ಸ್ವಪ್ನಾ ಹೋಟೆಲ್ ಹಿಂಭಾಗದ ನಿವಾಸಿ ಲಕ್ಷ್ಮಿ ಗೋವಿಂದ ನಾಯಕ (65) ಮೃತರು. ‘ಹೆದ್ದಾರಿಯ ಅಂಚಿನ ಕಚ್ಚಾ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಕುಮಟಾ ಕಡೆಯಿಂದ ಕಾರವಾರದ ಕಡೆಗೆ ಬರುತ್ತಿದ್ದ ಟಾಟಾ ಏಸ್ ವಾಹನ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಅವರು ಪಕ್ಕದ ಚರಂಡಿಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟರು’ ಎಂದು ಪೊಲೀಸರು ತಿಳಿಸಿದ್ದಾರೆ.