‘ತಾಲ್ಲೂಕಿನ ಬೊಗರಿಬೈಲ ಗ್ರಾಮದಲ್ಲಿ ಲೋಕೋಪಯೋಗಿ ರಸ್ತೆಯ ಒಂದು ಬದಿ ಕುಡಿಯುವ ನೀರಿನ ಪೈಪ್ಲೈನ್ ಅಳವಡಿಸಲು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯವರು ಚರಂಡಿ ಅಗೆದು ನಂತರ ಮಣ್ಣು ಹಾಕಿ ಮುಚ್ಚಿದ್ದಾರೆ. ಮಳೆ ಬಂದಾಗ ಮಳೆ ನೀರು ಚರಂಡಿಯಲ್ಲಿ ಸರಾಗವಾಗಿ ಹರಿಯದೆ ಅಕ್ಕಪಕ್ಕದ ತೋಟಗಳಿಗೆ ನುಗ್ಗಿ ಹಾನಿಯಾಗಿದೆ. ಚರಂಡಿ ಸರಿಪಡಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದು ಗ್ರಾಮದ ಕೃಷಿಕರಾದ ಜಯಂತ ನಾಯ್ಕ, ಸತ್ಯನಾರಾಯಣ ನಾಯ್ಕ ದೂರಿದರು.