ಕಾಂಗ್ರೆಸ್ ನಾಯಕರು, ಶಾಸಕರು ಬೇರೆ ಬೇರೆ ಕಡೆ ಅಲೆದಾಡುತ್ತಿದ್ದಾರೆ. ಅವರ ಕ್ಷೇತ್ರದ ಹುಡುಕಾಟ ನಡೆಸುತ್ತಿದ್ದಾರೆ. ದೊಡ್ಡ ಪ್ರಮಾಣದಲ್ಲಿ ಅಭದ್ರತೆ, ಅಸ್ತಿತ್ವಕ್ಕಾಗಿ ಹೋರಾಟ ಎಲ್ಲವೂ ಕಾಂಗ್ರೆಸ್ ಪಕ್ಷದಲ್ಲೇ ನಡೆಯುತ್ತಿದೆ ಎಂದು ಹೇಳಿದರು. ನಾವು ಖುಷಿಯಿಂದ ರಾಜ್ಯಾದ್ಯಂತ ಸಂಕಲ್ಪ ಯಾತ್ರೆಯನ್ನು ಮುಗಿಸಿದ್ದೇವೆ. ಅದರ ವಿಜಯ ಚುನಾವಣೆಯಲ್ಲೂ ಕಾಣಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.