‘ಇಲ್ಲಿಯ ತಾಲ್ಲೂಕು ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಅರ್ಜಿ ಆಹ್ವಾನಿಸಿದ್ದರೂ, ಇನ್ನೂವರೆಗೂ ಯಾರೂ ಸಂದರ್ಶನಕ್ಕೆ ಬಂದಿಲ್ಲ. ಮತ್ತೊಮ್ಮೆ ವೈದ್ಯರ ನೇಮಕಕ್ಕೆ ಅರ್ಜಿ ಕರೆಯಲಾಗುವುದು. ಅರ್ಹತೆ ಇರುವ ವೈದ್ಯರು ಯಾರಾದರೂ ಬಂದರೇ, ಕೂಡಲೇ ನೇಮಕಾತಿ ಮಾಡಿಕೊಳ್ಳಲಾಗುವುದು. ಎಸ್ಎಸ್ಎಲ್ಸಿ ಹಾಗೂ ಪಿಯು ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ಇನ್ನಷ್ಟು ಪರಿಣಾಮಕಾರಿ ಯೋಜನೆಗಳನ್ನು ರೂಪಿಸಲು ಈಗಾಗಲೇ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ 60ಕ್ಕಿಂತ ಹೆಚ್ಚು ಅಂಕ ಪಡೆಯುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಬೇಕು’ ಎಂದರು.