<p><strong>ಶಿರಸಿ</strong>: ‘ಅರಣ್ಯ ಇಲಾಖೆಯು ಪ್ರತಿವರ್ಷ ನೆಡುವ ಗಿಡಗಳಲ್ಲಿ ಎಷ್ಟು ಸಸಿಗಳು ಬದುಕಿಕೊಂಡಿವೆ ಎಂಬ ನೈಜ ಪರಿಶೀಲನಾ ವರದಿಯನ್ನು ಸಾರ್ವಜನಿಕವಾಗಿ ಪ್ರಕಟಿಸಿ ತನ್ನ ದಕ್ಷತೆ ಸಾಬೀತುಪಡಿಸಬೇಕು’ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಆಗ್ರಹಿಸಿದ್ದಾರೆ.</p>.<p>ಈ ಕುರಿತು ಪ್ರಕಟಣೆ ನೀಡಿರುವ ಅವರು, ‘ಪರಿಸರ ಸಾಂದ್ರತೆ ಮತ್ತು ಅರಣ್ಯ ಪ್ರದೇಶ ಹೆಚ್ಚಿಸುವ ಉದ್ದೇಶದಿಂದ ಇಲಾಖೆ ಕೈಗೊಳ್ಳುತ್ತಿರುವ ನೆಡುತೋಪು ಕಾಮಗಾರಿಗಳು ವ್ಯಾಪಕ ಟೀಕೆ ಮತ್ತು ಸಂಶಯಗಳಿಗೆ ಕಾರಣವಾಗಿದ್ದು, ಈ ಯೋಜನೆಯಡಿ ಲೆಕ್ಕಕ್ಕೆ ತೋರಿಸಲಾದ ಕೋಟ್ಯಂತರ ರೂಪಾಯಿ ಹಣದ ವಿವರ ಎಲ್ಲಿದೆ? ಕೋಟಿ ಹೊಂಡಗಳು ಎಲ್ಲಿವೆ? ನೆಟ್ಟಿದ್ದು ಎಷ್ಟು ಮತ್ತು ಬದುಕಿದ್ದು ಎಷ್ಟು ಗಿಡಗಳು ಎಂಬುದನ್ನು ಇಲಾಖೆ ಬಹಿರಂಗಪಡಿಸಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.</p>.<p>ಮಾಹಿತಿ ಹಕ್ಕು ಕಾಯ್ದೆ ಹಾಗೂ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಕಾಯ್ದೆಯ ಅಡಿಯಲ್ಲಿ ಕಾಮಗಾರಿ ಸೂಚನಾ ಫಲಕಗಳಲ್ಲಿ ಪಾರದರ್ಶಕತೆಯನ್ನು ಕಡೆಗಣಿಸಲಾಗಿದೆ. ವರ್ಷದಿಂದ ವರ್ಷಕ್ಕೆ ನೆಟ್ಟ ಗಿಡಗಳಲ್ಲಿ ಬದುಕಿರುವ ಸಸಿಗಳನ್ನು ಕಟ್ಟುನಿಟ್ಟಾಗಿ ಪರಿಶೀಲಿಸುವ ನಿಯಮ ಇಲಾಖೆಯಲ್ಲಿದ್ದು, ಇದನ್ನು ಪಾರದರ್ಶಕವಾಗಿ ಬಹಿರಂಗಪಡಿಸಬೇಕು’ ಎಂದು ಆಗ್ರಹಿಸಿದ್ದಾರೆ.</p>.<p>‘ನೆಡುತೋಪುಗಳಲ್ಲಿ ಬದುಕಿರುವ ಗಿಡಗಳಿಗಿಂತ ಸತ್ತಿರುವ ಗಿಡಗಳ ಸಂಖ್ಯೆಯು ಹೆಚ್ಚಾಗಿ ಕಾಣಸಿಗುತ್ತಿದೆ’ ಎಂದು ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-20-264159328</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ</strong>: ‘ಅರಣ್ಯ ಇಲಾಖೆಯು ಪ್ರತಿವರ್ಷ ನೆಡುವ ಗಿಡಗಳಲ್ಲಿ ಎಷ್ಟು ಸಸಿಗಳು ಬದುಕಿಕೊಂಡಿವೆ ಎಂಬ ನೈಜ ಪರಿಶೀಲನಾ ವರದಿಯನ್ನು ಸಾರ್ವಜನಿಕವಾಗಿ ಪ್ರಕಟಿಸಿ ತನ್ನ ದಕ್ಷತೆ ಸಾಬೀತುಪಡಿಸಬೇಕು’ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಆಗ್ರಹಿಸಿದ್ದಾರೆ.</p>.<p>ಈ ಕುರಿತು ಪ್ರಕಟಣೆ ನೀಡಿರುವ ಅವರು, ‘ಪರಿಸರ ಸಾಂದ್ರತೆ ಮತ್ತು ಅರಣ್ಯ ಪ್ರದೇಶ ಹೆಚ್ಚಿಸುವ ಉದ್ದೇಶದಿಂದ ಇಲಾಖೆ ಕೈಗೊಳ್ಳುತ್ತಿರುವ ನೆಡುತೋಪು ಕಾಮಗಾರಿಗಳು ವ್ಯಾಪಕ ಟೀಕೆ ಮತ್ತು ಸಂಶಯಗಳಿಗೆ ಕಾರಣವಾಗಿದ್ದು, ಈ ಯೋಜನೆಯಡಿ ಲೆಕ್ಕಕ್ಕೆ ತೋರಿಸಲಾದ ಕೋಟ್ಯಂತರ ರೂಪಾಯಿ ಹಣದ ವಿವರ ಎಲ್ಲಿದೆ? ಕೋಟಿ ಹೊಂಡಗಳು ಎಲ್ಲಿವೆ? ನೆಟ್ಟಿದ್ದು ಎಷ್ಟು ಮತ್ತು ಬದುಕಿದ್ದು ಎಷ್ಟು ಗಿಡಗಳು ಎಂಬುದನ್ನು ಇಲಾಖೆ ಬಹಿರಂಗಪಡಿಸಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.</p>.<p>ಮಾಹಿತಿ ಹಕ್ಕು ಕಾಯ್ದೆ ಹಾಗೂ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಕಾಯ್ದೆಯ ಅಡಿಯಲ್ಲಿ ಕಾಮಗಾರಿ ಸೂಚನಾ ಫಲಕಗಳಲ್ಲಿ ಪಾರದರ್ಶಕತೆಯನ್ನು ಕಡೆಗಣಿಸಲಾಗಿದೆ. ವರ್ಷದಿಂದ ವರ್ಷಕ್ಕೆ ನೆಟ್ಟ ಗಿಡಗಳಲ್ಲಿ ಬದುಕಿರುವ ಸಸಿಗಳನ್ನು ಕಟ್ಟುನಿಟ್ಟಾಗಿ ಪರಿಶೀಲಿಸುವ ನಿಯಮ ಇಲಾಖೆಯಲ್ಲಿದ್ದು, ಇದನ್ನು ಪಾರದರ್ಶಕವಾಗಿ ಬಹಿರಂಗಪಡಿಸಬೇಕು’ ಎಂದು ಆಗ್ರಹಿಸಿದ್ದಾರೆ.</p>.<p>‘ನೆಡುತೋಪುಗಳಲ್ಲಿ ಬದುಕಿರುವ ಗಿಡಗಳಿಗಿಂತ ಸತ್ತಿರುವ ಗಿಡಗಳ ಸಂಖ್ಯೆಯು ಹೆಚ್ಚಾಗಿ ಕಾಣಸಿಗುತ್ತಿದೆ’ ಎಂದು ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-20-264159328</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>