<p><strong>ಶಿರಸಿ: </strong>‘ಬ್ರಾಹ್ಮಣರ ಉಪಪಂಗಡಗಳ ನಡುವೆ ಸಹಮತವಿಲ್ಲ. ಆಯಾ ಉಪಪಂಗಡಗಳ ಆಚಾರ, ವಿಚಾರ ಮನೆಯಲ್ಲಿರಲಿ. ಹೊರಗೆ ಬ್ರಾಹ್ಮಣರೆಲ್ಲರೂ ಒಂದಾಗಿರಬೇಕು. ಒಗ್ಗಟ್ಟು ಇಲ್ಲದಿದ್ದರೆ ಸಮುದಾಯ ಅಳಿದು ಹೋಗುತ್ತದೆ’ ಎಂದು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಚ್.ಎಸ್.ಸಚ್ಚಿದಾನಂದಮೂರ್ತಿ ಹೇಳಿದರು.</p>.<p>ನಗರದ ಯೋಗಮಂದಿರದಲ್ಲಿ ಶನಿವಾರ ಮಂಡಳಿ ವತಿಯಿಂದ ಕಳೆದ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರ್ಯಾಂಕ್ ಗಳಿಸಿದ ಬ್ರಾಹ್ಮಣ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಿ ಅವರು ಮಾತನಾಡಿದರು.</p>.<p>‘ಇತ್ತೀಚಿನ ದಿನಗಳಲ್ಲಿ ಬ್ರಾಹ್ಮಣರು ಮಕ್ಕಳಿಗೆ ವಿದ್ಯೆ ನೀಡುವುದಕ್ಕಷ್ಟೇ ಪ್ರಾಮುಖ್ಯತೆ ನೀಡುವ ಸ್ಥಿತಿ ಎದುರಾಗಿದೆ. ವಿದ್ಯೆ ಜತೆಗೆ ಉತ್ತಮ ಸಂಸ್ಕಾರವನ್ನೂ ನೀಡಿ ಬ್ರಾಹ್ಮಣತ್ವ ಉಳಿಸುವ ಕೆಲಸವಾಗಬೇಕು‘ ಎಂದರು.</p>.<p>‘ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹಲವು ಯೋಜನೆ ರೂಪಿಸಲಾಗಿದೆ. ದುರ್ಬಲ ಸ್ಥಿತಿಯಲ್ಲಿದ್ದ ಮಂಡಳಿ ಬಲಪಡಿಸುವ ಕೆಲಸ ಮಾಡಲಾಗಿದೆ’ ಎಂದರು.</p>.<p>ಮಂಡಳಿ ನಿರ್ದೇಶಕ ಸುಬ್ರಾಯ ಹೆಗಡೆ ಗೌರಿಬಣ್ಣಿಗೆ, ‘ಬ್ರಾಹ್ಮಣರು ಬುದ್ಧಿಮತ್ತೆಯಿಂದ ಬದುಕುತ್ತಿದ್ದಾರೆ. ಶೈಕ್ಷಣಿಕವಾಗಿ ಮತ್ತಷ್ಟು ಪ್ರೋತ್ಸಾಹ ಮಾಡಬೇಕು’ ಎಂದರು.</p>.<p>ಬ್ರಾಹ್ಮಣ ಮಹಾಸಭಾ ಪ್ರಮುಖ ಜಿ.ಎಂ.ಹೆಗಡೆ ಮುಳಖಂಡ ಸ್ವಾಗತಿಸಿದರು. ಕೆ.ವಿ.ಭಟ್ಟ, ಎಸ್.ಎನ್.ಭಟ್ಟ, ದಾಮೋದರ ಭಟ್ಟ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ: </strong>‘ಬ್ರಾಹ್ಮಣರ ಉಪಪಂಗಡಗಳ ನಡುವೆ ಸಹಮತವಿಲ್ಲ. ಆಯಾ ಉಪಪಂಗಡಗಳ ಆಚಾರ, ವಿಚಾರ ಮನೆಯಲ್ಲಿರಲಿ. ಹೊರಗೆ ಬ್ರಾಹ್ಮಣರೆಲ್ಲರೂ ಒಂದಾಗಿರಬೇಕು. ಒಗ್ಗಟ್ಟು ಇಲ್ಲದಿದ್ದರೆ ಸಮುದಾಯ ಅಳಿದು ಹೋಗುತ್ತದೆ’ ಎಂದು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಚ್.ಎಸ್.ಸಚ್ಚಿದಾನಂದಮೂರ್ತಿ ಹೇಳಿದರು.</p>.<p>ನಗರದ ಯೋಗಮಂದಿರದಲ್ಲಿ ಶನಿವಾರ ಮಂಡಳಿ ವತಿಯಿಂದ ಕಳೆದ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರ್ಯಾಂಕ್ ಗಳಿಸಿದ ಬ್ರಾಹ್ಮಣ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಿ ಅವರು ಮಾತನಾಡಿದರು.</p>.<p>‘ಇತ್ತೀಚಿನ ದಿನಗಳಲ್ಲಿ ಬ್ರಾಹ್ಮಣರು ಮಕ್ಕಳಿಗೆ ವಿದ್ಯೆ ನೀಡುವುದಕ್ಕಷ್ಟೇ ಪ್ರಾಮುಖ್ಯತೆ ನೀಡುವ ಸ್ಥಿತಿ ಎದುರಾಗಿದೆ. ವಿದ್ಯೆ ಜತೆಗೆ ಉತ್ತಮ ಸಂಸ್ಕಾರವನ್ನೂ ನೀಡಿ ಬ್ರಾಹ್ಮಣತ್ವ ಉಳಿಸುವ ಕೆಲಸವಾಗಬೇಕು‘ ಎಂದರು.</p>.<p>‘ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹಲವು ಯೋಜನೆ ರೂಪಿಸಲಾಗಿದೆ. ದುರ್ಬಲ ಸ್ಥಿತಿಯಲ್ಲಿದ್ದ ಮಂಡಳಿ ಬಲಪಡಿಸುವ ಕೆಲಸ ಮಾಡಲಾಗಿದೆ’ ಎಂದರು.</p>.<p>ಮಂಡಳಿ ನಿರ್ದೇಶಕ ಸುಬ್ರಾಯ ಹೆಗಡೆ ಗೌರಿಬಣ್ಣಿಗೆ, ‘ಬ್ರಾಹ್ಮಣರು ಬುದ್ಧಿಮತ್ತೆಯಿಂದ ಬದುಕುತ್ತಿದ್ದಾರೆ. ಶೈಕ್ಷಣಿಕವಾಗಿ ಮತ್ತಷ್ಟು ಪ್ರೋತ್ಸಾಹ ಮಾಡಬೇಕು’ ಎಂದರು.</p>.<p>ಬ್ರಾಹ್ಮಣ ಮಹಾಸಭಾ ಪ್ರಮುಖ ಜಿ.ಎಂ.ಹೆಗಡೆ ಮುಳಖಂಡ ಸ್ವಾಗತಿಸಿದರು. ಕೆ.ವಿ.ಭಟ್ಟ, ಎಸ್.ಎನ್.ಭಟ್ಟ, ದಾಮೋದರ ಭಟ್ಟ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>