ಡಾ.ಕೃಷ್ಣಮೂರ್ತಿ ರಾಯ್ಸದ್ ವಿಶೇಷ ಉಪನ್ಯಾಸ ನೀಡಿ, ‘ತಂಬಾಕು ಸೇವನೆ ದುಷ್ಪರಿಣಾಮಗಳ ಬಗ್ಗೆ ಚಿತ್ರ ಮಂದಿರ, ಸಾಮಾಜಿಕ ಮಾಧ್ಯಮಗಳ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ. ಆದರೆ, ಇದರ ಫಲಿತಾಂಶ ದೊರೆಯುತ್ತಿಲ್ಲ. ಮಹಿಳೆಯರು, ಮಕ್ಕಳೆಂಬ ತಾರತಮ್ಯವಿಲ್ಲದೆ ಎಲ್ಲರೂ ತಂಬಾಕು ಸೇವನೆಗೆ ಬಲಿಯಾಗುತ್ತಿದ್ದಾರೆ’ ಎಂದರು. ನ್ಯಾಯಾಧೀಶರಾದ ನರೇಂದ್ರ ಬಿ.ಆರ್, ದಿವ್ಯಶ್ರೀ ಸಿ.ಎಂ, ಶಂಕರ ರೆಡ್ಡಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವಿನಾಯಕ ಭಟ್ಟ ಇದ್ದರು. ಸಭಾ ಕಾರ್ಯಕ್ರಮಕ್ಕೂ ಮುನ್ನ ನರ್ಸಿಂಗ್ ವಿದ್ಯಾರ್ಥಿಗಳು, ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ ಸಿಬ್ಬಂದಿ, ಸಾರ್ವಜನಿಕರು ತಂಬಾಕು ದುಷ್ಪರಿಣಾಮದ ಅರಿವು ಜಾಥಾ ನಡೆಸಿದರು.