<p><strong>ಸಿದ್ದಾಪುರ:</strong> ‘ಅಡಿಕೆ ಬೆಳೆಗಾರರ ಹೆಮ್ಮೆಯ ನಮ್ಮ ಸಂಘವು 77 ಸಾರ್ಥಕ ವಸಂತಗಳನ್ನು ಪೂರೈಸಿದ್ದು, ಕಳೆದ ಆರ್ಥಿಕ ವರ್ಷದಲ್ಲಿ ₹4.34 ಕೋಟಿ ನಿವ್ವಳ ಲಾಭ ಗಳಿಸಿದೆ. ಸದಸ್ಯರಿಗೆ ಶೇ 15ರಷ್ಟು ಲಾಭಾಂಶ ವಿತರಿಸಲು ಆಡಳಿತ ಮಂಡಳಿ ನಿರ್ಣಯಿಸಿದೆ’ ಎಂದು ಟಿಎಂಎಸ್ ಅಧ್ಯಕ್ಷ ಆರ್.ಎಂ. ಹೆಗಡೆ ಬಾಳೇಸರ ತಿಳಿಸಿದರು.</p>.<p>ಸಂಸ್ಥೆಯ ಸಭಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.</p>.<p>‘ಕಾನಸೂರು ಹಾಗೂ ಶಿರಸಿಯಲ್ಲಿ ಶಾಖೆಗಳನ್ನು ಹೊಂದಿರುವ ನಮ್ಮ ಸಂಘ 2023-24ನೇ ಸಾಲಿನಲ್ಲಿ 56,554 ಕ್ವಿಂಟಲ್ ಅಡಿಕೆ, 389 ಕ್ವಿಂಟಲ್ ಕಾಳುಮೆಣಸು ಹಾಗೂ 2,792 ಕ್ವಿಂಟಲ್ ಹಸಿ ಅಡಿಕೆ ವಿಕ್ರಿ ಮಾಡಿದ್ದು, ₹ 233.05ಕೋಟಿ ವಹಿವಾಟು ಆಗಿದೆ. ದುಡಿಯುವ ಬಂಡವಾಳ ₹218.61ಕೋಟಿಗೂ ಅಧಿಕವಾಗಿದ್ದು, ಸಂಚಿತ ನಿಧಿಗಳ ಮೊತ್ತ ₹60.79 ಕೋಟಿ ಇದೆ ಹಾಗೂ ₹108.29ಕೋಟಿ ಠೇವುಗಳನ್ನು ಸಂಗ್ರಹಿಸಲಾಗಿದೆ’ ಎಂದು ತಿಳಿಸಿದರು.</p>.<p>‘ಆ.24ರಂದು ಮಧ್ಯಾಹ್ನ 3 ಗಂಟೆಗೆ ಸಂಘದ ವ್ಯಾಪಾರಾಂಗಣದಲ್ಲಿ ವಾರ್ಷಿಕ ಸಭೆ ಕರೆಯಲಾಗಿದೆ. ಆ.20ರಂದು ಮಧ್ಯಾಹ್ನ 3 ಗಂಟೆಗೆ ಶಿರಸಿ ಮಾರಾಟ ಮಳಿಗೆಯಲ್ಲಿ ಹಾಗೂ ಆ.22ರಂದು ಸಂಜೆ 5 ಗಂಟೆಗೆ ಕಾನಸೂರ ಶಾಖೆ ಕಾರ್ಯಾಲಯದಲ್ಲಿ ಸಭೆ ಕರೆಯಲಾಗಿದೆ. ಸಭೆಯಲ್ಲಿ ಆಯ್ದ ಹಿರಿಯ ಸದಸ್ಯರನ್ನು ಹಾಗೂ ಎಸ್.ಎಸ್.ಎಲ್.ಸಿ ಯಲ್ಲಿ ರ್ಯಾಂಕ್ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು’ ಎಂದರು.</p>.<p>‘ಆ.24ರ ಸಾಮಾನ್ಯ ಸಭೆಯ ನಂತರ ಯಕ್ಷಸಿರಿ ಬೆಂಗಳೂರು ಇವರಿಂದ ‘ಕೃಷ್ಣಾರ್ಜುನ ಕಾಳಗ’ ಪೌರಾಣಿಕ ಯಕ್ಷಗಾನ ಹಮ್ಮಿಕೊಳ್ಳಲಾಗಿದೆ’ ಎಂದರು.</p>.