ಸಾಮರ್ಥ್ಯದ ಅರಿವು ಮೂಡಿಸಿದೆ’ ಎಂದು ವಾಗ್ಮಿ ಆದರ್ಶ ಗೋಖಲೆ ಹೇಳಿದರು.</p>.<p>ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ವಿವಿಧ ಸಂಘಸಂಸ್ಥೆಗಳ ಪ್ರತಿನಿಧಿಗಳು, ನಗರಸಭೆ, ಗ್ರಾಮ ಪಂಚಾಯಿತಿ ಪ್ರತಿನಿಧಿಗಳು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ:</strong> ನಗರದಲ್ಲಿ ಗುರುವಾರ ಹಮ್ಮಿಕೊಂಡಿದ್ದ ತಿರಂಗಾ ರ್ಯಾಲಿಯಲ್ಲಿ ನೂರಾರು ಜನರು ಪಾಲ್ಗೊಂಡು ರಾಷ್ಟ್ರಧ್ವಜ ಹಿಡಿದು ಹೆಜ್ಜೆ ಹಾಕಿದರು.</p>.<p>ಇಲ್ಲಿನ ಮಾಲಾದೇವಿ ಮೈದಾನದಿಂದ ರ್ಯಾಲಿ ಆರಂಭಗೊಂಡಿತು. ಅರ್ಧ ಕಿ.ಮೀ ಉದ್ದದ ಧ್ವಜವನ್ನು ಹಿಡಿದು ಮೆರವಣಿಗೆ ನಡೆಸಲಾಯಿತು. ಅದರ ಹೊರತಾಗಿಯೂ ಮೆರವಣಿಗೆಯಲ್ಲಿ ಸಾಗಿದ ಪ್ರತಿಯೊಬ್ಬರ ಕೈಯಲ್ಲೂ ಧ್ವಜಗಳಿದ್ದವು. ‘ಆಪರೇಷನ್ ಸಿಂಧೂರ’ದ ಯಶಸ್ಸಿಗೆ ಸೈನಿಕರನ್ನು ಅಭಿನಂದಿಸಲು ಮೆರವಣಿಗೆ ಆಯೋಜಿಸಲಾಗಿತ್ತು.</p>.<p>ಸುಮಾರು 2.5 ಕಿ.ಮೀ ದೂರದವರೆಗೆ ಮುಖ್ಯರಸ್ತೆಗಳಲ್ಲಿ ಸಾಗಿದ ಮೆರವಣಿಗೆಯು ಅಂಬೇಡ್ಕರ್ ವೃತ್ತದಲ್ಲಿ ಸಮಾರೋಪಗೊಂಡಿತು. ಅಲ್ಲಿ ನಿವೃತ್ತ ಸೈನಿಕರನ್ನು ಸನ್ಮಾನಿಸಲಾಯಿತು.</p>.<p>ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷೆ ರೂಪಾಲಿ ನಾಯ್ಕ ಮಾತನಾಡಿ, ‘ನೆರೆಯ ಪಕಿಸ್ತಾನದ ಆಟಾಟೋಪಕ್ಕೆ ಆಪರೇಷನ್ ಸಿಂಧೂರದ ಮೂಲಕ ದೇಶದ ಸೈನಿಕರು ತಕ್ಕ ಉತ್ತರ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಕಠಿಣ ನಿರ್ಧಾರದಿಂದ ಭಯೋತ್ಪಾದಕ ನೆಲೆಗಳು ನಾಶವಾಗಿವೆ’ ಎಂದರು.</p>.<p>‘ಆಪರೇಷನ್ ಸಿಂಧೂರ ಪಾಕಿಸ್ತಾನಕ್ಕೆ ಮಾತ್ರವಲ್ಲದೆ, ಜಗತ್ತಿಗೆ ಭಾರತದ ಸೇನಾ ಸಾಮರ್ಥ್ಯದ ಅರಿವು ಮೂಡಿಸಿದೆ’ ಎಂದು ವಾಗ್ಮಿ ಆದರ್ಶ ಗೋಖಲೆ ಹೇಳಿದರು.</p>.<p>ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ವಿವಿಧ ಸಂಘಸಂಸ್ಥೆಗಳ ಪ್ರತಿನಿಧಿಗಳು, ನಗರಸಭೆ, ಗ್ರಾಮ ಪಂಚಾಯಿತಿ ಪ್ರತಿನಿಧಿಗಳು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>