<p><strong>ಕಾರವಾರ</strong>: ₹ 10 ಸಾವಿರ ಠೇವಣಿ ಮಾಡಿದರೆ, 85 ದಿನಗಳಲ್ಲಿ ₹ 2.25 ಲಕ್ಷ ಮರಳಿ ಕೊಡುವುದಾಗಿ ನಂಬಿಸಿ, ಮಹಿಳೆಯೊಬ್ಬರಿಗೆ ವಂಚಿಸಿದ ಆರೋಪಿಗಳನ್ನು ನಗರದ ಸಿ.ಇ.ಎನ್. ಅಪರಾಧಗಳ ಠಾಣೆಯ ಪೊಲೀಸರು ಬಂಧಿಸಿದ್ದಾರೆ.</p>.<p>ಕುಮಟಾದ ನೆಲ್ಲಿಕೇರಿ ನಿವಾಸಿ ಮುಸ್ತಫಾ ಹಾಗೂ ಉತ್ತರ ಪ್ರದೇಶದ ಬರೇಲಿಯ ಫರಿದಾಪುರದ ಮಹಮ್ಮದ್ ರಿಜ್ವಾನ್ ಬಂಧಿತರು. ಆತ ಕೂಡ ಪ್ರಸ್ತುತ ನೆಲ್ಲಿಕೇರಿಯಲ್ಲಿ ವಾಸವಿದ್ದ.</p>.<p>ಅಂಕೋಲಾ ತಾಲ್ಲೂಕಿನ ಅವರ್ಸಾದ ಮಹಿಳೆಯೊಬ್ಬರಿಗೆ ಜುಲೈ 4ರಂದು ಕರೆ ಮಾಡಿದ್ದ ಆರೋಪಿಯೊಬ್ಬ, ತಾನು ಬ್ಯಾಂಕ್ ಅಧಿಕಾರಿ ಎಂದು ಪರಿಚಯಿಸಿಕೊಂಡಿದ್ದ. ಆತನ ನಯವಾದ ಮಾತನ್ನು ನಂಬಿದ್ದ ಮಹಿಳೆಯು, ₹ 10 ಸಾವಿರನ್ನು ಹಣ ವರ್ಗಾವಣೆಯ ಆ್ಯಪ್ ಮೂಲಕ ವರ್ಗಾಯಿಸಿದ್ದರು. ಆದರೆ, ಆರೋಪಿಗಳು ಯಾವುದೇ ದಾಖಲೆಗಳನ್ನೂ ನೀಡದಿದ್ದಾಗ ಅನುಮಾನ ಬಂದು ಮಹಿಳೆಯು ಪೊಲೀಸರಿಗೆ ದೂರು ನೀಡಿದ್ದರು. ಜುಲೈ 31ರಂದು ಸಿ.ಇ.ಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.</p>.<p>ತನಿಖೆ ಕೈಗೊಂಡ ಪೊಲೀಸರು, ಆರೋಪಿಗಳನ್ನು ಬಂಧಿಸಿ ಕೃತ್ಯಕ್ಕೆ ಬಳಸಿದ ಎರಡು ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಂಡಿದ್ದಾರೆ.</p>.<p>ಸಿ.ಇ.ಎನ್ ಅಪರಾಧ ಠಾಣೆಯ ಇನ್ಸ್ಪೆಕ್ಟರ್ ನಿತ್ಯಾನಂದ ಪಂಡಿತ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ, ಸಿಬ್ಬಂದಿಗಳಾದ ಸುದರ್ಶನ ನಾಯ್ಕ, ಮಂಜುನಾಥ ಹೆಗಡೆ, ಮಹೇಶ, ಕೃಷ್ಣ, ರಾಜು, ಚಂದ್ರಶೇಖರ, ಶಿವಾನಂದ, ಹನುಮಂತ, ವಿವೇಕ, ಉಮೇಶ ಪಾಲ್ಗೊಂಡಿದ್ದರು.</p>.<p>ತಂಡದ ಕಾರ್ಯಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಪೆನ್ನೇಕರ್, ಹೆಚ್ಚುವರಿ ವರಿಷ್ಠಾಧಿಕಾರಿ ಎಸ್.ಬದರಿನಾಥ ಶ್ಲಾಘಿಸಿದ್ದಾರೆ.</p>.<p>ಬಂಧಿತ ಆರೋಪಿಗಳು ಬಳಸಿದ ಮೊಬೈಲ್ ಫೋನ್ ಸಂಖ್ಯೆ: 74833 61129 ಹಾಗೂ 96348 75076 – ಇವುಗಳಿಂದ ಮತ್ಯಾರಾದರೂ ಸಾರ್ವಜನಿಕರು ಮೋಸ ಹೋಗಿದ್ದರೆ ಸಿ.ಇ.ಎನ್ ಪೊಲೀಸ್ ಠಾಣೆಯ ದೂರವಾಣಿ<br />ಸಂಖ್ಯೆಗಳಾದ 94808 05267 ಅಥವಾ 08382 222522 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ</strong>: ₹ 10 ಸಾವಿರ ಠೇವಣಿ ಮಾಡಿದರೆ, 85 ದಿನಗಳಲ್ಲಿ ₹ 2.25 ಲಕ್ಷ ಮರಳಿ ಕೊಡುವುದಾಗಿ ನಂಬಿಸಿ, ಮಹಿಳೆಯೊಬ್ಬರಿಗೆ ವಂಚಿಸಿದ ಆರೋಪಿಗಳನ್ನು ನಗರದ ಸಿ.ಇ.ಎನ್. ಅಪರಾಧಗಳ ಠಾಣೆಯ ಪೊಲೀಸರು ಬಂಧಿಸಿದ್ದಾರೆ.</p>.<p>ಕುಮಟಾದ ನೆಲ್ಲಿಕೇರಿ ನಿವಾಸಿ ಮುಸ್ತಫಾ ಹಾಗೂ ಉತ್ತರ ಪ್ರದೇಶದ ಬರೇಲಿಯ ಫರಿದಾಪುರದ ಮಹಮ್ಮದ್ ರಿಜ್ವಾನ್ ಬಂಧಿತರು. ಆತ ಕೂಡ ಪ್ರಸ್ತುತ ನೆಲ್ಲಿಕೇರಿಯಲ್ಲಿ ವಾಸವಿದ್ದ.</p>.<p>ಅಂಕೋಲಾ ತಾಲ್ಲೂಕಿನ ಅವರ್ಸಾದ ಮಹಿಳೆಯೊಬ್ಬರಿಗೆ ಜುಲೈ 4ರಂದು ಕರೆ ಮಾಡಿದ್ದ ಆರೋಪಿಯೊಬ್ಬ, ತಾನು ಬ್ಯಾಂಕ್ ಅಧಿಕಾರಿ ಎಂದು ಪರಿಚಯಿಸಿಕೊಂಡಿದ್ದ. ಆತನ ನಯವಾದ ಮಾತನ್ನು ನಂಬಿದ್ದ ಮಹಿಳೆಯು, ₹ 10 ಸಾವಿರನ್ನು ಹಣ ವರ್ಗಾವಣೆಯ ಆ್ಯಪ್ ಮೂಲಕ ವರ್ಗಾಯಿಸಿದ್ದರು. ಆದರೆ, ಆರೋಪಿಗಳು ಯಾವುದೇ ದಾಖಲೆಗಳನ್ನೂ ನೀಡದಿದ್ದಾಗ ಅನುಮಾನ ಬಂದು ಮಹಿಳೆಯು ಪೊಲೀಸರಿಗೆ ದೂರು ನೀಡಿದ್ದರು. ಜುಲೈ 31ರಂದು ಸಿ.ಇ.ಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.</p>.<p>ತನಿಖೆ ಕೈಗೊಂಡ ಪೊಲೀಸರು, ಆರೋಪಿಗಳನ್ನು ಬಂಧಿಸಿ ಕೃತ್ಯಕ್ಕೆ ಬಳಸಿದ ಎರಡು ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಂಡಿದ್ದಾರೆ.</p>.<p>ಸಿ.ಇ.ಎನ್ ಅಪರಾಧ ಠಾಣೆಯ ಇನ್ಸ್ಪೆಕ್ಟರ್ ನಿತ್ಯಾನಂದ ಪಂಡಿತ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ, ಸಿಬ್ಬಂದಿಗಳಾದ ಸುದರ್ಶನ ನಾಯ್ಕ, ಮಂಜುನಾಥ ಹೆಗಡೆ, ಮಹೇಶ, ಕೃಷ್ಣ, ರಾಜು, ಚಂದ್ರಶೇಖರ, ಶಿವಾನಂದ, ಹನುಮಂತ, ವಿವೇಕ, ಉಮೇಶ ಪಾಲ್ಗೊಂಡಿದ್ದರು.</p>.<p>ತಂಡದ ಕಾರ್ಯಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಪೆನ್ನೇಕರ್, ಹೆಚ್ಚುವರಿ ವರಿಷ್ಠಾಧಿಕಾರಿ ಎಸ್.ಬದರಿನಾಥ ಶ್ಲಾಘಿಸಿದ್ದಾರೆ.</p>.<p>ಬಂಧಿತ ಆರೋಪಿಗಳು ಬಳಸಿದ ಮೊಬೈಲ್ ಫೋನ್ ಸಂಖ್ಯೆ: 74833 61129 ಹಾಗೂ 96348 75076 – ಇವುಗಳಿಂದ ಮತ್ಯಾರಾದರೂ ಸಾರ್ವಜನಿಕರು ಮೋಸ ಹೋಗಿದ್ದರೆ ಸಿ.ಇ.ಎನ್ ಪೊಲೀಸ್ ಠಾಣೆಯ ದೂರವಾಣಿ<br />ಸಂಖ್ಯೆಗಳಾದ 94808 05267 ಅಥವಾ 08382 222522 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>