<p><strong>ಭಟ್ಕಳ</strong> ಉತ್ತರ ಕನ್ನಡ ಜಿಲ್ಲೆಯ ಶಿರಾಲಿ ಭಾಗದಲ್ಲಿ ಸಂಭವಿಸಿದ ಭೀಕರ ಚಿಪ್ಪೆಕಲ್ಲು ದುರಂತದಲ್ಲಿ ಮೃತಪಟ್ಟ ಕುಟುಂಬಗಳ ನೆರವಿಗೆ ಸಚಿವ ಮಂಕಾಳ ವೈದ್ಯ ಮಾನವೀಯತೆ ಮೆರೆದಿದ್ದು, ತಮ್ಮ ಇಲಾಖೆಯ ವತಿಯಿಂದ ₹ 10 ಲಕ್ಷ ಪರಿಹಾರ ಮಂಜೂರು ಮಾಡಿಸಿರುವುದಾಗಿ ತಿಳಿಸಿದ್ದಾರೆ. ದುರಂತದಲ್ಲಿ ಕುಟುಂಬದ ಆಧಾರಸ್ತಂಭಗಳನ್ನು ಕಳೆದುಕೊಂಡ ಸಂತ್ರಸ್ತರಿಗೆ ತಕ್ಷಣ ನೆರವಾಗುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.</p>.<p>ದುರಂತದ ಬಳಿಕ ಮೃತರ ಮನೆಗಳಿಗೆ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ ಸಚಿವರು, ಬದುಕಿನ ಸಂಕಷ್ಟದ ನಡುವೆ ಸರ್ಕಾರ ಮತ್ತು ಸಮಾಜ ಸಂತ್ರಸ್ತ ಕುಟುಂಬಗಳ ಜೊತೆ ನಿಲ್ಲಬೇಕಾಗಿದ್ದು ಇದಕ್ಕೆ ತಾವು ಬದ್ದರಿದ್ದೆವೆ. ಈಗಾಗಲೇ ಸರ್ಕಾರದಿಂದ ತಲಾ ₹ 5 ಲಕ್ಷ ಪರಿಹಾರ ಮಂಜೂರಾಗಿದ್ದು, ಅದಕ್ಕೆ ಹೆಚ್ಚುವರಿಯಾಗಿ ತಮ್ಮ ಇಲಾಖೆಯಿಂದ ₹ 10 ಲಕ್ಷ ನೆರವು ಬಿಡುಗಡೆ ಮಾಡಲಾಗಿದ್ದೂ ಒಟ್ಟು 1ಕೋಟಿ 65 ಲಕ್ಷ ಪರಿಹಾರ ನೀಡಿದಂತಾಗಿದೆ ಎಂದರು.</p>.<p>ಅಲ್ಲದೆ, ಪರಿಹಾರದ ಚೆಕ್ಗಳು ಸಿದ್ದವಾಗಿದ್ದು ಈ ಕೂಡಲೆ ವಿತರಿಸಲಾಗುವುದು. ಮೃತರ ಮಕ್ಕಳ ಶಿಕ್ಷಣ, ಕುಟುಂಬದ ಭವಿಷ್ಯದ ಕುರಿತು ವಿಶೇಷ ಗಮನ ಹರಿಸಲಾಗುವುದು ಎಂದರು.</p>.<p>ನಾಮಧಾರಿ ಸಮಾಜಬಾಂಧವರು ಸಹ ಮೃತರ ಕುಟುಂಬಗಳ ನೆರವಿಗೆ ಮುಂದಾಗುತ್ತಿದ್ದು, ಮಾನವೀಯತೆ ಮೆರೆಯುತ್ತಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260529-20-2061824221</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭಟ್ಕಳ</strong> ಉತ್ತರ ಕನ್ನಡ ಜಿಲ್ಲೆಯ ಶಿರಾಲಿ ಭಾಗದಲ್ಲಿ ಸಂಭವಿಸಿದ ಭೀಕರ ಚಿಪ್ಪೆಕಲ್ಲು ದುರಂತದಲ್ಲಿ ಮೃತಪಟ್ಟ ಕುಟುಂಬಗಳ ನೆರವಿಗೆ ಸಚಿವ ಮಂಕಾಳ ವೈದ್ಯ ಮಾನವೀಯತೆ ಮೆರೆದಿದ್ದು, ತಮ್ಮ ಇಲಾಖೆಯ ವತಿಯಿಂದ ₹ 10 ಲಕ್ಷ ಪರಿಹಾರ ಮಂಜೂರು ಮಾಡಿಸಿರುವುದಾಗಿ ತಿಳಿಸಿದ್ದಾರೆ. ದುರಂತದಲ್ಲಿ ಕುಟುಂಬದ ಆಧಾರಸ್ತಂಭಗಳನ್ನು ಕಳೆದುಕೊಂಡ ಸಂತ್ರಸ್ತರಿಗೆ ತಕ್ಷಣ ನೆರವಾಗುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.</p>.<p>ದುರಂತದ ಬಳಿಕ ಮೃತರ ಮನೆಗಳಿಗೆ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ ಸಚಿವರು, ಬದುಕಿನ ಸಂಕಷ್ಟದ ನಡುವೆ ಸರ್ಕಾರ ಮತ್ತು ಸಮಾಜ ಸಂತ್ರಸ್ತ ಕುಟುಂಬಗಳ ಜೊತೆ ನಿಲ್ಲಬೇಕಾಗಿದ್ದು ಇದಕ್ಕೆ ತಾವು ಬದ್ದರಿದ್ದೆವೆ. ಈಗಾಗಲೇ ಸರ್ಕಾರದಿಂದ ತಲಾ ₹ 5 ಲಕ್ಷ ಪರಿಹಾರ ಮಂಜೂರಾಗಿದ್ದು, ಅದಕ್ಕೆ ಹೆಚ್ಚುವರಿಯಾಗಿ ತಮ್ಮ ಇಲಾಖೆಯಿಂದ ₹ 10 ಲಕ್ಷ ನೆರವು ಬಿಡುಗಡೆ ಮಾಡಲಾಗಿದ್ದೂ ಒಟ್ಟು 1ಕೋಟಿ 65 ಲಕ್ಷ ಪರಿಹಾರ ನೀಡಿದಂತಾಗಿದೆ ಎಂದರು.</p>.<p>ಅಲ್ಲದೆ, ಪರಿಹಾರದ ಚೆಕ್ಗಳು ಸಿದ್ದವಾಗಿದ್ದು ಈ ಕೂಡಲೆ ವಿತರಿಸಲಾಗುವುದು. ಮೃತರ ಮಕ್ಕಳ ಶಿಕ್ಷಣ, ಕುಟುಂಬದ ಭವಿಷ್ಯದ ಕುರಿತು ವಿಶೇಷ ಗಮನ ಹರಿಸಲಾಗುವುದು ಎಂದರು.</p>.<p>ನಾಮಧಾರಿ ಸಮಾಜಬಾಂಧವರು ಸಹ ಮೃತರ ಕುಟುಂಬಗಳ ನೆರವಿಗೆ ಮುಂದಾಗುತ್ತಿದ್ದು, ಮಾನವೀಯತೆ ಮೆರೆಯುತ್ತಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260529-20-2061824221</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>