ಪಟ್ಟಣ ಪಂಚಾಯ್ತಿಗೆ ಒಳಪಟ್ಟಿದ್ದಈ ಹಳ್ಳಿಗಳನ್ನು 2001ರಲ್ಲಿ ಠರಾವು ಮಾಡಿ ಹೊರಗಿಡಲಾಗಿತ್ತು. ಆದರೆ, ಅದಾದ ಬಳಿಕ ಯಾವುದೇ ಗ್ರಾಮ ಪಂಚಾಯ್ತಿಗಳಿಗೂ ಸೇರಿಸಿಲ್ಲ. ಇದರ ವಿರುದ್ಧ ಹೈಕೋರ್ಟ್ಗೆ ದೂರು ನೀಡಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯವು,2015ರ ನ.23ರಂದು ಸರ್ಕಾರಕ್ಕೆ ವರದಿ ನೀಡುವಂತೆ ಸೂಚಿಸಿತ್ತು. ಅದರಂತೆ ಜಿಲ್ಲಾಧಿಕಾರಿಯು ಗ್ರಾಮ ಪಂಚಾಯ್ತಿಗಳಿಗೆ ಸೇರಿಸುವಂತೆ ಶಿಫಾರಸು ಮಾಡಿದ್ದರು. ಆದರೆ, ಸರ್ಕಾರದಿಂದ ಈವರೆಗೂ ಯಾವುದೇ ಆದೇಶ ಬಂದಿಲ್ಲ ಎಂದು ಮನವಿಯಲ್ಲಿ ವಿವರಿಸಿದ್ದಾರೆ.