<p><strong>ಶಿರಸಿ</strong>: ‘ವ್ಯಕ್ತಿಯ ಕಾಲು ಎಡವಿದರೆ ಅನಾಹುತ ಕಡಿಮೆ. ಆದರೆ ನಾಲಿಗೆ ಎಡವಿದರೆ ಅದರ ಪರಿಣಾಮ ತೀವ್ರವಾಗಿರುತ್ತದೆ. ಹಾಗಾಗಿ ಪ್ರತಿಯೊಬ್ಬರೂ ತಮ್ಮ ಮಾತಿನ ಮೇಲೆ ಹಿಡಿತ ಸಾಧಿಸಬೇಕು’ ಎಂದು ವಾಗ್ಮಿ ಹಿರೇಮಗಳೂರು ಕಣ್ಣನ್ ಹೇಳಿದರು. </p>.<p>ವಿಶ್ವಶಾಂತಿ ಸೇವಾ ಟ್ರಸ್ಟ್ ವತಿಯಿಂದ ನಗರದ ಟಿಎಂಎಸ್ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ‘ಕಣ್ಣನ್ ಜತೆ ಮಾತುಕತೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ‘ನಾವು ಬಳಸುವ ಭಾಷೆಯ ಮೇಲೆ ಹಿಡಿತವಿದ್ದರೆ ಜೀವನ ಪಥದಲ್ಲಿ ಯಶಸ್ಸು ಸಾಧಿಸಬಹುದು’ ಎಂದರು.</p>.<p>‘ಬೇರೆ ಭಾಷೆ ಕಲಿಯಿರಿ ಆದರೆ ಕನ್ನಡದ ಭಾವನೆಯಿಂದ ದೂರ ಸರಿಯಬಾರದು’ ಎಂದ ಅವರು, ‘ಜೀವನೋತ್ಸಾಹ ಯಾರಿಂದಲೂ ಕಲಿಯಬಹುದು. ಆದರೆ ಅದರಲ್ಲಿ ಫಟಿಂಗತನ ಇರಬಾರದು’ ಎಂದು ಹೇಳಿದರು.</p>.<p>‘ಅನಕ್ಷರಸ್ಥರು ಮತ್ತು ಅಜ್ಞಾನಿಗಳ ನಡುವೆ ಬಹಳಷ್ಟು ವ್ಯತ್ಯಾಸವಿದೆ. ಹಾಗಾಗಿಯೇ ಜನಪದವು ಜೀವನ ಸಂದೇಶ ನೀಡುತ್ತದೆ. ಜನಪದರು ಅನಕ್ಷರಸ್ಥರಾದರೂ ಜ್ಞಾನ ನೀಡುವ ಸಾಮರ್ಥ್ಯ ಹೊಂದಿದ್ದಾರೆ’ ಎಂದರು. </p>.<p>ಧಾರವಾಡ ಹಾಲು ಒಕ್ಕೂಟದ ಉಪಾಧ್ಯಕ್ಷ ಸುರೇಶ್ಚಂದ್ರ ಹೆಗಡೆ ಮಾತನಾಡಿದರು. ರಾಜದೀಪ್ ಟ್ರಸ್ಟ್ ಅಧ್ಯಕ್ಷ ದೀಪಕ ದೊಡ್ಡೂರು, ವಿಶ್ವಶಾಂತಿ ಸೇವಾ ಟ್ರಸ್ಟ್ ಪದಾಧಿಕಾರಿಗಳಾದ ರಮೇಶ ಹೆಗಡೆ, ಗಾಯತ್ರಿ ರಾಘವೇಂದ್ರ, ರಾಘವೇಂದ್ರ ಬೆಟ್ಟಕೊಪ್ಪ, ನಾರಾಯಣ ಭಾಗವತ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ</strong>: ‘ವ್ಯಕ್ತಿಯ ಕಾಲು ಎಡವಿದರೆ ಅನಾಹುತ ಕಡಿಮೆ. ಆದರೆ ನಾಲಿಗೆ ಎಡವಿದರೆ ಅದರ ಪರಿಣಾಮ ತೀವ್ರವಾಗಿರುತ್ತದೆ. ಹಾಗಾಗಿ ಪ್ರತಿಯೊಬ್ಬರೂ ತಮ್ಮ ಮಾತಿನ ಮೇಲೆ ಹಿಡಿತ ಸಾಧಿಸಬೇಕು’ ಎಂದು ವಾಗ್ಮಿ ಹಿರೇಮಗಳೂರು ಕಣ್ಣನ್ ಹೇಳಿದರು. </p>.<p>ವಿಶ್ವಶಾಂತಿ ಸೇವಾ ಟ್ರಸ್ಟ್ ವತಿಯಿಂದ ನಗರದ ಟಿಎಂಎಸ್ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ‘ಕಣ್ಣನ್ ಜತೆ ಮಾತುಕತೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ‘ನಾವು ಬಳಸುವ ಭಾಷೆಯ ಮೇಲೆ ಹಿಡಿತವಿದ್ದರೆ ಜೀವನ ಪಥದಲ್ಲಿ ಯಶಸ್ಸು ಸಾಧಿಸಬಹುದು’ ಎಂದರು.</p>.<p>‘ಬೇರೆ ಭಾಷೆ ಕಲಿಯಿರಿ ಆದರೆ ಕನ್ನಡದ ಭಾವನೆಯಿಂದ ದೂರ ಸರಿಯಬಾರದು’ ಎಂದ ಅವರು, ‘ಜೀವನೋತ್ಸಾಹ ಯಾರಿಂದಲೂ ಕಲಿಯಬಹುದು. ಆದರೆ ಅದರಲ್ಲಿ ಫಟಿಂಗತನ ಇರಬಾರದು’ ಎಂದು ಹೇಳಿದರು.</p>.<p>‘ಅನಕ್ಷರಸ್ಥರು ಮತ್ತು ಅಜ್ಞಾನಿಗಳ ನಡುವೆ ಬಹಳಷ್ಟು ವ್ಯತ್ಯಾಸವಿದೆ. ಹಾಗಾಗಿಯೇ ಜನಪದವು ಜೀವನ ಸಂದೇಶ ನೀಡುತ್ತದೆ. ಜನಪದರು ಅನಕ್ಷರಸ್ಥರಾದರೂ ಜ್ಞಾನ ನೀಡುವ ಸಾಮರ್ಥ್ಯ ಹೊಂದಿದ್ದಾರೆ’ ಎಂದರು. </p>.<p>ಧಾರವಾಡ ಹಾಲು ಒಕ್ಕೂಟದ ಉಪಾಧ್ಯಕ್ಷ ಸುರೇಶ್ಚಂದ್ರ ಹೆಗಡೆ ಮಾತನಾಡಿದರು. ರಾಜದೀಪ್ ಟ್ರಸ್ಟ್ ಅಧ್ಯಕ್ಷ ದೀಪಕ ದೊಡ್ಡೂರು, ವಿಶ್ವಶಾಂತಿ ಸೇವಾ ಟ್ರಸ್ಟ್ ಪದಾಧಿಕಾರಿಗಳಾದ ರಮೇಶ ಹೆಗಡೆ, ಗಾಯತ್ರಿ ರಾಘವೇಂದ್ರ, ರಾಘವೇಂದ್ರ ಬೆಟ್ಟಕೊಪ್ಪ, ನಾರಾಯಣ ಭಾಗವತ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>