ನಗರದ ಸುಬ್ರಹ್ಮಣ್ಯ ದೇವಾಲಯಕ್ಕೆ ಸಹಸ್ರಾರು ಭಕ್ತರು ಭೇಟಿ ನೀಡಿ ಹಣ್ಣು–ಕಾಯಿ ಅರ್ಪಿಸಿದರು. ಉರಗ ತಜ್ಞ ಪ್ರಶಾಂತ ಹುಲೇಕಲ್ ಅವರು ಪ್ರತಿವರ್ಷದಂತೆ ಈ ವರ್ಷ ಸಹ ನಿಜ ನಾಗರಕ್ಕೆ ಪೂಜೆಸಿದರು. ಕಾಡಿನಿಂದ ಹಿಡಿದು ತಂದಿದ್ದ ನಾಗರಹಾವಿಗೆ ಹೂ ಹಾಕಿ, ಆರತಿ ಬೆಳಗಿದರು. ಅವರ ಜೊತೆಗೆ ಕುಟುಂಬದ ಸದಸ್ಯರು, ಪುಟಾಣಿ ಮಕ್ಕಳು ಸಹ ಹೆದರದೇ ನಿಜ ನಾಗರವನ್ನು ಭಕ್ತಿಯಿಂದ ನಮಿಸಿದರು. ನಂತರ ಹಾವನ್ನು ಕಾಡಿಗೆ ಬಿಡಲಾಯಿತು.