ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಸದ ಅನಂತಕುಮಾರ ಹೆಗಡೆ ಸ್ಪರ್ಧಿಸಿದರೆ ತ್ಯಾಗಕ್ಕೆ ಸಿದ್ಧ: ಶಾಸಕ ದಿನಕರ

Last Updated 17 ಮಾರ್ಚ್ 2023, 16:28 IST
ಅಕ್ಷರ ಗಾತ್ರ

ಕುಮಟಾ: ‘ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸಂಸದ ಅನಂತಕುಮಾರ ಹೆಗಡೆ ಬಿಜೆಪಿ ಅಭ್ಯರ್ಥಿಯಾಗಿ ಕುಮಟಾ ಕ್ಷೇತ್ರದಿಂದ ಕಣಕ್ಕೆ ಇಳಿಯುವುದಾದರೆ ಅವರ ಪರವಾಗಿ ಮೊದಲಿಗನಾಗಿ ಕೆಲಸ ಮಾಡಲು ಸಿದ್ಧ’ ಎಂದು ಕ್ಷೇತ್ರದ ಹಾಲಿ ಬಿಜೆಪಿ ಶಾಸಕ ದಿನಕರ ಶೆಟ್ಟಿ ಹೇಳಿದರು.

ಪಟ್ಟಣದಲ್ಲಿ ಶುಕ್ರವಾರ ಮಾಧ್ಯಮದವರ ಜತೆ ಮಾತನಾಡುವ ವೇಳೆ ಸಂಸದರು ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಹೀಗೆ ಪ್ರತಿಕ್ರಿಯಿಸಿದರು.

‘ಕಳೆದ ಚುನಾವಣೆಯಲ್ಲಿ ನನಗೆ ಬಿಜೆಪಿ ಟಿಕೆಟ್ ಕೊಡಿಸುವಲ್ಲಿ ಸಂಸರು ಶ್ರಮಿಸಿದ್ದರು. ಎರಡು ಬಾರಿ ಕ್ಷೇತ್ರದ ಶಾಸಕನಾಗಿ ಕೆಲಸ ಮಾಡಿದ್ದೇನೆ. ಅವರು ಸ್ಪರ್ಧಿಸುವ ಬಗ್ಗೆ ಈವರೆಗೆ ಯಾವುದೇ ಚರ್ಚೆ ನಡೆದಿಲ್ಲ’ ಎಂದೂ ಹೇಳಿದರು.

‘ಕುಮಟಾದಲ್ಲಿ ನಿರ್ಮಾಣವಾಗಲಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಇನ್ನೂ ಸರ್ಕಾರಿ ಆದೇಶ ಆಗದ ಕಾರಣ ಅದರ ಶಿಲಾನ್ಯಾಸ ನಡೆದಿಲ್ಲ. ಕೆಲ ಕಾನೂನು ತೊಡಕುಗಳೂ ಇದ್ದು, ಅವೆಲ್ಲ ಬಗೆಹರಿದು ಸರ್ಕಾರಿ ಆದೇಶ ಆದನಂತರ ಮುಖ್ಯಮಂತ್ರಿ ಶಿಲಾನ್ಯಾಸ ಮಾಡಬಹುದು ಅಥವಾ ಬೆಂಗಳೂರಿನಿಂದಲೇ ಸಾಂಕೇತಿಕ ಶಿಲಾನ್ಯಾಸ ಮಾಡುವ ಸಾಧ್ಯತೆಯೂ ಇದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT