<p><strong>ಶಿರಸಿ: ‘</strong>ಮಹಿಳೆಯರ ಸುರಕ್ಷತೆಗಾಗಿ ಕಾನೂನಿನಲ್ಲಿ ಸಾಕಷ್ಟು ಅವಕಾಶಗಳಿದ್ದು, ವಿದ್ಯಾರ್ಥಿನಿಯರು ಯಾವುದೇ ಭಯವಿಲ್ಲದೆ ಸಂಕಷ್ಟದ ಸಮಯದಲ್ಲಿ ಪೊಲೀಸ್ ಇಲಾಖೆಯ ನೆರವು ಪಡೆಯಬೇಕು’ ಎಂದು ಶಿರಸಿ ಡಿವೈಎಸ್ಪಿ ಗೀತಾ ಪಾಟೀಲ ಹೇಳಿದರು.</p>.<p>ನಗರದ ಉಡುಪಿ ಎಕ್ಸಲೆನ್ಸ್ ಅಕಾಡೆಮಿ ಹಾಗೂ ಶಿರಸಿ ನಗರ ಪೊಲೀಸ್ ಠಾಣೆಯ ಸಹಯೋಗದೊಂದಿಗೆ ಗುರುವಾರ ಹಮ್ಮಿಕೊಳ್ಳಲಾಗಿದ್ದ ಮಹಿಳಾ ಸುರಕ್ಷತಾ ಜಾಗೃತಿ ಜಾಥಾದ ನಂತರ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಅವರು ಮಾತನಾಡಿದರು.</p>.<p>‘ಕಾನೂನಿನ ಬಗ್ಗೆ ಅರಿವಿದ್ದಾಗ ಮಾತ್ರ ಅಪರಾಧಗಳನ್ನು ತಡೆಯಲು ಸಾಧ್ಯ. ಠಾಣೆಯ ಕಾರ್ಯವೈಖರಿಯನ್ನು ತಿಳಿದುಕೊಳ್ಳುವುದು ಮತ್ತು ತುರ್ತು ಸಹಾಯವಾಣಿಗಳ ಬಳಕೆಯ ಬಗ್ಗೆ ಜಾಗೃತರಾಗಿರುವುದು ಇಂದಿನ ಕಾಲಘಟ್ಟದಲ್ಲಿ ಅತ್ಯಗತ್ಯ’ ಎಂದು ತಿಳಿಸಿದರು. </p>.<p>ಇದಕ್ಕೂ ಮುನ್ನ ಕಾಲೇಜಿನ ನೂರಾರು ವಿದ್ಯಾರ್ಥಿಗಳು ಮಹಿಳಾ ಸುರಕ್ಷತೆಯ ಘೋಷಣೆಗಳಿರುವ ಭಿತ್ತಿಫಲಕಗಳನ್ನು ಹಿಡಿದು ನಗರದ ಶಿವಾಜಿ ಚೌಕದಿಂದ ಐದುರಸ್ತೆ ಮಾರ್ಗವಾಗಿ ಪೊಲೀಸ್ ಠಾಣೆಯವರೆಗೆ ಬೃಹತ್ ಜಾಥಾ ನಡೆಸಿದರು. </p>.<p>ಶಿರಸಿ ನಗರ ಠಾಣೆಯ ಪಿಎಸ್ಐ ನಾಗಪ್ಪ ಬಿ., ಕಾಲೇಜಿನ ಪ್ರಾಚಾರ್ಯ ರೋಷನ ಗೌಡ ಹಾಗೂ ಕಾಲೇಜಿನ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಗೆ ಪೊಲೀಸ್ ಠಾಣೆಯ ಒಳಗಿನ ಚಟುವಟಿಕೆಗಳು ಹೇಗೆ ನಡೆಯುತ್ತವೆ ಎಂಬುದನ್ನು ಇದೇ ವೇಳೆ ಪ್ರತ್ಯಕ್ಷವಾಗಿ ತೋರಿಸಿಕೊಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ: ‘</strong>ಮಹಿಳೆಯರ ಸುರಕ್ಷತೆಗಾಗಿ ಕಾನೂನಿನಲ್ಲಿ ಸಾಕಷ್ಟು ಅವಕಾಶಗಳಿದ್ದು, ವಿದ್ಯಾರ್ಥಿನಿಯರು ಯಾವುದೇ ಭಯವಿಲ್ಲದೆ ಸಂಕಷ್ಟದ ಸಮಯದಲ್ಲಿ ಪೊಲೀಸ್ ಇಲಾಖೆಯ ನೆರವು ಪಡೆಯಬೇಕು’ ಎಂದು ಶಿರಸಿ ಡಿವೈಎಸ್ಪಿ ಗೀತಾ ಪಾಟೀಲ ಹೇಳಿದರು.</p>.<p>ನಗರದ ಉಡುಪಿ ಎಕ್ಸಲೆನ್ಸ್ ಅಕಾಡೆಮಿ ಹಾಗೂ ಶಿರಸಿ ನಗರ ಪೊಲೀಸ್ ಠಾಣೆಯ ಸಹಯೋಗದೊಂದಿಗೆ ಗುರುವಾರ ಹಮ್ಮಿಕೊಳ್ಳಲಾಗಿದ್ದ ಮಹಿಳಾ ಸುರಕ್ಷತಾ ಜಾಗೃತಿ ಜಾಥಾದ ನಂತರ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಅವರು ಮಾತನಾಡಿದರು.</p>.<p>‘ಕಾನೂನಿನ ಬಗ್ಗೆ ಅರಿವಿದ್ದಾಗ ಮಾತ್ರ ಅಪರಾಧಗಳನ್ನು ತಡೆಯಲು ಸಾಧ್ಯ. ಠಾಣೆಯ ಕಾರ್ಯವೈಖರಿಯನ್ನು ತಿಳಿದುಕೊಳ್ಳುವುದು ಮತ್ತು ತುರ್ತು ಸಹಾಯವಾಣಿಗಳ ಬಳಕೆಯ ಬಗ್ಗೆ ಜಾಗೃತರಾಗಿರುವುದು ಇಂದಿನ ಕಾಲಘಟ್ಟದಲ್ಲಿ ಅತ್ಯಗತ್ಯ’ ಎಂದು ತಿಳಿಸಿದರು. </p>.<p>ಇದಕ್ಕೂ ಮುನ್ನ ಕಾಲೇಜಿನ ನೂರಾರು ವಿದ್ಯಾರ್ಥಿಗಳು ಮಹಿಳಾ ಸುರಕ್ಷತೆಯ ಘೋಷಣೆಗಳಿರುವ ಭಿತ್ತಿಫಲಕಗಳನ್ನು ಹಿಡಿದು ನಗರದ ಶಿವಾಜಿ ಚೌಕದಿಂದ ಐದುರಸ್ತೆ ಮಾರ್ಗವಾಗಿ ಪೊಲೀಸ್ ಠಾಣೆಯವರೆಗೆ ಬೃಹತ್ ಜಾಥಾ ನಡೆಸಿದರು. </p>.<p>ಶಿರಸಿ ನಗರ ಠಾಣೆಯ ಪಿಎಸ್ಐ ನಾಗಪ್ಪ ಬಿ., ಕಾಲೇಜಿನ ಪ್ರಾಚಾರ್ಯ ರೋಷನ ಗೌಡ ಹಾಗೂ ಕಾಲೇಜಿನ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಗೆ ಪೊಲೀಸ್ ಠಾಣೆಯ ಒಳಗಿನ ಚಟುವಟಿಕೆಗಳು ಹೇಗೆ ನಡೆಯುತ್ತವೆ ಎಂಬುದನ್ನು ಇದೇ ವೇಳೆ ಪ್ರತ್ಯಕ್ಷವಾಗಿ ತೋರಿಸಿಕೊಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>