ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರವಾರ: ನೀರಿನಲ್ಲಿ ಮುಳುಗಿ ಇಬ್ಬರ ಸಾವು

Published 7 ಜುಲೈ 2023, 3:58 IST
Last Updated 7 ಜುಲೈ 2023, 3:58 IST
ಅಕ್ಷರ ಗಾತ್ರ

ಕಾರವಾರ: ಕುಮಟಾ ತಾಲ್ಲೂಕಿನ ಬೆಟ್ಕುಳಿ ಗ್ರಾಮದಲ್ಲಿ ಗದ್ದೆಯಲ್ಲಿ ತುಂಬಿದ್ದ ನೀರಿನಲ್ಲಿ ಮುಳುಗಿ ಇಬ್ಬರು ಮೃತ ಪಟ್ಟ ಘಟನೆ ಗುರುವಾರ ರಾತ್ರಿ ನಡೆದಿದೆ.

ಪೋಸ್ಟ್ ಬೆಟ್ಕುಳಿ ಗ್ರಾಮದವರಾದ ಸತೀಶ ನಾಯ್ಕ (39), ಉಲ್ಲಾಸ ಗಾವಡಿ (60) ಮೃತರು‌. ಸತೀಶ ಅವರಿಗೆ ಸೇರಿದ್ದ ಗದ್ದೆಗೆ ಬೇಲಿ ಹಾಕಲು ತೆರಳಿದ್ದಾಗ ಘಟನೆ ಸಂಭವಿಸಿದೆ.

'ಅಘನಾಶಿನಿ ನದಿ ಮಟ್ಟ ಏರಿಕೆಯಾಗಿ ಗದ್ದೆಯಲ್ಲಿ ಪೂರ್ತಿ ನೀರು ತುಂಬಿಕೊಂಡಿತ್ತು. ಬೇಲಿ ಹಾಕುವ ವೇಳೆ ಉಲ್ಲಾಸ ಕಾಲು ಜಾರಿ ನೀರಿನಲ್ಲಿ ಬಿದ್ದು ಮುಳುಗಿದ್ದರು. ಅವರ ರಕ್ಷಣೆಗೆ ಧಾವಿಸಿದ್ದ ಸತೀಶ ಕೂಡ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ' ಎಂದು ಗೋಕರ್ಣ ಠಾಣೆ ಪೊಲೀಸರು ತಿಳಿಸಿದ್ದಾರೆ.

ಕಳೆದ ಮೂರು ದಿನಗಳಿಂದ ಜಿಲ್ಲೆಯ ಕರಾವಳಿ ಭಾಗದಲ್ಲಿ ನಿರಂತರ ಮಳೆ ಸುರಿಯುತ್ತಿದ್ದು ಮಳೆಯಿಂದಾಗಿ ಜೀವಹಾನಿಯಾದ ಎರಡನೆ ಪ್ರಕರಣ ಇದಾಗಿದೆ. ಜುಲೈ 5 ರಂದು ಕಾರವಾರ ತಾಲ್ಲೂಕಿನ ಅರ್ಗಾ ಗ್ರಾಮದಲ್ಲಿ ವೃದ್ಧೆಯೊಬ್ಬರು ಮೃತಪಟ್ಟಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT