<p><strong>ಭಟ್ಕಳ</strong>: ಮುರುಡೇಶ್ವರ ಭಾಗದಲ್ಲಿ ಗ್ಯಾಸ್ ಏಜೆನ್ಸಿಯವರು ನಿಗದಿತ ಹಣಕ್ಕಿಂತ ಹೆಚ್ಚಿನ ಹಣ ವಸೂಲಿ ಮಾಡುತ್ತಾರೆ ಎಂಬ ಸಾರ್ವಜನಿಕರ ಆರೋಪವನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಇಲಾಖೆಯ ಉಪನಿರ್ದೇಶಕರು ಈ ಬಗ್ಗೆ ತನಿಖೆ ನಡೆಸಲು ಭಟ್ಕಳ ತಹಶೀಲ್ದಾರ್ಗೆ ಸೂಚಿಸಿದ್ದಾರೆ.</p>.<p>ತಾಲ್ಲೂಕಿನ ಕೆಲವು ಗ್ಯಾಸ್ ಏಜೆನ್ಸಿಗಳು ಐದು ಕಿಲೋಮೀಟರ್ ವ್ಯಾಪ್ತಿಯೊಳಗೂ ಸಿಲಿಂಡರ್ ಸರಬರಾಜು ಮಾಡಲು ನಿಗದಿತ ಮೊತ್ತಕ್ಕಿಂತ ಹೆಚ್ಚು ಹಣ ವಸೂಲಿ ಮಾಡುತ್ತಿರುವ ಬಗ್ಗೆ ದೂರುಗಳಿದ್ದವು. ಈ ಬಗ್ಗೆ ಡಿ.18ರ ‘ಪ್ರಜಾವಾಣಿ’ಯಲ್ಲಿ ವಿಶೇಷ ವರದಿ ಪ್ರಕಟವಾಗಿತ್ತು.</p>.<p>ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪ ನಿರ್ದೇಶಕರು ಡಿ.24ರಂದು ಭಟ್ಕಳ ತಹಶೀಲ್ದಾರ್ಗೆ ಸೂಚನೆ ನೀಡಿದ್ದಾರೆ. ಅದರಂತೆ ಡಿ.27ರಂದು ಗ್ಯಾಸ್ ಸರಬರಾಜು ಏಜೆನ್ಸಿಗೆ ನೋಟಿಸ್ ಜಾರಿ ಮಾಡಲಾಗಿದ್ದು, ಡಿ.28ರಂದು ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದರು.</p>.<p>ನೋಟಿಸ್ನಲ್ಲಿ, ಗ್ಯಾಸ್ ಏಜೆನ್ಸಿಯವರು ಗೃಹ ಬಳಕೆಯ ಪ್ರತಿ ಸಿಲಿಂಡರ್ಗೆ ₹915ರ ಬದಲಾಗಿ ₹ 975 ಪಡೆದ ದೂರಿನ ಕುರಿತು, ಮೂರು ತಿಂಗಳು ಗ್ಯಾಸ್ ಸಿಲಿಂಡರ್ ಸರಬರಾಜು ಮಾಡಿದ್ದಕ್ಕೆ ಸಂಬಂಧಿಸಿದ ದಾಖಲೆಗಳು ಹಾಗೂ ಬಿಲ್ ರಸೀದಿ ಪುಸ್ತಕವನ್ನು ಹಾಜರುಪಡಿಸುವಂತೆ ಆದೇಶಿಸಿದ್ದರು.</p>.<p class="Subhead"><strong>‘ದಾಖಲೆ ನೀಡಲಿಲ್ಲ’</strong></p>.<p>‘ಗ್ರಾಹಕರಿಂದ ಹೆಚ್ಚು ಹಣ ವಸೂಲಿ ಮಾಡಿದ ಗ್ಯಾಸ್ ಏಜೆನ್ಸಿಯವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ. ಡಿ.28ಕ್ಕೆ ಹಾಜರಾದವರು ಯಾವುದೇ ದಾಖಲೆ ನೀಡದೆ ಹಾಗೆಯೇ ತೆರಳಿದ್ದಾರೆ. ಈ ಬಗ್ಗೆ ಅವರ ವಿರುದ್ಧ ದೂರು ದಾಖಲಿಸಲಾಗಿದೆ. ತನಿಖೆ ಮುಂದುವರಿದಿದೆ’ ಎಂದು ತಹಶೀಲ್ದಾರ್ ರವಿಚಂದ್ರ.ಎಸ್ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭಟ್ಕಳ</strong>: ಮುರುಡೇಶ್ವರ ಭಾಗದಲ್ಲಿ ಗ್ಯಾಸ್ ಏಜೆನ್ಸಿಯವರು ನಿಗದಿತ ಹಣಕ್ಕಿಂತ ಹೆಚ್ಚಿನ ಹಣ ವಸೂಲಿ ಮಾಡುತ್ತಾರೆ ಎಂಬ ಸಾರ್ವಜನಿಕರ ಆರೋಪವನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಇಲಾಖೆಯ ಉಪನಿರ್ದೇಶಕರು ಈ ಬಗ್ಗೆ ತನಿಖೆ ನಡೆಸಲು ಭಟ್ಕಳ ತಹಶೀಲ್ದಾರ್ಗೆ ಸೂಚಿಸಿದ್ದಾರೆ.</p>.<p>ತಾಲ್ಲೂಕಿನ ಕೆಲವು ಗ್ಯಾಸ್ ಏಜೆನ್ಸಿಗಳು ಐದು ಕಿಲೋಮೀಟರ್ ವ್ಯಾಪ್ತಿಯೊಳಗೂ ಸಿಲಿಂಡರ್ ಸರಬರಾಜು ಮಾಡಲು ನಿಗದಿತ ಮೊತ್ತಕ್ಕಿಂತ ಹೆಚ್ಚು ಹಣ ವಸೂಲಿ ಮಾಡುತ್ತಿರುವ ಬಗ್ಗೆ ದೂರುಗಳಿದ್ದವು. ಈ ಬಗ್ಗೆ ಡಿ.18ರ ‘ಪ್ರಜಾವಾಣಿ’ಯಲ್ಲಿ ವಿಶೇಷ ವರದಿ ಪ್ರಕಟವಾಗಿತ್ತು.</p>.<p>ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪ ನಿರ್ದೇಶಕರು ಡಿ.24ರಂದು ಭಟ್ಕಳ ತಹಶೀಲ್ದಾರ್ಗೆ ಸೂಚನೆ ನೀಡಿದ್ದಾರೆ. ಅದರಂತೆ ಡಿ.27ರಂದು ಗ್ಯಾಸ್ ಸರಬರಾಜು ಏಜೆನ್ಸಿಗೆ ನೋಟಿಸ್ ಜಾರಿ ಮಾಡಲಾಗಿದ್ದು, ಡಿ.28ರಂದು ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದರು.</p>.<p>ನೋಟಿಸ್ನಲ್ಲಿ, ಗ್ಯಾಸ್ ಏಜೆನ್ಸಿಯವರು ಗೃಹ ಬಳಕೆಯ ಪ್ರತಿ ಸಿಲಿಂಡರ್ಗೆ ₹915ರ ಬದಲಾಗಿ ₹ 975 ಪಡೆದ ದೂರಿನ ಕುರಿತು, ಮೂರು ತಿಂಗಳು ಗ್ಯಾಸ್ ಸಿಲಿಂಡರ್ ಸರಬರಾಜು ಮಾಡಿದ್ದಕ್ಕೆ ಸಂಬಂಧಿಸಿದ ದಾಖಲೆಗಳು ಹಾಗೂ ಬಿಲ್ ರಸೀದಿ ಪುಸ್ತಕವನ್ನು ಹಾಜರುಪಡಿಸುವಂತೆ ಆದೇಶಿಸಿದ್ದರು.</p>.<p class="Subhead"><strong>‘ದಾಖಲೆ ನೀಡಲಿಲ್ಲ’</strong></p>.<p>‘ಗ್ರಾಹಕರಿಂದ ಹೆಚ್ಚು ಹಣ ವಸೂಲಿ ಮಾಡಿದ ಗ್ಯಾಸ್ ಏಜೆನ್ಸಿಯವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ. ಡಿ.28ಕ್ಕೆ ಹಾಜರಾದವರು ಯಾವುದೇ ದಾಖಲೆ ನೀಡದೆ ಹಾಗೆಯೇ ತೆರಳಿದ್ದಾರೆ. ಈ ಬಗ್ಗೆ ಅವರ ವಿರುದ್ಧ ದೂರು ದಾಖಲಿಸಲಾಗಿದೆ. ತನಿಖೆ ಮುಂದುವರಿದಿದೆ’ ಎಂದು ತಹಶೀಲ್ದಾರ್ ರವಿಚಂದ್ರ.ಎಸ್ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>