<p><strong>ಜೊಯಿಡಾ</strong>: ಚನ್ನಬಸವೇಶ್ವರ ಪುಣ್ಯ ಕ್ಷೇತ್ರ ಉಳವಿ ಅಭಿವೃದ್ಧಿಗಾಗಿ ಅನುದಾನದ ಮಹಾಪೂರವೇ ಹರಿದುಬರುತ್ತಿದೆ. ಅಪಾರ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡುವ ಉಳವಿ ಅಭಿವೃದ್ಧಿ ಕಾಣುತ್ತಿದೆ. ಆದರೆ ಈ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇನ್ನಿತರ ಹಳ್ಳಿಗಳು ಮಾತ್ರ ಮೂಲಸೌಕರ್ಯಗಳ ಕೊರತೆಯಿಂದ ಬಳಲುತ್ತಿವೆ.</p>.<p>ಸುಮಾರು 4 ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ಉಳವಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೀದೊಲಿ, ಅಂಬೋಳಿ, ಚಂದ್ರಾಳಿ, ಬಿಡೊಲಿ, ಶಿವಪುರ, ಕೊಡಸಳ್ಳಿ, ಹೆಣಕೊಳ, ಚಾಪೇರ, ಕಡಕರ್ಣಿ ಸೇರಿದಂತೆ ಸುಮಾರು ಹತ್ತಕ್ಕೂ ಹೆಚ್ಚು ಹಳ್ಳಿಗಳಿವೆ. ಈ ಭಾಗದ ಬಹುತೇಕ ಪ್ರಾಥಮಿಕ ಶಾಲೆಗಳಲ್ಲಿ ಕಾಯಂ ಶಿಕ್ಷಕರು ಇಲ್ಲದೇ ಅತಿಥಿ ಶಿಕ್ಷಕರಿಂದ ನಡೆಯುತ್ತಿವೆ.</p>.<p>ಉಳವಿಗೆ ನಿರಂತರ ವಿದ್ಯುತ್ ಒದಗಿಸಲು ಜೊಯಿಡಾದಿಂದ ಉಳವಿಯವರೆಗೆ ಕೇಬಲ್ ಮೂಲಕ ಸುಮಾರು ₹ 10 ಕೋಟಿ ವೆಚ್ಚದಲ್ಲಿ ಭೂಗತ ಸಂಪರ್ಕ ನೀಡಲಾಗಿದೆ. ಆದರೆ, ಇದರ ಪಕ್ಕದಲ್ಲಿರುವ ಅಂಬೋಳಿ ಗ್ರಾಮದ 15 ಕುಟುಂಬಗಳಿಗೆ ಇನ್ನೂ ವಿದ್ಯುತ್ ಸಂಪರ್ಕವೇ ಇಲ್ಲ.</p>.<p>ಬಿಡೋಲಿ, ಪಾಟ್ನೇ, ಕಾಮಸೇತಡಿ ಮತ್ತು ಪೊಸೋಲಿ ಹಳ್ಳಿಗಳ ಮಾರ್ಗಕ್ಕೆ ಸೂಕ್ತ ಬಸ್ ವ್ಯವಸ್ಥೆ ಇಲ್ಲದೇ ಜನರು ಸಂಚಾರಕ್ಕಾಗಿ ಖಾಸಗಿ ವಾಹನಗಳನ್ನು ಅವಲಂಬಿಸಿದ್ದಾರೆ.</p>.<p>ಉಳವಿ ಭಾಗದ ಹಲವು ಹಳ್ಳಿಗಳ ಮಕ್ಕಳು ಕುಂಬಾರವಾಡಾ, ಜೊಯಿಡಾ, ದಾಂಡೇಲಿಗೆ ಶಾಲಾ ಕಾಲೇಜುಗಳಿಗೆ ಬರುತ್ತಿದ್ದು ಸಮರ್ಪಕ ಬಸ್ ವ್ಯವಸ್ಥೆ ಇಲ್ಲದೇ ಇರುವುದರಿಂದ ವಿದ್ಯಾಭ್ಯಾಸಕ್ಕೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.</p>.<p>ಸಿದೋಲಿ, ಶಿವಪುರ, ಪೊಸೋಲಿ, ಹನೋಲಿ, ಖಾಮಸೇತಡಿ ಮತ್ತು ಹೆಣಕೋಳಕ್ಕೆ ಸರ್ವ ಋತು ರಸ್ತೆ ಇಲ್ಲದೇ ಮಳೆಗಾಲದಲ್ಲಿ ರಸ್ತೆಗಳಲ್ಲಿ ಹಳ್ಳದ ನೀರು ಹರಿದು ರಸ್ತೆಗಳು ಕೆಸರುಗದ್ದೆಯಂತಾಗುತ್ತವೆ.</p>.<p>‘ಕಳ್ನೆ (ಹೆಣಕೋಳ) ಸಿದೋಲಿ, ಪೊಸೊಲಿ ಮತ್ತು ಖಾಮಸೇತಡಿಯಲ್ಲಿ ತುರ್ತು ಸೇತುವೆಗಳ ನಿರ್ಮಾಣ ಆಗಬೇಕಿದೆ. ಮೂರ್ನಾಲ್ಕು ಕಿ.ಮೀ ದೂರದ ಶಾಲೆಗಳಿಗೆ ವಿದ್ಯಾರ್ಥಿಗಳು ಕೆಸರಿನಲ್ಲಿ ನಡೆದುಕೊಂಡು ಹೋಗಬೇಕು’ ಎನ್ನುತ್ತಾರೆ ಉಳವಿ ಗ್ರಾಮ ಪಂಚಾಯಿತಿ ಸದಸ್ಯ ವಿಷ್ಣು ಬಿರಂಗತ.</p>.<p>ಚನ್ನಬಸವೇಶ್ವರ ದೇವಸ್ಥಾನಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಪ್ರತಿದಿನ ನೂರಾರು ಭಕ್ತರು ಮತ್ತು ಶಿವಪುರದಲ್ಲಿರುವ ತೂಗು ಸೇತುವೆಗೆ ಹೆಚ್ಚಿನ ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ.</p>.<p>ರಸ್ತೆ ಅಭಿವೃದ್ಧಿಗೆ ಅನುದಾನ ಬಿಡುಗಡೆ ‘ಉಳವಿ ಸೇರಿದಂತೆ ಸುತ್ತಲಿನ ಕೆಲವು ಗ್ರಾಮಗಳಿಗೆ ಕುಡಿಯುವ ನೀರು ಒದಗಿಸಲು ₹ 15 ಕೋಟಿ ವೆಚ್ಚದಲ್ಲಿ ಕುಡಿಯುವ ನೀರಿನ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಉಳವಿ ಭಾಗದ ರಸ್ತೆಗಳ ಅಭಿವೃದ್ಧಿಗೆ ಲೋಕೋಪಯೋಗಿ ಇಲಾಖೆ ಸುಮಾರು ₹ 6 ಕೋಟಿ ಅನುದಾನ ಬಿಡುಗಡೆ ಮಾಡಿದೆ. ಉಳವಿ- ಯಲ್ಲಾಪುರ ಸಂಪರ್ಕ ಕಲ್ಪಿಸಲು ಸೇತುವೆ ನಿರ್ಮಾಣಕ್ಕೆ ₹ 26 ಕೋಟಿ ಅನುದಾನಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಕೈಗಾ ಸಿಎಸ್ಆರ್ ಅಡಿಯಲ್ಲಿ ಉಳವಿಯಲ್ಲಿ ₹ 1.80 ಕೋಟಿ ವೆಚ್ಚದಲ್ಲಿ ಶೌಚಾಲಯಗಳನ್ನು ನಿರ್ಮಿಸಲಾಗುತ್ತಿದೆ. ₹8 ಕೋಟಿ ಅನುದಾನದಲ್ಲಿ ರಥ ಬೀದಿ ನಿರ್ಮಾಣವಾಗಿದೆ’ ಎನ್ನುತ್ತಾರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಂಜುನಾಥ ಮೊಕಾಶಿ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೊಯಿಡಾ</strong>: