ಅಧ್ಯಕ್ಷೆ ಪ್ರಮೀಳಾ ನಾಯ್ಕ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಸ್ಥಾಯಿ ಸಮಿತಿ ಅಧ್ಯಕ್ಷ ಪುರುಷೋತ್ತಮ ಗೌಡ, ‘ಕೊರೊನಾ ಸಾಮಾನ್ಯ ಕಾಯಿಲೆ. ಅದರ ಬಗ್ಗೆ ಆತಂಕ ಬೇಡ ಎಂದು ಹಲವು ತಜ್ಞರು, ವೈದ್ಯರು ಹೇಳುತ್ತಿದ್ದಾರೆ. ಆದರೆ, ಆರೋಗ್ಯ ಇಲಾಖೆಯು ಇದು ಗಂಭೀರ ಆರೋಗ್ಯ ಸಮಸ್ಯೆ ಎಂದು ಹೇಳುತ್ತಿದೆ. ಇದರಿಂದ ಜನರಿಗೆ ಗೊಂದಲವಾಗಿದೆ. ಜನರಿಗೆ ಸರಿಯಾದ ಮಾಹಿತಿ ಸಿಗಬೇಕು’ ಎಂದು ಹೇಳಿದರು.