ನಗರಸಭೆ,ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಯೂಥ್ ಫಾರ್ ಸೇವಾ ಸಂಸ್ಥೆ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇಪ್ಪತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡು ಪರಿಸರಸ್ನೇಹಿ ಮೂರ್ತಿ ತಯಾರಿಸುವುದನ್ನು ಕಲಿತರು. ಅರಿಶಿಣದ ಹಿಟ್ಟಿಗೆ ರಾಗಿ ಅಥವಾ ಗೋಧಿ ಹಿಟ್ಟು ಮಿಶ್ರಣ ಮಾಡಿ ಪುಟ್ಟ ಗಾತ್ರದ ಮೂರ್ತಿ ಸಿದ್ಧಪಡಿಸುವುದನ್ನು ಮಕ್ಕಳಿಗೆ ಯೂಥ್ ಫಾರ್ ಸೇವಾ ಸಂಸ್ಥೆಯವರು ಕಲಿಸಿಕೊಟ್ಟರು.