<p>ಪ್ರಧಾನ ವ್ಯವಸ್ಥಾಪಕ ಸತೀಶ ಹೆಗಡೆ, ಸಂಸ್ಥೆಯ ನಿರ್ದೇಶಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿದ್ದಾಪುರ:</strong> ‘ಅಡಿಕೆ ಬೆಳೆಗಾರರ ಹೆಮ್ಮೆಯ ನಮ್ಮ ಸಂಘವು 77 ಸಾರ್ಥಕ ವಸಂತಗಳನ್ನು ಪೂರೈಸಿದ್ದು, ಕಳೆದ ಆರ್ಥಿಕ ವರ್ಷದಲ್ಲಿ ₹4.34 ಕೋಟಿ ನಿವ್ವಳ ಲಾಭ ಗಳಿಸಿದೆ. ಸದಸ್ಯರಿಗೆ ಶೇ 15ರಷ್ಟು ಲಾಭಾಂಶ ವಿತರಿಸಲು ಆಡಳಿತ ಮಂಡಳಿ ನಿರ್ಣಯಿಸಿದೆ’ ಎಂದು ಟಿಎಂಎಸ್ ಅಧ್ಯಕ್ಷ ಆರ್.ಎಂ. ಹೆಗಡೆ ಬಾಳೇಸರ ತಿಳಿಸಿದರು.</p>.<p>ಸಂಸ್ಥೆಯ ಸಭಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.</p>.<p>‘ಕಾನಸೂರು ಹಾಗೂ ಶಿರಸಿಯಲ್ಲಿ ಶಾಖೆಗಳನ್ನು ಹೊಂದಿರುವ ನಮ್ಮ ಸಂಘ 2023-24ನೇ ಸಾಲಿನಲ್ಲಿ 56,554 ಕ್ವಿಂಟಲ್ ಅಡಿಕೆ, 389 ಕ್ವಿಂಟಲ್ ಕಾಳುಮೆಣಸು ಹಾಗೂ 2,792 ಕ್ವಿಂಟಲ್ ಹಸಿ ಅಡಿಕೆ ವಿಕ್ರಿ ಮಾಡಿದ್ದು, ₹ 233.05ಕೋಟಿ ವಹಿವಾಟು ಆಗಿದೆ. ದುಡಿಯುವ ಬಂಡವಾಳ ₹218.61ಕೋಟಿಗೂ ಅಧಿಕವಾಗಿದ್ದು, ಸಂಚಿತ ನಿಧಿಗಳ ಮೊತ್ತ ₹60.79 ಕೋಟಿ ಇದೆ ಹಾಗೂ ₹108.29ಕೋಟಿ ಠೇವುಗಳನ್ನು ಸಂಗ್ರಹಿಸಲಾಗಿದೆ’ ಎಂದು ತಿಳಿಸಿದರು.</p>.<p>‘ಆ.24ರಂದು ಮಧ್ಯಾಹ್ನ 3 ಗಂಟೆಗೆ ಸಂಘದ ವ್ಯಾಪಾರಾಂಗಣದಲ್ಲಿ ವಾರ್ಷಿಕ ಸಭೆ ಕರೆಯಲಾಗಿದೆ. ಆ.20ರಂದು ಮಧ್ಯಾಹ್ನ 3 ಗಂಟೆಗೆ ಶಿರಸಿ ಮಾರಾಟ ಮಳಿಗೆಯಲ್ಲಿ ಹಾಗೂ ಆ.22ರಂದು ಸಂಜೆ 5 ಗಂಟೆಗೆ ಕಾನಸೂರ ಶಾಖೆ ಕಾರ್ಯಾಲಯದಲ್ಲಿ ಸಭೆ ಕರೆಯಲಾಗಿದೆ. ಸಭೆಯಲ್ಲಿ ಆಯ್ದ ಹಿರಿಯ ಸದಸ್ಯರನ್ನು ಹಾಗೂ ಎಸ್.ಎಸ್.ಎಲ್.ಸಿ ಯಲ್ಲಿ ರ್ಯಾಂಕ್ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು’ ಎಂದರು.</p>.<p>‘ಆ.24ರ ಸಾಮಾನ್ಯ ಸಭೆಯ ನಂತರ ಯಕ್ಷಸಿರಿ ಬೆಂಗಳೂರು ಇವರಿಂದ ‘ಕೃಷ್ಣಾರ್ಜುನ ಕಾಳಗ’ ಪೌರಾಣಿಕ ಯಕ್ಷಗಾನ ಹಮ್ಮಿಕೊಳ್ಳಲಾಗಿದೆ’ ಎಂದರು.</p>.<p>ಪ್ರಧಾನ ವ್ಯವಸ್ಥಾಪಕ ಸತೀಶ ಹೆಗಡೆ, ಸಂಸ್ಥೆಯ ನಿರ್ದೇಶಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>