ಚನ್ನಬಸವೇಶ್ವರ ಪುಣ್ಯ ಕ್ಷೇತ್ರ ಉಳವಿ ಅಭಿವೃದ್ಧಿಗಾಗಿ ಅನುದಾನದ ಮಹಾಪೂರವೇ ಹರಿದುಬರುತ್ತಿದೆ. ಅಪಾರ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡುವ ಉಳವಿ ಅಭಿವೃದ್ಧಿ ಕಾಣುತ್ತಿದೆ. ಆದರೆ ಈ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇನ್ನಿತರ ಹಳ್ಳಿಗಳು ಮಾತ್ರ ಮೂಲಸೌಕರ್ಯಗಳ ಕೊರತೆಯಿಂದ ಬಳಲುತ್ತಿವೆ.</p>.<p>ಸುಮಾರು 4 ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ಉಳವಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೀದೊಲಿ, ಅಂಬೋಳಿ, ಚಂದ್ರಾಳಿ, ಬಿಡೊಲಿ, ಶಿವಪುರ, ಕೊಡಸಳ್ಳಿ, ಹೆಣಕೊಳ, ಚಾಪೇರ, ಕಡಕರ್ಣಿ ಸೇರಿದಂತೆ ಸುಮಾರು ಹತ್ತಕ್ಕೂ ಹೆಚ್ಚು ಹಳ್ಳಿಗಳಿವೆ. ಈ ಭಾಗದ ಬಹುತೇಕ ಪ್ರಾಥಮಿಕ ಶಾಲೆಗಳಲ್ಲಿ ಕಾಯಂ ಶಿಕ್ಷಕರು ಇಲ್ಲದೇ ಅತಿಥಿ ಶಿಕ್ಷಕರಿಂದ ನಡೆಯುತ್ತಿವೆ.</p>.<p>ಉಳವಿಗೆ ನಿರಂತರ ವಿದ್ಯುತ್ ಒದಗಿಸಲು ಜೊಯಿಡಾದಿಂದ ಉಳವಿಯವರೆಗೆ ಕೇಬಲ್ ಮೂಲಕ ಸುಮಾರು ₹ 10 ಕೋಟಿ ವೆಚ್ಚದಲ್ಲಿ ಭೂಗತ ಸಂಪರ್ಕ ನೀಡಲಾಗಿದೆ. ಆದರೆ, ಇದರ ಪಕ್ಕದಲ್ಲಿರುವ ಅಂಬೋಳಿ ಗ್ರಾಮದ 15 ಕುಟುಂಬಗಳಿಗೆ ಇನ್ನೂ ವಿದ್ಯುತ್ ಸಂಪರ್ಕವೇ ಇಲ್ಲ.</p>.<p>ಬಿಡೋಲಿ, ಪಾಟ್ನೇ, ಕಾಮಸೇತಡಿ ಮತ್ತು ಪೊಸೋಲಿ ಹಳ್ಳಿಗಳ ಮಾರ್ಗಕ್ಕೆ ಸೂಕ್ತ ಬಸ್ ವ್ಯವಸ್ಥೆ ಇಲ್ಲದೇ ಜನರು ಸಂಚಾರಕ್ಕಾಗಿ ಖಾಸಗಿ ವಾಹನಗಳನ್ನು ಅವಲಂಬಿಸಿದ್ದಾರೆ.</p>.<p>ಉಳವಿ ಭಾಗದ ಹಲವು ಹಳ್ಳಿಗಳ ಮಕ್ಕಳು ಕುಂಬಾರವಾಡಾ, ಜೊಯಿಡಾ, ದಾಂಡೇಲಿಗೆ ಶಾಲಾ ಕಾಲೇಜುಗಳಿಗೆ ಬರುತ್ತಿದ್ದು ಸಮರ್ಪಕ ಬಸ್ ವ್ಯವಸ್ಥೆ ಇಲ್ಲದೇ ಇರುವುದರಿಂದ ವಿದ್ಯಾಭ್ಯಾಸಕ್ಕೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.</p>.