ಮಾಜಿ ಶಾಸಕ ಸುನೀಲ ಹೆಗಡೆ ಮಾತನಾಡಿ, ‘ಘರ್ ವಾಪಸಿ ಧಾರ್ಮಿಕ ಕಾರ್ಯಕ್ರಮವು ಯಾವುದೇ ರಾಜಕೀಯ ಗಿಮಿಕ್ ಅಲ್ಲ. ಯಾವ ಧರ್ಮದಲ್ಲಿ ಹುಟ್ಟಿದ್ದೇವೆಯೋ ಆ ಧರ್ಮವನ್ನು ಪರಿಪಾಲನೆ ಮಾಡಬೇಕು. ಹಿಂದೂ ಧರ್ಮವನ್ನು ಉಳಿಸಿ ಬೆಳೆಸಿಕೊಂಡು ಸಾಗುವುದರ ಜೊತೆಗೆ ಸ್ವ ಧರ್ಮ ನಿಷ್ಠೆ, ಪರಧರ್ಮ ಸಹಿಷ್ಣುತೆ ಪ್ರತಿಯೊಬ್ಬರಲ್ಲೂ ಇರಬೇಕು’ ಎಂದು ಹೇಳಿದರು.