ಬುಧವಾರ, 15 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾಂಡೇಲಿ | ಮತದಾನ ಜಾಗೃತಿ: ಬೈಕ್ ರ್‍ಯಾಲಿ

Published 1 ಮೇ 2024, 12:50 IST
Last Updated 1 ಮೇ 2024, 12:50 IST
ಅಕ್ಷರ ಗಾತ್ರ

ದಾಂಡೇಲಿ: ಬಂಗೂರನಗರ ಪದವಿ ಕಾಲೇಜಿನ ಎನ್ಎಸ್ಎಸ್ ಹಾಗೂ ರಾಜ್ಯಶಾಸ್ತ್ರ ವಿಭಾಗ ಹಾಗೂ ಸುವರ್ಣ ಮಹೋತ್ಸವದ ಆಚರಣೆ ಸಮಿತಿ ಸಂಯುಕ್ತಾಶ್ರಯದಲ್ಲಿ ಬುಧವಾರ ಮತದಾನ ಜಾಗೃತಿ ಅಂಗವಾಗಿ ಬೈಕ್ ರ್‍ಯಾಲಿ ನಡೆಯಿತು.

ದಾಂಡೇಲಿ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶೆ ರೋಹಿಣಿ ಬಸಾಪುರ ಬೈಕ್ ರ್‍ಯಾಲಿಗೆ ಚಾಲನೆ ನೀಡಿದರು.

ಸೋಮಾನಿ ಸರ್ಕಲ್, ಕೆ.ಸಿ ಸರ್ಕಲ್, ಗಣೇಶನಗರ ಮುಂತಾದ ಕಡೆ ಸಂಚರಿಸಿ ನಾಗರಿಕರಲ್ಲಿ ಕಡ್ಡಾಯವಾಗಿ ಮತದಾನ ಮಾಡುವಂತೆ ಜಾಗೃತಿ ಮೂಡಿಸಲಾಯಿತು. ಕಾಲೇಜಿನ ವಿದ್ಯಾರ್ಥಿಗಳು ಮತ್ತು ಬೋಧಕ, ಬೋಧಕೇತರ ಸಿಬ್ಬಂದಿ ಪಾಲ್ಗೊಂಡಿದ್ದರು.

ಕಾಲೇಜಿನ ರಂಗನಾಥ ಸಭಾಭವನದಲ್ಲಿ ಕಂದಾಯ ಇಲಾಖೆ ಸಿಬ್ಬಂದಿ ಗೋಪಿ ಚೌಹಾನ್ ಅವರು ಇವಿಎಂ ಯಂತ್ರದ ಪ್ರಾತ್ಯಕ್ಷಿಕೆ ಮೂಲಕ ಮತ ಚಲಾವಣೆ ಹಾಗೂ ಇವಿಂ ಕಾರ್ಯ ವೈಖರಿ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಪ್ರಾಚಾರ್ಯ ಬಿ.ಎಲ್ ಗುಂಡೂರ, ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರು ಹಾಗೂ ಚುನಾವಣಾ ಸಾಕ್ಷರತಾ ಕ್ಲಬ್‌ನ ಸಂಯೋಜಕ ಎಸ್.ಎಸ್ ಹಿರೇಮಠ, ಎಸ್.ಎಸ್. ದೊಡ್ಮನಿ, ನಯನಾ ರೇವಣಕರ್, ಅನಿತಾ ನಾಯರ, ಪ್ರಕಾಶ್ ಹೊಸಮನಿ, ಬಾಗೇವಾಡಿ, ವಿನಯ, ತಾಲ್ಲೂಕು ಪಂಚಾಯಿತಿ ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT