<p><strong>ದಾಂಡೇಲಿ:</strong> ‘ಇಂದು ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿದ್ದಾರೆ. ಸ್ವಾವಲಂಬಿಯಾಗಿ, ಆರ್ಥಿಕವಾಗಿ ಸದೃಢರಾಗುತ್ತಿರುವುದು ಕಂಡು ಬರುತ್ತಿದೆ. ಮಹಿಳೆಯರು ಶೈಕ್ಷಣಿಕವಾಗಿ ಅಭಿವೃದ್ಧಿ ಸಾಧಿಸಿದಾಗ ಸದೃಢ ಸಮಾಜ ನಿರ್ಮಾಣ ಸಾಧ್ಯ. ಕಾನೂನು ಅರಿವೂ ಹೊಂದಬೇಕಿದೆ’ ಎಂದು ನ್ಯಾಯಾಧೀಶೆ ರೋಹಿಣಿ ಬಸಾಪುರ ಹೇಳಿದರು.</p>.<p>ನಗರದ ಸಿವಿಲ್ ಹಾಗೂ ಜೆ.ಎಂ.ಎಫ್ ಸಿ. ನ್ಯಾಯಾಲಯದಲ್ಲಿ ವಕೀಲರ ಸಂಘ ಹಾಗೂ ತಾಲ್ಲೂಕು ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ನಡೆದ ವಿಶ್ವ ಮಹಿಳಾ ದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಅಧ್ಯಕ್ಷತೆ ವಹಿಸಿದ್ದ ವಕೀಲರ ಸಂಘದ ಅಧ್ಯಕ್ಷ ಎಚ್.ಎಸ್. ಕುಲಕರ್ಣಿ ಮಾತನಾಡಿ, ‘ಮಹಿಳೆಯರನ್ನು ಸಮಾನವಾಗಿ ಹಾಗೂ ಗೌರವಯುತವಾಗಿ ನೋಡಿಕೊಳ್ಳಬೇಕೆಂಬುದೇ ಮಹಿಳಾ ದಿನಾಚರಣೆಯ ಉದ್ದೇಶವಾಗಿದೆ. ಇಡೀ ಸಮಾಜವನ್ನು ಬದಲಾಯಿಸಬಲ್ಲ ಶಕ್ತಿ ಮಹಿಳೆಯರಿಗೆ ಇದೆ’ ಎಂದು ಅವರು ಹೇಳಿದರು.</p>.<p>ಹಿರಿಯ ನ್ಯಾಯವಾದಿ ಎಸ್.ಎಂ. ದಬಗಾರ, ವಕೀಲರ ಸಂಘದ ಕಾರ್ಯದರ್ಶಿ ಐ.ಸಿ. ನಾಯ್ಕ, ಸಿವಿಲ್ ನ್ಯಾಯಾಲಯದ ಶಿರಸ್ತೇದಾರ ಮಹಾದೇವಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾಂಡೇಲಿ:</strong> ‘ಇಂದು ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿದ್ದಾರೆ. ಸ್ವಾವಲಂಬಿಯಾಗಿ, ಆರ್ಥಿಕವಾಗಿ ಸದೃಢರಾಗುತ್ತಿರುವುದು ಕಂಡು ಬರುತ್ತಿದೆ. ಮಹಿಳೆಯರು ಶೈಕ್ಷಣಿಕವಾಗಿ ಅಭಿವೃದ್ಧಿ ಸಾಧಿಸಿದಾಗ ಸದೃಢ ಸಮಾಜ ನಿರ್ಮಾಣ ಸಾಧ್ಯ. ಕಾನೂನು ಅರಿವೂ ಹೊಂದಬೇಕಿದೆ’ ಎಂದು ನ್ಯಾಯಾಧೀಶೆ ರೋಹಿಣಿ ಬಸಾಪುರ ಹೇಳಿದರು.</p>.<p>ನಗರದ ಸಿವಿಲ್ ಹಾಗೂ ಜೆ.ಎಂ.ಎಫ್ ಸಿ. ನ್ಯಾಯಾಲಯದಲ್ಲಿ ವಕೀಲರ ಸಂಘ ಹಾಗೂ ತಾಲ್ಲೂಕು ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ನಡೆದ ವಿಶ್ವ ಮಹಿಳಾ ದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಅಧ್ಯಕ್ಷತೆ ವಹಿಸಿದ್ದ ವಕೀಲರ ಸಂಘದ ಅಧ್ಯಕ್ಷ ಎಚ್.ಎಸ್. ಕುಲಕರ್ಣಿ ಮಾತನಾಡಿ, ‘ಮಹಿಳೆಯರನ್ನು ಸಮಾನವಾಗಿ ಹಾಗೂ ಗೌರವಯುತವಾಗಿ ನೋಡಿಕೊಳ್ಳಬೇಕೆಂಬುದೇ ಮಹಿಳಾ ದಿನಾಚರಣೆಯ ಉದ್ದೇಶವಾಗಿದೆ. ಇಡೀ ಸಮಾಜವನ್ನು ಬದಲಾಯಿಸಬಲ್ಲ ಶಕ್ತಿ ಮಹಿಳೆಯರಿಗೆ ಇದೆ’ ಎಂದು ಅವರು ಹೇಳಿದರು.</p>.<p>ಹಿರಿಯ ನ್ಯಾಯವಾದಿ ಎಸ್.ಎಂ. ದಬಗಾರ, ವಕೀಲರ ಸಂಘದ ಕಾರ್ಯದರ್ಶಿ ಐ.ಸಿ. ನಾಯ್ಕ, ಸಿವಿಲ್ ನ್ಯಾಯಾಲಯದ ಶಿರಸ್ತೇದಾರ ಮಹಾದೇವಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>