‘ಅಘನಾಶಿನಿ ನದಿಯಲ್ಲೂ ನೀರಿಲ್ಲ. ಹೀಗಾಗಿ, ಮಾರಿಗದ್ದೆಯ ಜಾಕ್ವೆಲ್ ಸ್ಥಳದಲ್ಲಿ ನೀರಿನ ಸಂಗ್ರಹ ತೀವ್ರ ಕುಸಿದಿದೆ. ಪ್ರತಿದಿನ ಇಲ್ಲಿಂದ 40 ಲಕ್ಷ ಲೀಟರ್ ನೀರನ್ನು ಎತ್ತಲಾಗುತ್ತಿತ್ತು. ಈಗ ಮೂರು ದಿನಕ್ಕೊಮ್ಮೆ 20 ಲಕ್ಷ ಲೀಟರ್ ನೀರು ಮಾತ್ರ ಸಿಗುತ್ತಿದೆ. ಹೊಳೆಯಲ್ಲಿ ನೀರು ಸಿಗುವ ಪ್ರಮಾಣ ಕಡಿಮೆಯಾಗಿದ್ದರಿಂದ, ಮೂರು ದಿನಕ್ಕೊಮ್ಮೆ ನೀರು ಸರಬರಾಜು ಮಾಡುವುದು ಅನಿವಾರ್ಯವಾಗಿದೆ. ಒಮ್ಮೆ ಅಡ್ಡ ಮಳೆಯಾದರೆ, ಗ್ರಾಮೀಣ ಜಲಮೂಲಗಳಲ್ಲಿ ನೀರಿನ ಲಭ್ಯತೆ ಹೆಚ್ಚಾಗುತ್ತದೆ’ ಎಂದು ಅವರು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.