ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಖ್ಯಮಂತ್ರಿ ಸೂಚನೆ: ಮೇದಿನಿಗೆ ಜಿಲ್ಲಾಧಿಕಾರಿ ಭೇಟಿ ನಾಳೆ

Last Updated 20 ಜೂನ್ 2019, 17:07 IST
ಅಕ್ಷರ ಗಾತ್ರ

ಕಾರವಾರ: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೂಚನೆಯ ಮೇರೆಗೆ ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್ ಅವರು ಶುಕ್ರವಾರ ಮೇದಿನಿಗೆ ಭೇಟಿ ನೀಡಲಿದ್ದಾರೆ.

ಕುಮಟಾ ತಾಲ್ಲೂಕಿನಕುಗ್ರಾಮ ಮೇದಿನಿಯಲ್ಲಿ ರಸ್ತೆ ಇಲ್ಲದೇ ಅಲ್ಲಿನ ಯುವಕ– ಯುವತಿಯರಿಗೆ ಮದುವೆಯಾಗುತ್ತಿಲ್ಲ. ಅಲ್ಲದೇಗ್ರಾಮಸ್ಥರು ಮೂಲ ಸೌಕರ್ಯದಿಂದಲೂ ವಂಚಿತರಾಗಿದ್ದಾರೆ. ಈ ಬಗ್ಗೆ ‘ಪ್ರಜಾವಾಣಿ’ಯೂ ಸೇರಿದಂತೆ ವಿವಿಧ ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿತ್ತು.

‘ಗ್ರಾಮಕ್ಕೆ ರಸ್ತೆ ವ್ಯವಸ್ಥೆ ಕಲ್ಪಿಸುವ ಕುರಿತಾಗಿ ಪರಿಶೀಲಿಸುವಂತೆ ಮುಖ್ಯಮಂತ್ರಿಸೂಚನೆ ನೀಡಿದ್ದಾರೆ. ಆದ್ದರಿಂದ, ಈ ಬಗ್ಗೆ ಸ್ಥಳಕ್ಕೆ ಭೇಟಿ ನೀಡಿಸಾಧಕ– ಬಾಧಕಗಳನ್ನು ಪರಿಶೀಲನೆ ನಡೆಸಲಿದ್ದೇನೆ. ನಂತರ ಅರಣ್ಯ ಇಲಾಖೆಯ ಅಧಿಕಾರಿಗಳ ಜೊತೆ ಚರ್ಚಿಸಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು’ ಎಂದು ಡಾ.ಕೆ.ಹರೀಶಕುಮಾರ್ ಅವರು‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT