ಮಹಾರಾಷ್ಟ್ರದ ಠಾಣೆಯಲ್ಲಿ ವಾಸವಾಗಿದ್ದ ಅವರ ಪತಿ ಎಂಟು ದಿನಗಳ ಹಿಂದೆ ಮೃತಪಟ್ಟಿದ್ದರು. ಯಲ್ಲಾಪುರದಲ್ಲಿರುವ ಮಗನ ಮನೆಗೆ ಜೂನ್ 25ರಂದು ಬಂದಿದ್ದ ಅವರನ್ನು ಐಸೋಲೇಷನ್ ವಾರ್ಡಿಗೆ ದಾಖಲಿಸಲಾಗಿತ್ತು. ಅವರ ಗಂಟಲು ದ್ರವದ ಪರೀಕ್ಷೆಯ ವರದಿ ಬರುವ ಮೊದಲೇ ಮೃತಪಟ್ಟಿದ್ದಾರೆ. ಮರಣದ ನಂತರ ಮತ್ತೊಮ್ಮೆ ಗಂಟಲು ದ್ರವವನ್ನು ತೆಗೆದು ಪರೀಕ್ಷೆಗೆ ಕಳುಹಿಸಲಾಗಿದೆ.