<p>ಭಟ್ಕಳ: ತಾಲ್ಲೂಕಿನ ಬಸ್ತಿ ಕಾಯ್ಕಿಣಿಯಲ್ಲಿ ಜಾಲಿ ಗ್ರಾಮೀಣ ವ್ಯವಸಾಯ ಸೇವಾ ಸಹಕಾರ ಸಂಘದ 6ನೇಯ ಶಾಖೆಯನ್ನು ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಉದ್ಘಾಟಿಸಿದರು.</p>.<p>ಬಳಿಕ ಮಾತನಾಡಿದ ಅವರು, ‘ಸಂಸ್ಥೆಯ ಶಿಸ್ತುಬದ್ದ ವ್ಯವಹಾರದಿಂದಾಗಿ ಜನಮನ್ನಣೆಗಳಿಸಿ ಎರಡು ಸ್ವಂತ ಕಟ್ಟಡ ಹಾಗೂ ₹25 ಕೋಟಿ ಸ್ವಂತ ಬಂಡವಾಳ ಕೂಡಿಡುವಲ್ಲಿ ಸಫಲವಾಗಿದೆ. ಗ್ರಾಮೀಣ ಭಾಗದ ಜನರಿಗೆ ತನ್ನ ಸೇವೆಯನ್ನು ವಿಸ್ತರಿಸುವ ಅಭಿಲಾಷೆಯಿಂದ ಬಸ್ತಿ ಕಾಯ್ಕಿಣಿಯಲ್ಲಿ ಶಾಖೆ ತೆರೆದಿದೆ. ಈ ಭಾಗದ ಜನರು ಇದರ ಪ್ರಯೋಜನ ಪಡೆದುಕೊಳ್ಳಬೇಕು’ ಎಂದರು.</p>.<p>ಸಂಘದ ಅಧ್ಯಕ್ಷ ಮಂಜಪ್ಪ ನಾಯ್ಕ ಸಂಘದ ನಡೆದು ಬಂದ ಹಾದಿ, ಪ್ರಗತಿಯ ಬಗ್ಗೆ ತಿಳಿಸಿ ಸಂಘದ ಸರ್ವತೋಮುಖ ಅಭಿವೃದ್ದಿಗೆ ಗ್ರಾಹಕರ ಸಹಕಾರ ಕೋರಿದರು. ಸಂಸ್ಥಾಪಕ ಅಧ್ಯಕ್ಷ ಡಿ.ಬಿ ನಾಯ್ಕ ಮಾತನಾಡಿದರು.</p>.<p>ಉಪಾಧ್ಯಕ್ಷ ರತ್ನಾಕರ ಖಾರ್ವಿ, ನಿರ್ದೇಶಕರಾದ ರವಿ ನಾಯ್ಕ ಜಾಲಿ, ರಾಮಾ ಮೊಗೇರ, ಬೈರಪ್ಪ ನಾಯ್ಕ, ಕೃಷ್ಣಕುಮಾರ ಜಾಲಿ, ವಸಂತ ನಾಯ್ಕ, ರಾಜು ಗೊಂಡ, ಮೋಹಿನಿ ನಾಯ್ಕ, ಅನ್ನಪೂರ್ಣ ನಾಯ್ಕ, ಪ್ರಧಾನ ವ್ಯವಸ್ಥಾಪಕ ಕೃಷ್ಣ ನಾಯ್ಕ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಭಟ್ಕಳ: ತಾಲ್ಲೂಕಿನ ಬಸ್ತಿ ಕಾಯ್ಕಿಣಿಯಲ್ಲಿ ಜಾಲಿ ಗ್ರಾಮೀಣ ವ್ಯವಸಾಯ ಸೇವಾ ಸಹಕಾರ ಸಂಘದ 6ನೇಯ ಶಾಖೆಯನ್ನು ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಉದ್ಘಾಟಿಸಿದರು.</p>.<p>ಬಳಿಕ ಮಾತನಾಡಿದ ಅವರು, ‘ಸಂಸ್ಥೆಯ ಶಿಸ್ತುಬದ್ದ ವ್ಯವಹಾರದಿಂದಾಗಿ ಜನಮನ್ನಣೆಗಳಿಸಿ ಎರಡು ಸ್ವಂತ ಕಟ್ಟಡ ಹಾಗೂ ₹25 ಕೋಟಿ ಸ್ವಂತ ಬಂಡವಾಳ ಕೂಡಿಡುವಲ್ಲಿ ಸಫಲವಾಗಿದೆ. ಗ್ರಾಮೀಣ ಭಾಗದ ಜನರಿಗೆ ತನ್ನ ಸೇವೆಯನ್ನು ವಿಸ್ತರಿಸುವ ಅಭಿಲಾಷೆಯಿಂದ ಬಸ್ತಿ ಕಾಯ್ಕಿಣಿಯಲ್ಲಿ ಶಾಖೆ ತೆರೆದಿದೆ. ಈ ಭಾಗದ ಜನರು ಇದರ ಪ್ರಯೋಜನ ಪಡೆದುಕೊಳ್ಳಬೇಕು’ ಎಂದರು.</p>.<p>ಸಂಘದ ಅಧ್ಯಕ್ಷ ಮಂಜಪ್ಪ ನಾಯ್ಕ ಸಂಘದ ನಡೆದು ಬಂದ ಹಾದಿ, ಪ್ರಗತಿಯ ಬಗ್ಗೆ ತಿಳಿಸಿ ಸಂಘದ ಸರ್ವತೋಮುಖ ಅಭಿವೃದ್ದಿಗೆ ಗ್ರಾಹಕರ ಸಹಕಾರ ಕೋರಿದರು. ಸಂಸ್ಥಾಪಕ ಅಧ್ಯಕ್ಷ ಡಿ.ಬಿ ನಾಯ್ಕ ಮಾತನಾಡಿದರು.</p>.<p>ಉಪಾಧ್ಯಕ್ಷ ರತ್ನಾಕರ ಖಾರ್ವಿ, ನಿರ್ದೇಶಕರಾದ ರವಿ ನಾಯ್ಕ ಜಾಲಿ, ರಾಮಾ ಮೊಗೇರ, ಬೈರಪ್ಪ ನಾಯ್ಕ, ಕೃಷ್ಣಕುಮಾರ ಜಾಲಿ, ವಸಂತ ನಾಯ್ಕ, ರಾಜು ಗೊಂಡ, ಮೋಹಿನಿ ನಾಯ್ಕ, ಅನ್ನಪೂರ್ಣ ನಾಯ್ಕ, ಪ್ರಧಾನ ವ್ಯವಸ್ಥಾಪಕ ಕೃಷ್ಣ ನಾಯ್ಕ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>