<p><strong>ಕಾರವಾರ</strong>: ‘ಭೂಕುಸಿತ, ಸುನಾಮಿಯಂತಹ ಪ್ರಾಕೃತಿಕ ಅವಘಡಗಳಿಗೆ ಮನುಷ್ಯನಿಂದ ಪರಿಸರದ ಮೇಲೆ ಉಂಟಾಗುತ್ತಿರುವ ದಬ್ಬಾಳಿಕೆಯೇ ಕಾರಣ. ಇದು ನಿಯಂತ್ರಣವಾಗದ ಹೊರತು ನಿಸರ್ಗ ಮುನಿಯುವುದು ತಪ್ಪುವುದಿಲ್ಲ’ ಎಂದು ಕಡವಾಡ ಗ್ರಾಮ ಪಂಚಾಯಿತಿ ಅಧ್ಯಕ್ಷ ಆನಂದು ನಾಯ್ಕ ಹೇಳಿದರು.</p>.<p>ಸಂತ ನಿರಂಕಾರಿ ಮಿಶನ್ನ ಕಾರವಾರ ಘಟಕದಿಂದ ತಾಲ್ಲೂಕಿನ ಕಡವಾಡ ಸೇತುವೆ ಬಳಿ ಈಚೆಗೆ ಹಮ್ಮಿಕೊಂಡಿದ್ದ ವನಮಹೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಸಸಿ ನೆಟ್ಟ ಮಾತ್ರಕ್ಕೆ ಪರಿಸರದ ಸಂರಕ್ಷಣೆ ಆಗುತ್ತದೆ ಎಂಬುದು ತಪ್ಪು ಕಲ್ಪನೆ. ನೆಟ್ಟ ಸಸಿಗಳು ಮರವಾಗಿ ಬೆಳೆಯುವವರೆಗೆ ಅವುಗಳ ಕಾಳಜಿವಹಿಸಬೇಕು. ಸಸ್ಯಸಂಪತ್ತುಗಳನ್ನು ಹಾಳುಗೆಡವದೆ ಅವುಗಳ ರಕ್ಷಣೆ ಮಾಡಬೇಕು’ ಎಂದರು.</p>.<p>ಗಜಾನನ ಯುವಕ ಮಂಡಳಿ ಅಧ್ಯಕ್ಷ ಉದಯ ಭೋವಿ, ‘ಕಾಂಡ್ಲಾದಂತಹ ಪರಿಸರ ಸಂರಕ್ಷಿಸುವ ಸಸ್ಯ ಪ್ರಬೇಧಗಳನ್ನು ನಾಶಪಡಿಸುವ ಕೆಲಸ ನಡೆಯುತ್ತಿದೆ. ಇವುಗಳಿಗೆ ಆಸ್ಪದ ನೀಡಬಾರದು. ಅಳಿವಿನಂಚಿನಲ್ಲಿರುವ ಸಸಿಗಳನ್ನು, ಜೀವಿಗಳನ್ನು ಸಂರಕ್ಷಿಸಿ ಮುಂದಿನ ಪೀಳಿಗೆಗೆ ಆರೋಗ್ಯಯುತ ಪರಿಸರ ಉಳಿಯುವಂತೆ ಎಚ್ಚರವಹಿಸಬೇಕು’ ಎಂದರು.</p>.<p>ಸಂತ ನಿರಂಕಾರಿ ಮಿಶನ್ನ ಜಿಲ್ಲಾ ಘಟಕದ ಸಂಯೋಜಕ ವಿನೋದ ಕೇಳಸ್ಕರ್, ‘ವನಮಹೋತ್ಸವ ಒಂದು ದಿನಕ್ಕೆ ಸೀಮಿತವಾಗಿಲ್ಲ. ಮಿಶನ್ ವತಿಯಿಂದ ನೆಟ್ಟ ಸಸಿಗಳನ್ನು ಮುಂದಿನ ಮೂರು ವರ್ಷಗಳವರೆಗೆ ನಿರಂತರವಾಗಿ ಆರೈಕೆ ಮಾಡುತ್ತೇವೆ’ ಎಂದರು.</p>.<p>ಕಾಳಿನದಿಯ ಅಂಚಿನಲ್ಲಿ ಹತ್ತಾರು ಸಸಿಗಳನ್ನು ನೆಡುವ ಜೊತೆಗೆ ಅವುಗಳಿಗೆ ರಕ್ಷಣಾ ಬೇಲಿ ಅಳವಡಿಸಲಾಯಿತು. ಗ್ರಾಮ ಪಂಚಾಯಿತಿ ಸದಸ್ಯ ದೇವರಾಜ ನಾರ್ವೇಕರ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ</strong>: ‘ಭೂಕುಸಿತ, ಸುನಾಮಿಯಂತಹ ಪ್ರಾಕೃತಿಕ ಅವಘಡಗಳಿಗೆ ಮನುಷ್ಯನಿಂದ ಪರಿಸರದ ಮೇಲೆ ಉಂಟಾಗುತ್ತಿರುವ ದಬ್ಬಾಳಿಕೆಯೇ ಕಾರಣ. ಇದು ನಿಯಂತ್ರಣವಾಗದ ಹೊರತು ನಿಸರ್ಗ ಮುನಿಯುವುದು ತಪ್ಪುವುದಿಲ್ಲ’ ಎಂದು ಕಡವಾಡ ಗ್ರಾಮ ಪಂಚಾಯಿತಿ ಅಧ್ಯಕ್ಷ ಆನಂದು ನಾಯ್ಕ ಹೇಳಿದರು.</p>.<p>ಸಂತ ನಿರಂಕಾರಿ ಮಿಶನ್ನ ಕಾರವಾರ ಘಟಕದಿಂದ ತಾಲ್ಲೂಕಿನ ಕಡವಾಡ ಸೇತುವೆ ಬಳಿ ಈಚೆಗೆ ಹಮ್ಮಿಕೊಂಡಿದ್ದ ವನಮಹೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಸಸಿ ನೆಟ್ಟ ಮಾತ್ರಕ್ಕೆ ಪರಿಸರದ ಸಂರಕ್ಷಣೆ ಆಗುತ್ತದೆ ಎಂಬುದು ತಪ್ಪು ಕಲ್ಪನೆ. ನೆಟ್ಟ ಸಸಿಗಳು ಮರವಾಗಿ ಬೆಳೆಯುವವರೆಗೆ ಅವುಗಳ ಕಾಳಜಿವಹಿಸಬೇಕು. ಸಸ್ಯಸಂಪತ್ತುಗಳನ್ನು ಹಾಳುಗೆಡವದೆ ಅವುಗಳ ರಕ್ಷಣೆ ಮಾಡಬೇಕು’ ಎಂದರು.</p>.<p>ಗಜಾನನ ಯುವಕ ಮಂಡಳಿ ಅಧ್ಯಕ್ಷ ಉದಯ ಭೋವಿ, ‘ಕಾಂಡ್ಲಾದಂತಹ ಪರಿಸರ ಸಂರಕ್ಷಿಸುವ ಸಸ್ಯ ಪ್ರಬೇಧಗಳನ್ನು ನಾಶಪಡಿಸುವ ಕೆಲಸ ನಡೆಯುತ್ತಿದೆ. ಇವುಗಳಿಗೆ ಆಸ್ಪದ ನೀಡಬಾರದು. ಅಳಿವಿನಂಚಿನಲ್ಲಿರುವ ಸಸಿಗಳನ್ನು, ಜೀವಿಗಳನ್ನು ಸಂರಕ್ಷಿಸಿ ಮುಂದಿನ ಪೀಳಿಗೆಗೆ ಆರೋಗ್ಯಯುತ ಪರಿಸರ ಉಳಿಯುವಂತೆ ಎಚ್ಚರವಹಿಸಬೇಕು’ ಎಂದರು.</p>.<p>ಸಂತ ನಿರಂಕಾರಿ ಮಿಶನ್ನ ಜಿಲ್ಲಾ ಘಟಕದ ಸಂಯೋಜಕ ವಿನೋದ ಕೇಳಸ್ಕರ್, ‘ವನಮಹೋತ್ಸವ ಒಂದು ದಿನಕ್ಕೆ ಸೀಮಿತವಾಗಿಲ್ಲ. ಮಿಶನ್ ವತಿಯಿಂದ ನೆಟ್ಟ ಸಸಿಗಳನ್ನು ಮುಂದಿನ ಮೂರು ವರ್ಷಗಳವರೆಗೆ ನಿರಂತರವಾಗಿ ಆರೈಕೆ ಮಾಡುತ್ತೇವೆ’ ಎಂದರು.</p>.<p>ಕಾಳಿನದಿಯ ಅಂಚಿನಲ್ಲಿ ಹತ್ತಾರು ಸಸಿಗಳನ್ನು ನೆಡುವ ಜೊತೆಗೆ ಅವುಗಳಿಗೆ ರಕ್ಷಣಾ ಬೇಲಿ ಅಳವಡಿಸಲಾಯಿತು. ಗ್ರಾಮ ಪಂಚಾಯಿತಿ ಸದಸ್ಯ ದೇವರಾಜ ನಾರ್ವೇಕರ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>