<p>ಸಿದೋಲಿ, ಶಿವಪುರ, ಪೊಸೋಲಿ, ಹನೋಲಿ, ಖಾಮಸೇತಡಿ ಮತ್ತು ಹೆಣಕೋಳಕ್ಕೆ ಸರ್ವ ಋತು ರಸ್ತೆ ಇಲ್ಲದೇ ಮಳೆಗಾಲದಲ್ಲಿ ರಸ್ತೆಗಳಲ್ಲಿ ಹಳ್ಳದ ನೀರು ಹರಿದು ರಸ್ತೆಗಳು ಕೆಸರುಗದ್ದೆಯಂತಾಗುತ್ತವೆ.</p>.<p>‘ಕಳ್ನೆ (ಹೆಣಕೋಳ) ಸಿದೋಲಿ, ಪೊಸೊಲಿ ಮತ್ತು ಖಾಮಸೇತಡಿಯಲ್ಲಿ ತುರ್ತು ಸೇತುವೆಗಳ ನಿರ್ಮಾಣ ಆಗಬೇಕಿದೆ. ಮೂರ್ನಾಲ್ಕು ಕಿ.ಮೀ ದೂರದ ಶಾಲೆಗಳಿಗೆ ವಿದ್ಯಾರ್ಥಿಗಳು ಕೆಸರಿನಲ್ಲಿ ನಡೆದುಕೊಂಡು ಹೋಗಬೇಕು’ ಎನ್ನುತ್ತಾರೆ ಉಳವಿ ಗ್ರಾಮ ಪಂಚಾಯಿತಿ ಸದಸ್ಯ ವಿಷ್ಣು ಬಿರಂಗತ.</p>.<p>ಚನ್ನಬಸವೇಶ್ವರ ದೇವಸ್ಥಾನಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಪ್ರತಿದಿನ ನೂರಾರು ಭಕ್ತರು ಮತ್ತು ಶಿವಪುರದಲ್ಲಿರುವ ತೂಗು ಸೇತುವೆಗೆ ಹೆಚ್ಚಿನ ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ.</p>.<p>ರಸ್ತೆ ಅಭಿವೃದ್ಧಿಗೆ ಅನುದಾನ ಬಿಡುಗಡೆ ‘ಉಳವಿ ಸೇರಿದಂತೆ ಸುತ್ತಲಿನ ಕೆಲವು ಗ್ರಾಮಗಳಿಗೆ ಕುಡಿಯುವ ನೀರು ಒದಗಿಸಲು ₹ 15 ಕೋಟಿ ವೆಚ್ಚದಲ್ಲಿ ಕುಡಿಯುವ ನೀರಿನ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಉಳವಿ ಭಾಗದ ರಸ್ತೆಗಳ ಅಭಿವೃದ್ಧಿಗೆ ಲೋಕೋಪಯೋಗಿ ಇಲಾಖೆ ಸುಮಾರು ₹ 6 ಕೋಟಿ ಅನುದಾನ ಬಿಡುಗಡೆ ಮಾಡಿದೆ. ಉಳವಿ- ಯಲ್ಲಾಪುರ ಸಂಪರ್ಕ ಕಲ್ಪಿಸಲು ಸೇತುವೆ ನಿರ್ಮಾಣಕ್ಕೆ ₹ 26 ಕೋಟಿ ಅನುದಾನಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಕೈಗಾ ಸಿಎಸ್ಆರ್ ಅಡಿಯಲ್ಲಿ ಉಳವಿಯಲ್ಲಿ ₹ 1.80 ಕೋಟಿ ವೆಚ್ಚದಲ್ಲಿ ಶೌಚಾಲಯಗಳನ್ನು ನಿರ್ಮಿಸಲಾಗುತ್ತಿದೆ. ₹8 ಕೋಟಿ ಅನುದಾನದಲ್ಲಿ ರಥ ಬೀದಿ ನಿರ್ಮಾಣವಾಗಿದೆ’ ಎನ್ನುತ್ತಾರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಂಜುನಾಥ ಮೊಕಾಶಿ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>