<p><strong>ಕಾರವಾರ:</strong> ‘ಮಹಿಳಾ ಸಬಲೀಕರಣ ಕ್ಷೇತ್ರದಲ್ಲಿ ಸರ್ಕಾರದಷ್ಟೆ ಜವಾಬ್ದಾರಿಯನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ನಿಭಾಯಿಸಿದೆ. ಲಕ್ಷಾಂತರ ಕುಟುಂಬಗಳಿಗೆ ಸ್ವಾವಲಂಬಿ ಬದುಕಿಗೆ ದಾರಿ ಮಾಡಿಕೊಟ್ಟಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷೆ ರೂಪಾಲಿ ನಾಯ್ಕ ಹೇಳಿದರು.</p>.<p>ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಇಲ್ಲಿನ ಮಹಾದೇವ ದೇವಸ್ಥಾನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಗ್ರಾಮಗಳಲ್ಲಿ ಬದಲಾವಣೆ, ಜನರಲ್ಲಿ ಸಾಮಾಜಿಕ ಶಿಸ್ತು ಆರ್ಥಿಕ ಶಿಸ್ತು ಮಹಿಳೆಯ ಸ್ವಾತಂತ್ರ್ಯತ್ವವನ್ನು ಗ್ರಾಮಾಭಿವೃದ್ಧಿ ಯೋಜನೆ ಸಾಕಾರಗೊಳಿಸಿದೆ. ಅದರ ಜೊತೆಗೆ ಮಹಿಳೆಯರಿಗೆ ಉತ್ತಮ ಸಂಸ್ಕಾರ ಕಲಿಸಿದೆ’ ಎಂದರು.</p>.<p>ಕಾರ್ಯಕ್ರಮ ಉದ್ಘಾಟಿಸಿದ ಮಹಾದೇವ ದೇವಸ್ಥಾನದ ಪ್ರಧಾನ ಅರ್ಚಕ ಘನಶ್ಯಾಮ ಜೋಶಿ, ‘ಧಾರ್ಮಿಕ ನಂಬಿಕೆ ಉಳಿಸಿಕೊಳ್ಳುವ ಜೊತೆಗೆ ಜೀವನದಲ್ಲಿ ಏಳ್ಗೆ ಸಾಧಿಸಲು ಆರ್ಥಿಕ ಶಿಸ್ತು ಮುಖ್ಯ’ ಎಂದರು.</p>.<p>ರೋಷನಿ ಮಾಳ್ಸೇಕರ್ ಅಧ್ಯಕ್ಷತೆ ವಹಿಸಿದ್ದರು. ಧಾರ್ಮಿಕ ಸಭೆಗೆ ಮುನ್ನ ದೇವಸ್ಥಾನದಲ್ಲಿ ಸಾಮೂಹಿಕ ಸಹಸ್ರ ಬಿಲ್ವಾರ್ಚನೆ, ಮೃತ್ಯುಂಜಯ ಹೋಮ ಪೂಜೆ ನಡೆದವು. </p>.<p>ನಿವೃತ್ತ ಅಧಿಕಾರಿಗಳಾದ ಸತೀಶ್ ಗೋಸಾವಿ, ರಾಜೇಂದ್ರ, ಅರ್ಚಕ ರಾಮಕೃಷ್ಣ ಗಾಯಿತ್ರಿ ಭಟ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಕಾರವಾರ ಯೋಜನಾಧಿಕಾರಿ ಶಿವರಾಜ್ ಆಚಾರ್ಯ, ಇತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ:</strong> ‘ಮಹಿಳಾ ಸಬಲೀಕರಣ ಕ್ಷೇತ್ರದಲ್ಲಿ ಸರ್ಕಾರದಷ್ಟೆ ಜವಾಬ್ದಾರಿಯನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ನಿಭಾಯಿಸಿದೆ. ಲಕ್ಷಾಂತರ ಕುಟುಂಬಗಳಿಗೆ ಸ್ವಾವಲಂಬಿ ಬದುಕಿಗೆ ದಾರಿ ಮಾಡಿಕೊಟ್ಟಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷೆ ರೂಪಾಲಿ ನಾಯ್ಕ ಹೇಳಿದರು.</p>.<p>ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಇಲ್ಲಿನ ಮಹಾದೇವ ದೇವಸ್ಥಾನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಗ್ರಾಮಗಳಲ್ಲಿ ಬದಲಾವಣೆ, ಜನರಲ್ಲಿ ಸಾಮಾಜಿಕ ಶಿಸ್ತು ಆರ್ಥಿಕ ಶಿಸ್ತು ಮಹಿಳೆಯ ಸ್ವಾತಂತ್ರ್ಯತ್ವವನ್ನು ಗ್ರಾಮಾಭಿವೃದ್ಧಿ ಯೋಜನೆ ಸಾಕಾರಗೊಳಿಸಿದೆ. ಅದರ ಜೊತೆಗೆ ಮಹಿಳೆಯರಿಗೆ ಉತ್ತಮ ಸಂಸ್ಕಾರ ಕಲಿಸಿದೆ’ ಎಂದರು.</p>.<p>ಕಾರ್ಯಕ್ರಮ ಉದ್ಘಾಟಿಸಿದ ಮಹಾದೇವ ದೇವಸ್ಥಾನದ ಪ್ರಧಾನ ಅರ್ಚಕ ಘನಶ್ಯಾಮ ಜೋಶಿ, ‘ಧಾರ್ಮಿಕ ನಂಬಿಕೆ ಉಳಿಸಿಕೊಳ್ಳುವ ಜೊತೆಗೆ ಜೀವನದಲ್ಲಿ ಏಳ್ಗೆ ಸಾಧಿಸಲು ಆರ್ಥಿಕ ಶಿಸ್ತು ಮುಖ್ಯ’ ಎಂದರು.</p>.<p>ರೋಷನಿ ಮಾಳ್ಸೇಕರ್ ಅಧ್ಯಕ್ಷತೆ ವಹಿಸಿದ್ದರು. ಧಾರ್ಮಿಕ ಸಭೆಗೆ ಮುನ್ನ ದೇವಸ್ಥಾನದಲ್ಲಿ ಸಾಮೂಹಿಕ ಸಹಸ್ರ ಬಿಲ್ವಾರ್ಚನೆ, ಮೃತ್ಯುಂಜಯ ಹೋಮ ಪೂಜೆ ನಡೆದವು. </p>.<p>ನಿವೃತ್ತ ಅಧಿಕಾರಿಗಳಾದ ಸತೀಶ್ ಗೋಸಾವಿ, ರಾಜೇಂದ್ರ, ಅರ್ಚಕ ರಾಮಕೃಷ್ಣ ಗಾಯಿತ್ರಿ ಭಟ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಕಾರವಾರ ಯೋಜನಾಧಿಕಾರಿ ಶಿವರಾಜ್ ಆಚಾರ್ಯ, ಇತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>