<p>ಶಿರಸಿ: ‘ಗ್ರಾಮೀಣ ಭಾಗದ ರಸ್ತೆಗಳ ಸಂಪರ್ಕ ಸುಧಾರಿಸುವುದು ಮತ್ತು ಹಳ್ಳಿಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸುವುದು ಕಾಂಗ್ರೆಸ್ ಸರ್ಕಾರದ ಮೊದಲ ಆದ್ಯತೆಯಾಗಿದೆ. ಹಳ್ಳಿಗಳು ಅಭಿವೃದ್ಧಿಯಾದರೆ ಮಾತ್ರ ನಾಡಿನ ಸಮಗ್ರ ವಿಕಾಸ ಸಾಧ್ಯ’ ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು.</p>.<p>ತಾಲ್ಲೂಕಿನ ಇಸಳೂರು, ಕೊಡ್ನಗದ್ದೆ ಮತ್ತು ವಾನಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಟ್ಟು ₹3.36 ಕೋಟಿ ವೆಚ್ಚದ ವಿವಿಧ ರಸ್ತೆ ಸುಧಾರಣೆ ಹಾಗೂ ತಡೆಗೋಡೆ ನಿರ್ಮಾಣ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.</p>.<p>‘ಗ್ರಾಮೀಣ ಭಾಗದ ಜನರಿಗೆ ಸುಗಮ ಸಾರಿಗೆ ವ್ಯವಸ್ಥೆ ಕಲ್ಪಿಸುವುದು ಸರ್ಕಾರದ ಮುಖ್ಯ ಆಶಯವಾಗಿದೆ. ಹೀಗಾಗಿ ಕಾಮಗಾರಿಗಳಲ್ಲಿ ಯಾವುದೇ ಕಾರಣಕ್ಕೂ ಗುಣಮಟ್ಟದ ಕೊರತೆಯಾಗದಂತೆ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಬೇಕು’ ಎಂದು ಇದೇ ವೇಳೆ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಿದರು.</p>.<p>ಇಸಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಮನಬೈಲ್ನಿಂದ ಜವಳಗುಂದಿಗೆ ಹೋಗುವ ರಸ್ತೆಯಲ್ಲಿ ₹15 ಲಕ್ಷ ವೆಚ್ಚದ ಸೇತುವೆ ತಡೆಗೋಡೆ ಕಾಮಗಾರಿಗೆ ಚಾಲನೆ ನೀಡಿದ ಶಾಸಕರು, ಕೊಡ್ನಗದ್ದೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜಾಜಿಗುಡ್ಡೆ ರಸ್ತೆ ತಡೆಗೋಡೆಗೆ ₹50 ಲಕ್ಷ, ಜಡ್ಡಿಗದ್ದೆ ಹೊಸಕೊಪ್ಪದಿಂದ ಗಣೇಶ ಫಾಲ್ಸ್ ರಸ್ತೆ ಸುಧಾರಣೆಗೆ ₹22 ಲಕ್ಷ, ಸರನಗದ್ದೆ ಮಿಂಟೆಪಾಲ್ಗೆ ಹೋಗುವ ರಸ್ತೆಗೆ ₹25 ಲಕ್ಷ ಹಾಗೂ ಜಡ್ಡಿಗದ್ದೆ ಮುಖ್ಯ ರಸ್ತೆಯಿಂದ ಧೂಳಳ್ಳಿ ಶಾಲೆಯವರೆಗಿನ ರಸ್ತೆ ಸುಧಾರಣೆಗೆ ₹20 ಲಕ್ಷ ವೆಚ್ಚದ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದರು.</p>.<p>ಅದೇ ರೀತಿ ವಾನಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮುಸ್ಕಿಯಿಂದ ಶಿರಗುಣಿ ಮಾರ್ಗವಾಗಿ ಉಡಾಳಗದ್ದೇ ಸೇರುವ ರಸ್ತೆ ಸುಧಾರಣೆಗೆ ₹1 ಕೋಟಿ, ಧೋರಣಗಿರಿ ಹಾಲಿನ ಡೈರಿಯಿಂದ ಹೊಸರಿಮನೆ-ದೇವಿತೋಟ ಮಾರ್ಗದ ರಸ್ತೆಗೆ ₹20 ಲಕ್ಷ, ಶಿರಸಗಾಂವ ಮುಖ್ಯ ರಸ್ತೆಯಿಂದ ಹಗುರಮನೆವರೆಗೆ ₹35 ಲಕ್ಷ ಹಾಗೂ ಮಡಗಿಕಾನು, ಮುಂದಿಗೆಮನೆ, ವಾಟೆಬೆಟ್ಟ ಮಾರ್ಗದ ರಸ್ತೆ ಸುಧಾರಣೆಗೆ ₹48 ಲಕ್ಷ ವೆಚ್ಚದ ಯೋಜನೆಗಳಿಗೆ ಚಾಲನೆ ನೀಡಿದರು.</p>.<p>ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಜಗದೀಶ ಗೌಡ, ತಾಲ್ಲೂಕು ಪಂಚಾಯಿತಿ ಇಒ ಚನ್ನಬಸಪ್ಪ ಹಾವಣಗಿ, ಪ್ರಮುಖರಾದ ಖಾಸಿಂ ಸಾಬ್, ಶಶಿಕಲಾ ನಾಯ್ಕ, ಶ್ರೀಪಾದ ಹೆಗಡೆ ಕಡವೆ, ನಾರಾಯಣ ಹೆಗಡೆ ಹಾಗೂ ಇತರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-20-1914970399</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿರಸಿ: ‘ಗ್ರಾಮೀಣ ಭಾಗದ ರಸ್ತೆಗಳ ಸಂಪರ್ಕ ಸುಧಾರಿಸುವುದು ಮತ್ತು ಹಳ್ಳಿಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸುವುದು ಕಾಂಗ್ರೆಸ್ ಸರ್ಕಾರದ ಮೊದಲ ಆದ್ಯತೆಯಾಗಿದೆ. ಹಳ್ಳಿಗಳು ಅಭಿವೃದ್ಧಿಯಾದರೆ ಮಾತ್ರ ನಾಡಿನ ಸಮಗ್ರ ವಿಕಾಸ ಸಾಧ್ಯ’ ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು.</p>.<p>ತಾಲ್ಲೂಕಿನ ಇಸಳೂರು, ಕೊಡ್ನಗದ್ದೆ ಮತ್ತು ವಾನಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಟ್ಟು ₹3.36 ಕೋಟಿ ವೆಚ್ಚದ ವಿವಿಧ ರಸ್ತೆ ಸುಧಾರಣೆ ಹಾಗೂ ತಡೆಗೋಡೆ ನಿರ್ಮಾಣ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.</p>.<p>‘ಗ್ರಾಮೀಣ ಭಾಗದ ಜನರಿಗೆ ಸುಗಮ ಸಾರಿಗೆ ವ್ಯವಸ್ಥೆ ಕಲ್ಪಿಸುವುದು ಸರ್ಕಾರದ ಮುಖ್ಯ ಆಶಯವಾಗಿದೆ. ಹೀಗಾಗಿ ಕಾಮಗಾರಿಗಳಲ್ಲಿ ಯಾವುದೇ ಕಾರಣಕ್ಕೂ ಗುಣಮಟ್ಟದ ಕೊರತೆಯಾಗದಂತೆ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಬೇಕು’ ಎಂದು ಇದೇ ವೇಳೆ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಿದರು.</p>.<p>ಇಸಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಮನಬೈಲ್ನಿಂದ ಜವಳಗುಂದಿಗೆ ಹೋಗುವ ರಸ್ತೆಯಲ್ಲಿ ₹15 ಲಕ್ಷ ವೆಚ್ಚದ ಸೇತುವೆ ತಡೆಗೋಡೆ ಕಾಮಗಾರಿಗೆ ಚಾಲನೆ ನೀಡಿದ ಶಾಸಕರು, ಕೊಡ್ನಗದ್ದೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜಾಜಿಗುಡ್ಡೆ ರಸ್ತೆ ತಡೆಗೋಡೆಗೆ ₹50 ಲಕ್ಷ, ಜಡ್ಡಿಗದ್ದೆ ಹೊಸಕೊಪ್ಪದಿಂದ ಗಣೇಶ ಫಾಲ್ಸ್ ರಸ್ತೆ ಸುಧಾರಣೆಗೆ ₹22 ಲಕ್ಷ, ಸರನಗದ್ದೆ ಮಿಂಟೆಪಾಲ್ಗೆ ಹೋಗುವ ರಸ್ತೆಗೆ ₹25 ಲಕ್ಷ ಹಾಗೂ ಜಡ್ಡಿಗದ್ದೆ ಮುಖ್ಯ ರಸ್ತೆಯಿಂದ ಧೂಳಳ್ಳಿ ಶಾಲೆಯವರೆಗಿನ ರಸ್ತೆ ಸುಧಾರಣೆಗೆ ₹20 ಲಕ್ಷ ವೆಚ್ಚದ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದರು.</p>.<p>ಅದೇ ರೀತಿ ವಾನಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮುಸ್ಕಿಯಿಂದ ಶಿರಗುಣಿ ಮಾರ್ಗವಾಗಿ ಉಡಾಳಗದ್ದೇ ಸೇರುವ ರಸ್ತೆ ಸುಧಾರಣೆಗೆ ₹1 ಕೋಟಿ, ಧೋರಣಗಿರಿ ಹಾಲಿನ ಡೈರಿಯಿಂದ ಹೊಸರಿಮನೆ-ದೇವಿತೋಟ ಮಾರ್ಗದ ರಸ್ತೆಗೆ ₹20 ಲಕ್ಷ, ಶಿರಸಗಾಂವ ಮುಖ್ಯ ರಸ್ತೆಯಿಂದ ಹಗುರಮನೆವರೆಗೆ ₹35 ಲಕ್ಷ ಹಾಗೂ ಮಡಗಿಕಾನು, ಮುಂದಿಗೆಮನೆ, ವಾಟೆಬೆಟ್ಟ ಮಾರ್ಗದ ರಸ್ತೆ ಸುಧಾರಣೆಗೆ ₹48 ಲಕ್ಷ ವೆಚ್ಚದ ಯೋಜನೆಗಳಿಗೆ ಚಾಲನೆ ನೀಡಿದರು.</p>.<p>ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಜಗದೀಶ ಗೌಡ, ತಾಲ್ಲೂಕು ಪಂಚಾಯಿತಿ ಇಒ ಚನ್ನಬಸಪ್ಪ ಹಾವಣಗಿ, ಪ್ರಮುಖರಾದ ಖಾಸಿಂ ಸಾಬ್, ಶಶಿಕಲಾ ನಾಯ್ಕ, ಶ್ರೀಪಾದ ಹೆಗಡೆ ಕಡವೆ, ನಾರಾಯಣ ಹೆಗಡೆ ಹಾಗೂ ಇತರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-20-1914970399</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>