<p>ಕಾರವಾರ: ‘ಸ್ಪರ್ಧಾತ್ಮಕ ಯುಗದಲ್ಲಿ ಪುಟಾಣಿಗಳಿಗೆ ಪೂರ್ವ ಪ್ರಾಥಮಿಕ ಶಿಕ್ಷಣವು ಅತ್ಯಮೂಲ್ಯವಾಗಿದ್ದು, ಬಾಲ್ಯದಲ್ಲಿ ಮಕ್ಕಳ ಪ್ರತಿಭೆಗಳನ್ನು ಗುರುತಿಸಲು ಸಹಕಾರಿಯಾಗುತ್ತದೆ’ ಎಂದು ಸಾಹಿತಿ ಅರವಿಂದ ಕರ್ಕಿಕೋಡಿ ಹೇಳಿದರು.</p>.<p>ಈಚೆಗೆ ಗೋಕರ್ಣ ಸಮೀಪದ ಸಣ್ಣಬಿಜ್ಜೂರಿನಲ್ಲಿರುವ ಲಿಟ್ಲ್ ಚಾಂಪ್ಸ್ ಕಿಂಡರ್ ಗಾರ್ಟನ್ ಪೂರ್ವ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಗುಣಮಟ್ಟದ ಇಂಗ್ಲೀಷ್ ಶಿಕ್ಷಣವು ಇಂದಿನ ಅವಶ್ಯಕತೆಯಾಗಿದ್ದು, ಅದರೊಂದಿಗೆ ಮಾತೃಭಾಷೆ ಕನ್ನಡವನ್ನು ಅಚ್ಚುಕಟ್ಟಾಗಿ ಬರೆಯಲು, ಮಾತನಾಡಲು, ದಿನಪತ್ರಿಕೆ ಓದಲು ಮಕ್ಕಳಿಗೆ ಕಲಿಸುವುದರಿಂದ ಸಾಹಿತ್ಯದ ಅಭಿರುಚಿ ಹೆಚ್ಚಲು ಕಾರಣವಾಗುತ್ತದೆ’ ಎಂದರು.</p>.<p>ಕಾಂಗ್ರೆಸ್ ಮುಖಂಡ ಪ್ರದೀಪ ನಾಯಕ, ‘ಮಕ್ಕಳನ್ನು ಎಂಜಿನಿಯರ್ ಮತ್ತು ವೈದ್ಯರನ್ನಾಗಿಸುವ ಧಾವಂತದಲ್ಲಿ ಪಾಲಕರು ಅವರ ಬಾಲ್ಯವನ್ನು ಕಸಿದುಕೊಳ್ಳುತ್ತಿದ್ದಾರೆಂದು’ ಎಂದರು.</p>.<p>ಕೆಡಿಸಿಸಿ ಬ್ಯಾಂಕ್ ನಿರ್ದೇಶಕ ಮೋಹನ್ ನಾಯಕ, ಗೋಕರ್ಣ ಬಿಜೆಪಿ ಮಂಡಲ ಅಧ್ಯಕ್ಷ ಗಣೇಶ ಪಂಡಿತ, ವರಪ್ರದಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ ಕುಮುದಾ ನಾಗರಾಜ ನಾಯ್ಕ, ಶಾಲೆಯ ಮುಖ್ಯ ಶಿಕ್ಷಕಿ ಪ್ರಜಿಶಾ ನಾಯರ ಪಾಲ್ಗೊಂಡಿದ್ದರು.</p>.<p>ರಾಜ್ಯಪ್ರಶಸ್ತಿ ಪುರಸ್ಕೃತ ಶಿಕ್ಷಕಿ ಕಲ್ಪನಾ ನಾಯಕ, ಸಿಬಿಎಸ್ಇಯಲ್ಲಿ ರ್ಯಾಂಕ್ ಪಡೆದ ವಿದ್ಯಾರ್ಥಿ ಸಮ್ವಿತ್ ಗೋಕರ್ಣ ಅವರನ್ನು ಸನ್ಮಾನಿಸಲಾಯಿತು.<br /><br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಾರವಾರ: ‘ಸ್ಪರ್ಧಾತ್ಮಕ ಯುಗದಲ್ಲಿ ಪುಟಾಣಿಗಳಿಗೆ ಪೂರ್ವ ಪ್ರಾಥಮಿಕ ಶಿಕ್ಷಣವು ಅತ್ಯಮೂಲ್ಯವಾಗಿದ್ದು, ಬಾಲ್ಯದಲ್ಲಿ ಮಕ್ಕಳ ಪ್ರತಿಭೆಗಳನ್ನು ಗುರುತಿಸಲು ಸಹಕಾರಿಯಾಗುತ್ತದೆ’ ಎಂದು ಸಾಹಿತಿ ಅರವಿಂದ ಕರ್ಕಿಕೋಡಿ ಹೇಳಿದರು.</p>.<p>ಈಚೆಗೆ ಗೋಕರ್ಣ ಸಮೀಪದ ಸಣ್ಣಬಿಜ್ಜೂರಿನಲ್ಲಿರುವ ಲಿಟ್ಲ್ ಚಾಂಪ್ಸ್ ಕಿಂಡರ್ ಗಾರ್ಟನ್ ಪೂರ್ವ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಗುಣಮಟ್ಟದ ಇಂಗ್ಲೀಷ್ ಶಿಕ್ಷಣವು ಇಂದಿನ ಅವಶ್ಯಕತೆಯಾಗಿದ್ದು, ಅದರೊಂದಿಗೆ ಮಾತೃಭಾಷೆ ಕನ್ನಡವನ್ನು ಅಚ್ಚುಕಟ್ಟಾಗಿ ಬರೆಯಲು, ಮಾತನಾಡಲು, ದಿನಪತ್ರಿಕೆ ಓದಲು ಮಕ್ಕಳಿಗೆ ಕಲಿಸುವುದರಿಂದ ಸಾಹಿತ್ಯದ ಅಭಿರುಚಿ ಹೆಚ್ಚಲು ಕಾರಣವಾಗುತ್ತದೆ’ ಎಂದರು.</p>.<p>ಕಾಂಗ್ರೆಸ್ ಮುಖಂಡ ಪ್ರದೀಪ ನಾಯಕ, ‘ಮಕ್ಕಳನ್ನು ಎಂಜಿನಿಯರ್ ಮತ್ತು ವೈದ್ಯರನ್ನಾಗಿಸುವ ಧಾವಂತದಲ್ಲಿ ಪಾಲಕರು ಅವರ ಬಾಲ್ಯವನ್ನು ಕಸಿದುಕೊಳ್ಳುತ್ತಿದ್ದಾರೆಂದು’ ಎಂದರು.</p>.<p>ಕೆಡಿಸಿಸಿ ಬ್ಯಾಂಕ್ ನಿರ್ದೇಶಕ ಮೋಹನ್ ನಾಯಕ, ಗೋಕರ್ಣ ಬಿಜೆಪಿ ಮಂಡಲ ಅಧ್ಯಕ್ಷ ಗಣೇಶ ಪಂಡಿತ, ವರಪ್ರದಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ ಕುಮುದಾ ನಾಗರಾಜ ನಾಯ್ಕ, ಶಾಲೆಯ ಮುಖ್ಯ ಶಿಕ್ಷಕಿ ಪ್ರಜಿಶಾ ನಾಯರ ಪಾಲ್ಗೊಂಡಿದ್ದರು.</p>.<p>ರಾಜ್ಯಪ್ರಶಸ್ತಿ ಪುರಸ್ಕೃತ ಶಿಕ್ಷಕಿ ಕಲ್ಪನಾ ನಾಯಕ, ಸಿಬಿಎಸ್ಇಯಲ್ಲಿ ರ್ಯಾಂಕ್ ಪಡೆದ ವಿದ್ಯಾರ್ಥಿ ಸಮ್ವಿತ್ ಗೋಕರ್ಣ ಅವರನ್ನು ಸನ್ಮಾನಿಸಲಾಯಿತು.<br /><br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>